AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಬರಲು ರೆಡಿ ಆಯ್ತು ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’; ಎಲ್ಲಿ, ಯಾವಾಗ?

Kothalavadi on OTT: ಪುಷ್ಪಾ ಅರುಣ್ ಕುಮಾರ್ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರವು ಆಗಸ್ಟ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾತ್ತು. ಈಗ ಸಿನಿಮಾ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿಯ ನಿರ್ಮಾಣದ ಈ ಚಿತ್ರವು ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಾಗಲಿದೆ. ಪೃಥ್ವಿ ಅಂಬರ್ ಮುಖ್ಯ ಪಾತ್ರದಲ್ಲಿದ್ದಾರೆ ಮತ್ತು ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರದ ಹೈಲೈಟ್ ಆಗಿದೆ.

ಒಟಿಟಿಯಲ್ಲಿ ಬರಲು ರೆಡಿ ಆಯ್ತು ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’; ಎಲ್ಲಿ, ಯಾವಾಗ?
ಕೊತ್ತಲವಾಡಿ
ರಾಜೇಶ್ ದುಗ್ಗುಮನೆ
|

Updated on: Sep 04, 2025 | 2:54 PM

Share

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್​ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ (Kottalavadi) ಸಿನಿಮಾ ಆಗಸ್ಟ್ 1ರಂದು ಚಿತ್ರಮಂದಿರದಲ್ಲಿ ರಿಲೀಸ್ ಆಯಿತು. ನಿರ್ಮಾಣದಲ್ಲಿ ಪುಷ್ಪಾ ಅವರಿಗೆ ಇದು ಮೊದಲ ಅನುಭವ. ಈಗ ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಲು ಸಿದ್ಧವಾಗಿದೆ. ಈ ಸಿನಿಮಾನ ಒಟಿಟಿಯಲ್ಲಿ ಪ್ರೇಕ್ಷಕರು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಪುಷ್ಪಾ ಅವರು ‘ಪಿಎ ಪ್ರೊಡಕ್ಷನ್ಸ್ ಲಾಂಛನ’ ಆರಂಭಿಸಿದ್ದಾರೆ. ಈ ನಿರ್ಮಾಣ ಸಂಶ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡೋ ಗುರಿಯನ್ನು ಅವರು ಹೊಂದಿದ್ದಾರೆ. ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಮೂಡಿ ಬಂದ ಮೊದಲ ಚಿತ್ರ ‘ಕೊತ್ತಲವಾಡಿ’ ಸಿನಿಮಾ ಈಗ ಒಟಿಟಿಯಲ್ಲಿ ಬರಲು ರೆಡಿ ಆಗಿದೆ. ಸೆಪ್ಟೆಂಬರ್ 5ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್​ನಲ್ಲಿ ವೀಕ್ಷಿಸಬಹುದಾಗಿದೆ.

‘ಕೊತ್ತಲವಾಡಿ’ ಥಿಯೇಟರ್​​ಗಳಲ್ಲಿ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿರಲಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ನೋಡಬಹುದಾಗಿದೆ. ಸದ್ಯ ಸೆಪ್ಟೆಂಬರ್ 5ರಂದು ಕನ್ನಡದಲ್ಲಿ ಮಾತ್ರ ಪ್ರದರ್ಶನವಾಗಲಿದ್ದು, ನಂತರದ ದಿನಗಳಲ್ಲಿ ಮಿಕ್ಕ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ
Image
ಶಂಕರ್​ ನಾಗ್​​ಗೆ ಅಣ್ಣ ಮಾತ್ರ ಅಲ್ಲ, ಸಾಕು ತಂದೆಯೂ ಆಗಿದ್ದ ಅನಂತ್ ನಾಗ್
Image
‘ಕಾಂತಾರ: ಚಾಪ್ಟರ್​ 1’ ಎದುರು ರಿಲೀಸ್ ಆಗಲಿದೆ ದೊಡ್ಡ ಹೀರೋ ಸಿನಿಮಾ
Image
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

‘ಕೊತ್ತಲವಾಡಿ’ ಸಿನಿಮಾದಲ್ಲಿ ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾವ್ಯ ಶೈವ, ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಮಾನಸಿ ಸುಧೀರ್ ಮೊದಲಾದವರು ನಟಿಸಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕೆ ಇದೆ. ಗೋಪಾಲ್ ದೇಶಪಾಂಡೆ ನಟನೆ ಹಾಗೂ ರಘು ನಿಡುವಳ್ಳಿ ಸಂಭಾಷಣೆ ಚಿತ್ರದ ಹೈಲೈಟ್​. ಕಾರ್ತಿಕ್ ಎಸ್ ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ,‌ ವಿಕಾಸ್ ವಸಿಷ್ಠ ಸಂಗೀತ ಸಂಯೋಜನೆ ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇದೆ.

ಇದನ್ನೂ ಓದಿ: ‘ಕೊತ್ತಲವಾಡಿ’ ಸಿನಿಮಾದಲ್ಲಿ ಬಳಕೆ ಆಗಿದೆ ಯಶ್ ಖರೀದಿಸಿದ್ದ ಮೊದಲ ಬೈಕ್

ಸದ್ಯ ಪುಷ್ಪಾ ಅವರು ತಮ್ಮ ಬ್ಯಾನರ್ ಮೂಲಕ ಸಿನಿಮಾ ಹಂಚಿಕೆಗೂ ಇಳಿದಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾನ ಕರ್ನಾಟಕದಲ್ಲಿ ಅವರು ಹಂಚಿಕೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ