AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾವನ್ನು ಹಿಂದಿಕ್ಕಿದ ಸಣ್ಣ ಬಜೆಟ್ ಸಿನಿಮಾ ‘ಲಾಪತಾ ಲೇಡೀಸ್’

ಬಾಕ್ಸ್ ಆಫೀಸ್​ನಲ್ಲಿ ಬ್ಲಾಕ್ ಬಸ್ಟರ್ ಎನಿಸಿಕೊಂಡ ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾವನ್ನು ನಾಲ್ಕು ಕೋಟಿ ಬಜೆಟ್​ನ ಸಣ್ಣ ಸಿನಿಮಾ ಹಿಂದಿಕ್ಕಿದೆ.

‘ಅನಿಮಲ್’ ಸಿನಿಮಾವನ್ನು ಹಿಂದಿಕ್ಕಿದ ಸಣ್ಣ ಬಜೆಟ್ ಸಿನಿಮಾ ‘ಲಾಪತಾ ಲೇಡೀಸ್’
ಮಂಜುನಾಥ ಸಿ.
|

Updated on: May 24, 2024 | 2:34 PM

Share

ಬಜೆಟ್ ದೊಡ್ಡದಿರಲಿ, ಸಣ್ಣದಿರಲಿ, ಸ್ಟಾರ್ ನಟರಿರಲಿ, ಹೊಸಬರ ಸಿನಿಮಾ ಆಗಿರಲಿ, ಕಂಟೆಂಟ್ ಚೆನ್ನಾಗಿದ್ದರೆ ಒಂದಲ್ಲ ಒಂದು ವೇದಿಕೆಯಲ್ಲಿ ಸಿನಿಮಾ ಜನರನ್ನು ತಲುಪುತ್ತದೆ ಹಿಟ್ ಎನಿಸಿಕೊಂಡೇ ತೀರುತ್ತದೆ. ಇದಕ್ಕೆ ತಾಜಾ ಉದಾಹರಣೆ ಹಿಂದಿಯ ‘ಲಾಪತಾ ಲೇಡೀಸ್’. ಕೇವಲ ನಾಲ್ಕು ಕೋಟಿ ಬಜೆಟ್​ನಲ್ಲಿ ನಿರ್ಮಿಸಲಾಗಿರುವ ಈ ಸಿನಿಮಾ ನೂರಾರು ಕೋಟಿ ಬಜೆಟ್​ನ ಸ್ಟಾರ್ ನಟರ ಸಿನಿಮಾ ಆಗಿರುವ ‘ಅನಿಮಲ್’ (Animal) ಅನ್ನು ಸಹ ಹಿಂದಿಕ್ಕಿದೆ. ಯಾವುದೇ ಸ್ಟಾರ್ ನಟರಿಲ್ಲದ, ಸರಳವಾದ ಕತೆಯನ್ನಷ್ಟೆ ಹೊಂದಿದ್ದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಬ್ಲಾಕ್ ಬಸ್ಟರ್ ಸಿನಿಮಾ ‘ಅನಿಮಲ್’ ಅನ್ನು ಹಿಂದಿಕ್ಕಿದೆ, ಬಾಕ್ಸ್ ಆಫೀಸ್​ನಲ್ಲಲ್ಲ ಬದಲಿಗೆ ಒಟಿಟಿಯಲ್ಲಿ!

ಮಾರ್ಚ್ 1ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ‘ಲಾಪತಾ ಲೇಡೀಸ್’ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿತು. ಆದರೆ ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕ ಭಾರಿ ಯಶಸ್ಸು ಗಳಿಸಿಕೊಂಡಿತು. ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ‘ಲಾಪತಾ ಲೇಡೀಸ್’ ಸಿನಿಮಾವನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸಿದ್ದಾರೆ. ಈ ಮುಂಚೆ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದ್ದ ‘ಅನಿಮಲ್’ ಸಿನಿಮಾದ ದಾಖಲೆಯನ್ನು ಮುರಿದಿದೆ ‘ಲಾಪತಾ ಲೇಡೀಸ್’.

ಆಮಿರ್ ಖಾನ್ ನಿರ್ಮಾಣ ಮಾಡಿರುವ ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಒಂದು ತಿಂಗಳಿಗೆ 13.8 ಮಿಲಿಯನ್ ಅಂದರೆ 1.38 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರದಲ್ಲಿ ಬ್ಲಾಕ್ ಬಸ್ಟರ್ ಆಗಿದ್ದ ‘ಅನಿಮಲ್’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ 1.36 ಕೋಟಿ ವೀಕ್ಷಣೆ ಕಂಡಿತ್ತು. ಇದೀಗ ‘ಅನಿಮಲ್’ ದಾಖಲೆಯನ್ನು ಪುಡಿಗಟ್ಟಿದೆ ‘ಲಾಪತಾ ಲೇಡೀಸ್’ ಸಿನಿಮಾ. ಈ ಖುಷಿಯ ವಿಷಯವನ್ನು ಸಿನಿಮಾದ ನಿರ್ದೇಶಕಿ ಕಿರಣ್ ರಾವ್ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಪ್ರೇಕ್ಷಕರಿಂದ ಭೇಷ್​ ಎನಿಸಿಕೊಂಡ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್​ ರಾವ್​

ವಿಶೇಷವೆಂದರೆ, ‘ಲಾಪತಾ ಲೇಡೀಸ್’ ಸಿನಿಮಾದ ಬಿಡುಗಡೆ ಸಮಯದಲ್ಲಿ ನಿರ್ದೇಶಕಿ ಕಿರಣ್ ರಾವ್, ‘ಅನಿಮಲ್’ ಸಿನಿಮಾವನ್ನು ಟೀಕಿಸಿ ಮಾತನಾಡಿದ್ದರು. ‘ಅನಿಮಲ್’ ಸಿನಿಮಾ ಸ್ತ್ರೀ ವಿರೋಧಿ, ಪುರುಷ ಅಹಂಕಾರವನ್ನು ಮೆರೆಸುವ ಸಿನಿಮಾ ಎಂದು ಜರಿದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ‘ಅನಿಮಲ್’ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ‘ಆಮಿರ್ ಖಾನ್​ರ ‘ಏ ಕ್ಯಾ ಬೋಲ್ತಿ ತೂ’ ಹಾಡು ಪ್ರಸ್ತಾಪಿಸಿ ಕೆಣಕಿದ್ದರು. ಈಗ ಕಿರಣ್ ರಾವ್​ರ ಸಿನಿಮಾ, ಅವರು ವಿರೋಧಿಸಿದ್ದ ‘ಅನಿಮಲ್’ ಸಿನಿಮಾವನ್ನು ಹಿಂದಿಕ್ಕಿ, ಹೆಚ್ಚು ವೀಕ್ಷಣೆ ಕಂಡಿದೆ.

‘ಲಾಪತಾ ಲೇಡೀಸ್’ ಕಳೆದು ಹೋಗುವ ಇಬ್ಬರು ವಧುಗಳ ಬಗೆಗಿನ ಕತೆ. ವಧು ಕಳೆದುಹೋಗಿರುವ ಕತೆಯಲ್ಲಿ ಸ್ತ್ರೀ ಸ್ವಾತಂತ್ರ್ಯ ಸೇರಿದಂತೆ ಹಲವು ಸೂಕ್ಷ್ಮ ವಿಷಯಗಳನ್ನು ನಿರ್ದೇಶಕಿ ಕಿರಣ್ ರಾವ್ ಹೇಳಿದ್ದಾರೆ. ಸಿನಿಮಾದಲ್ಲಿ ನಿತಾಂಶಿ ಘೋಯಲ್, ಪ್ರತಿಭಾ ರಂತಾ, ಸ್ಪರ್ಷ್ ಶ್ರೀವತ್ಸ, ಚಯ್ಯಾ ಕದಮ್ ಅಂಥಹಾ ಹೊಸ ನಟರು ನಟಿಸಿದ್ದಾರೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ನಟ ರವಿ ಕಿಶನ್ ನಟಿಸಿದ್ದಾರೆ. ಸಿನಿಮಾಕ್ಕೆ ಆಮಿರ್ ಖಾನ್ ಬಂಡವಾಳ ಹೂಡಿದ್ದಾರೆ. ನಾಲ್ಕು ಕೋಟಿ ಬಜೆಟ್​ನ ಈ ಸಿನಿಮಾ ಚಿತ್ರಮಂದಿರದಲ್ಲಿ 21 ಕೋಟಿ ಗಳಿಸಿತ್ತು. ಈಗ ನೆಟ್​ಫ್ಲಿಕ್ಸ್​ ಮೂಲಕ ದೊಡ್ಡ ಸಂಖ್ಯೆಯ ಸಿನಿಮಾ ಪ್ರೇಕ್ಷಕರನ್ನು ಸೆಳೆಯುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?