AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಕುರಿತು ಬರಲಿದೆ ವೆಬ್ ಸಿರೀಸ್

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ನಿಧನದ ಬಳಿಕ ಲಾರೆನ್ಸ್ ಬಿಷ್ಣೋಯ್ ಬಗ್ಗೆ ಹತ್ತು ಹಲವು ಸುದ್ದಿಗಳು ಕೇಳಿಬರುತ್ತಿವೆ. ಈ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಹೊತ್ತುಕೊಂಡಿದ್ದಾರೆ. ಸಲ್ಮಾನ್​ ಖಾನ್​ ಮೇಲೂ ಇದೇ ಗ್ಯಾಂಗ್ ಕಣ್ಣಿಟ್ಟಿದೆ. ಭಾರಿ ಕುಖ್ಯಾತಿ ಗಳಿಸಿರುವ ಲಾರೆನ್ಸ್ ಬಿಷ್ಣೋಯ್ ಜೀವನದ ಮೇಲೆ ವೆಬ್ ಸಿರೀಸ್ ಮಾಡಲು ಸಿದ್ಧತೆ ನಡೆದಿದೆ.

ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಕುರಿತು ಬರಲಿದೆ ವೆಬ್ ಸಿರೀಸ್
ಲಾರೆನ್ಸ್​ ಬಿಷ್ಣೋಯ್
Follow us
ಮದನ್​ ಕುಮಾರ್​
|

Updated on: Oct 18, 2024 | 6:16 PM

ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್​ ಕುಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೃಷ್ಣ ಮೃಗ ಹತ್ಯೆ ಮಾಡಿದ ಸಲ್ಮಾನ್​ ಖಾನ್ ಮೇಲೆ ಲಾರೆನ್ಸ್ ಹಗೆ ಸಾಧಿಸುತ್ತಿದ್ದಾನೆ. 2014ರಿಂದಲೂ ಆತ ಜೈಲಿನಲ್ಲೇ ಇದ್ದಾನೆ. ಹಾಗಿದ್ದರೂ ಕೂಡ ಜೈಲಿನಿಂದಲೇ ಅನೇಕ ಕೃತ್ಯಗಳನ್ನು ನಡೆಸುತ್ತಿದ್ದಾನೆ. ಭೂಗತ ಲೋಕದ ಚಟುವಟಿಕೆಗಳನ್ನು ಆತ ನಿಯಂತ್ರಣ ಮಾಡುತ್ತಿದ್ದಾನೆ. ಸಲ್ಮಾನ್​ ಖಾನ್​ಗೆ ಆಪ್ತವಾಗಿದ್ದ ಬಾಬಾ ಸಿದ್ಧಿಕಿಯ ಹತ್ಯೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರೇ ಮಾಡಿದ್ದಾರೆ ಎನ್ನಲಾಗಿದೆ. ಲಾರೆನ್ಸ್ ಜೀವನದ ಕಹಾನಿಯನ್ನು ಇಟ್ಟುಕೊಂಡು ವೆಬ್ ಸಿರೀಸ್​ ಮಾಡಲಾಗುತ್ತಿದೆ.

ವರದಿಗಳ ಪ್ರಕಾರ, ‘ಜಾನಿ ಫೈರ್​ಫಾಕ್ಸ್​ ಫಿಲ್ಮ್ ಪ್ರೊಡಕ್ಷನ್’ ಸಂಸ್ಥೆಯು ಲಾರೆನ್ಸ್​ ಬಿಷ್ಣೋಯ್ ಜೀವನದ ಬಗ್ಗೆ ವೆಬ್ ಸರಣಿ ಮಾಡಲಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ. ‘ಲಾರೆನ್ಸ್ – ಎ ಗ್ಯಾಂಗ್​ಸ್ಟರ್​ ಸ್ಟೋರಿ’ ಎಂದು ಈ ವೆಬ್ ಸರಣಿಗೆ ಶೀರ್ಷಿಕೆ ಇಡಲಾಗಿದೆ. ಇಂಡಿಯನ್ ಮೋಷನ್ ಪಿಕ್ಚರ್ಸ್​ ಅಸೋಸಿಯೇಷನ್​ ಕಡೆಯಿಂದ ಈ ಟೈಟಲ್​ಗೆ ಅನುಮತಿ ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ರಾ?

ಲಾರೆನ್ಸ್ ಬಿಷ್ಣೋಯ್ ಯಾರು? ಆತ ಇಷ್ಟು ದೊಡ್ಡ ಗ್ಯಾಂಗ್​ಸ್ಟರ್​ ಆಗಿ ಬೆಳೆದಿದ್ದು ಹೇಗೆ? ಆತನ ಬದುಕಿನಲ್ಲಿ ನಡೆದ ಸಿನಿಮೀಯ ಘಟನೆಗಳು ಏನು ಎಂಬ ಹಲವು ವಿಚಾರಗಳನ್ನು ಈ ವೆಬ್ ಸಿರೀಸ್​ನಲ್ಲಿ ತೋರಿಸುವ ಸಾಧ್ಯತೆ ಇದೆ. ಸಲ್ಮಾನ್ ಖಾನ್​ ಮೇಲೆ ಸೇಡು ತೀರಿಸಿಕೊಳ್ಳಲು ಲಾರೆನ್ಸ್​ ಪ್ರಯತ್ನಿಸುತ್ತಿದ್ದಾನೆ. ಆ ಕಾರಣದಿಂದಲೇ ಆತನಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಗುತ್ತಿದೆ.

ಇದನ್ನೂ ಓದಿ: ‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

‘ಲಾರೆನ್ಸ್ – ಎ ಗ್ಯಾಂಗ್​ಸ್ಟರ್​ ಸ್ಟೋರಿ’ ವೆಬ್ ಸರಣಿಯಲ್ಲಿ ಲಾರೆನ್ಸ್​ ಬಿಷ್ಣೋಯ್ ಪಾತ್ರವನ್ನು ಯಾರು ಮಾಡುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಇತ್ತೀಚೆಗೆ ರಾಮ್ ಗೋಪಾಲ್ ವರ್ಮಾ ಅವರು ಲಾರೆನ್ಸ್ ಬಿಷ್ಣೋಯ್ ಬಗ್ಗೆ ಟ್ವೀಟ್ ಮಾಡಿದ್ದರು. ಆತ ಜೈಲಿನಲ್ಲಿ ಇದ್ದುಕೊಂಡೇ ಸ್ಟಾರ್​ ನಟನ ಹತ್ಯೆಗೆ ಸ್ಕೆಚ್ ಹಾಕುತ್ತಾನೆ ಎಂಬ ಕಥೆ ರೋಷಕವಾಗಿದೆ ಎಂದು ಅವರು ‘ಎಕ್ಸ್​’ ಖಾತೆಯಲ್ಲಿ ಬರೆದುಕೊಂಡಿದ್ದರು. ಅಷ್ಟರಲ್ಲಾಗಲೇ ವೆಬ್ ಸರಣಿಗೆ ತಯಾರಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್