AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತದಿನ ಕಂಡ ‘ಕೃಷ್ಣಂ ಪ್ರಣಯ ಸಖಿ’ ಈಗ ಒಟಿಟಿಗೆ

Krishnam Pranaya Sakhi: ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಶತದಿನೋತ್ಸವ ಆಚರಣೆ ಮಾಡಿದೆ. ಈ ಸಿನಿಮಾ ಶೀಘ್ರದಲ್ಲಿಯೇ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಯಾವ ಒಟಿಟಿ? ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ.

ಶತದಿನ ಕಂಡ ‘ಕೃಷ್ಣಂ ಪ್ರಣಯ ಸಖಿ’ ಈಗ ಒಟಿಟಿಗೆ
ಮಂಜುನಾಥ ಸಿ.
|

Updated on:Nov 23, 2024 | 4:17 PM

Share

ಕನ್ನಡ ಸಿನಿಮಾಗಳು ಶತದಿನ ಆಚರಿಸುವುದು ಅಪರೂಪದಲ್ಲಿ ಅಪರೂಪ ಆಗಿಹೋಗಿದೆ. ಮೊದಲೆಲ್ಲ 50-100 ಚಿತ್ರಮಂದಿರಗಳಲ್ಲಿ ಸಿನಿಮಾಗಳೂ ಶತದಿನ ಆಚರಣೆ ಮಾಡಿಕೊಳ್ಳುತ್ತಿದ್ದವು. ಆದರೆ ಈಗ ಸಿನಿಮಾ ಒಂದು ನಾಲ್ಕು ವಾರ ಓಡಿತೆಂದರೆ ಅದೇ ಸಾಧನೆ. ಅದರಲ್ಲೂ ಕನ್ನಡ ಸಿನಿಮಾಗಳು ನಾಲ್ಕು ವಾರ ಓಡಿಬಿಟ್ಟರೆ ಮುಗಿಯಿತು ಕತೆ. ಸಿನಿಮಾ ಬ್ಲಾಕ್ ಬಸ್ಟರ್ ಎಂಬಂತೆ ಕುಣಿದಾಡುತ್ತದೆ ಚಿತ್ರತಂಡ. ಇಂಥಹಾ ಪರಿಸ್ಥಿತಿಯಲ್ಲಿ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬರೋಬ್ಬರಿ ನೂರು ದಿನ ಪ್ರದರ್ಶನ ಕಂಡಿದೆ. ನೂರು ದಿನಗಳ ಪ್ರದರ್ಶನದ ಬಳಿಕ ಈಗ ಒಟಿಟಿಗೆ ಬರುತ್ತಿದೆ.

ಸಿನಿಮಾಗಳು ಬಿಡುಗಡೆ ಆದ ಒಂದೇ ವಾರಕ್ಕೆ ಒಟಿಟಿಗೆ ಬರುತ್ತಿರುವ ಈ ಸಮಯದಲ್ಲಿ ಚಿತ್ರಮಂದಿರಗಳಲ್ಲಿ ಶತದಿನ ಪೂರೈಸಿ ಒಟಿಟಿಗೆ ಬರುತ್ತಿದೆ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ. ಗಣೇಶ್ ನಟನೆಯ ಈ ಹಾಸ್ಯ ಮಿಶ್ರಿತ ಪ್ರೇಮಕತೆಯುಳ್ಳ ಸಿನಿಮಾ ಇದೇ ವರ್ಷ ಆಗಸ್ಟ್ 15 ರಂದು ತೆರೆಗೆ ಬಂದಿತ್ತು. ಕೌಟುಂಬಿಕ ಪ್ರೇಕ್ಷಕರನ್ನು, ಯುವಕ-ಯುವತಿಯರನ್ನು ಚಿತ್ರಮಂದಿರಕ್ಕೆ ಸೆಳೆದಿದ್ದ ಈ ಸಿನಿಮಾ ಬಿಡುಗಡೆ ಆದ ಕೆಲವು ವಾರಗಳ ಕಾಲ ಹಲವು ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿತ್ತು. ಈ ಸಿನಿಮಾ ಈಗ ಕರ್ನಾಟಕದ ನಾಲ್ಕು ಚಿತ್ರಮಂದಿರಗಳಲ್ಲಿ ಶತದಿನ ಪೂರೈಸಿದೆ. ಹಲವು ಭಾರಿ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾಗಳಿಗೂ ಆಗದ ಕಾರ್ಯವನ್ನು ಮಾಡಿ ತೋರಿಸಿದೆ.

ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

ಶತದಿನದ ಬಳಿಕ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಒಟಿಟಿಗೆ ಬರುತ್ತಿದೆ. ಸನ್ ನೆಕ್ಸ್ಟ್ ಒಟಿಟಿಯಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಿಡುಗಡೆ ಆಗಲಿದೆ. ನವೆಂಬರ್ 29ಕ್ಕೆ ಈ ಸಿನಿಮಾ ಸನ್ ನೆಕ್ಟ್ಸ್ ಒಟಿಟಿಯಲ್ಲಿ ಪ್ರಸಾರವಾಗಲಿದೆ. ಅಮೆಜಾನ್, ನೆಟ್​ಫ್ಲಿಕ್ಸ್​, ಜೀ5 ಅಂಥಹಾ ದೈತ್ಯ ಒಟಿಟಿಗಳನ್ನು ಬದಿಗೆ ಸರಿಸಿ ಸನ್ ನೆಕ್ಟ್ಸ್​ನಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ಗಣೇಶ್ ಜೊತೆಗೆ ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ಅವಿನಾಶ್ ಇನ್ನಿತರರು ನಟಿಸಿದ್ದಾರೆ. ಸಿನಿಮಾವನ್ನು ಶ್ರೀನಿವಾಸ್ ರಾಜು ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಹಾಡುಗಳು ಸೂಪರ್ ಹಿಟ್ ಆಗಿವೆ. ಪ್ರಶಾಂತ್ ಜಿ ರುದ್ರಪ್ಪ ಅವರು ಸಿನಿಮಾದ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Sat, 23 November 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ