ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ

ವಿಮರ್ಶಕರಿಂದ ಮೆಚ್ಚುಗೆ ಪಡೆದ ‘ಲಾಪತಾ ಲೇಡೀಸ್​’ ಸಿನಿಮಾ ಈಗ ಒಟಿಟಿಯಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ಈ ಸಿನಿಮಾ ನಂಬರ್​ 1 ಸ್ಥಾನ ಪಡೆದುಕೊಂಡಿದೆ. ಆಮಿರ್​ ಖಾನ್​ ಅವರ ಮಾಜಿ ಪತ್ನಿ ಕಿರಣ್​ ರಾವ್​ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದ್ದು, ಬಹುತೇಕ ಹೊಸ ಕಲಾವಿದರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ
‘ಲಾಪತಾ ಲೇಡೀಸ್​’ ಪೋಸ್ಟರ್​, ಕಿರಣ್​ ರಾವ್​, ಆಮಿರ್​ ಖಾನ್​
Follow us
|

Updated on: Apr 29, 2024 | 10:15 PM

ಆಮಿರ್​ ಖಾನ್​ ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ (Laapataa Ladies) ಸಿನಿಮಾಗೆ ಚಿತ್ರಮಂದಿರದಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಆಗಲಿಲ್ಲ. ಆದರೆ ಸಿನಿಮಾ ನೋಡಿದ ಪ್ರತಿಯೊಬ್ಬರಿಂದಲೂ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ‘ಲಾಪತಾ ಲೇಡೀಸ್​’ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಕಾಲಿಟ್ಟಿದೆ. ನೆಟ್​ಫ್ಲಿಕ್ಸ್​ನಲ್ಲಿ (Netflix) ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ಒಟಿಟಿ ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಪರಿಣಾಮವಾಗಿ ನಂಬರ್​ ಟ್ರೆಂಡಿಂಗ್​ನಲ್ಲಿದೆ ‘ಲಾಪತಾ ಲೇಡೀಸ್​’ ಸಿನಿಮಾ.

ಹಲವು ವರ್ಷಗಳ ಬಳಿಕ ಕಿರಣ್​ ರಾವ್​ ಅವರು ನಿರ್ದೇಶನ ಮಾಡಿದ ಸಿನಿಮಾ ‘ಲಾಪತಾ ಲೇಡೀಸ್​’. ಈ ಚಿತ್ರದಲ್ಲಿ ಸ್ಪರ್ಶ್​ ಶ್ರೀವಾಸ್ತವ್​, ನಿತಾನ್ಷಿ ಗೋಯಲ್​, ಪ್ರತಿಭಾ ರಂಟಾ, ಛಾಯಾ ಕದಂ, ರವಿ ಕಿಶನ್​ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಸಿನಿಮಾದ ಕಥೆ ಎಲ್ಲರಿಗೂ ಇಷ್ಟ ಆಗುತ್ತಿದೆ. ಎಲ್ಲ ಕಲಾವಿದರ ಅಭಿನಯಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ.

‘ಲಾಪತಾ ಲೇಡೀಸ್​’ ಸಿನಿಮಾದಲ್ಲಿ ಒಂದು ಭಾವನಾತ್ಮಕವಾದ ಕಹಾನಿ ಇದೆ. ಸಿನಿಮಾದಲ್ಲಿನ ಅನೇಕ ಸನ್ನಿವೇಶಗಳು ಪ್ರೇಕ್ಷಕರಿಗೆ ಕನೆಕ್ಟ್​ ಆಗುತ್ತಿವೆ. ಇದೊಂದು ಹೃದಯಸ್ಪರ್ಶಿ ಸಿನಿಮಾ ಎಂದು ನೆಟ್ಟಿಗರು ಹೊಗಳುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಚಿತ್ರದ ಗುಣಗಾನ ಮಾಡಲಾಗುತ್ತಿದೆ. ತಮ್ಮಿಷ್ಟದ ಸೀನ್​ ಯಾವುದು ಎಂಬುದನ್ನು ಪ್ರೇಕ್ಷಕರು ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ‘ಲಾಪತಾ ಲೇಡೀಸ್​’ ಖ್ಯಾತಿಯ 16ರ ಪ್ರಾಯದ ನಟಿ​ಗೆ 1 ಕೋಟಿ ಫಾಲೋವರ್ಸ್​

ಮಹಿಳಾಪ್ರದಾನ ಕಥಾಹಂದರ ಇರುವ ‘ಲಾಪತಾ ಲೇಡೀಸ್​’ ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಗೆಲ್ಲುವ ಸಾಮರ್ಥ್ಯ ಇದೆ ಎಂದು ಕೂಡ ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಳ್ಳಬಾರದಾಗಿತ್ತು ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಮಾರ್ಚ್​ 1ರಂದು ಥಿಯೇಟರ್​ನಲ್ಲಿ ‘ಲಾಪತಾ ಲೇಡೀಸ್​’ ತೆರೆಕಂಡಿತ್ತು. ಏಪ್ರಿಲ್​ 26ರಿಂದ ನೆಟ್​ಫ್ಲಿಕ್ಸ್​ನಲ್ಲಿ ಈ ಸಿನಿಮಾ ಪ್ರಸಾರ ಆರಂಭಿಸಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು