AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನೆಟ್​ವರ್ಕ್​ ಸಿಇಒ ಬರುಣ್​ ದಾಸ್​ ಜತೆ ವಿಜಯ್​ ದೇವರಕೊಂಡ ವಿಶೇಷ ಸಂದರ್ಶನ: ‘ನ್ಯೂಸ್​ 9 ಪ್ಲಸ್​’ನಲ್ಲಿ ವೀಕ್ಷಿಸಿ

Vijay Deverakonda | News 9 Plus OTT: ‘ಟಿವಿ9 ನೆಟ್​ವರ್ಕ್’​ ಸಿಇಒ ಬರುಣ್​ ದಾಸ್​ ಅವರು ಸೌತ್​ ಸೆನ್ಸೇಷನ್​ ಸ್ಟಾರ್​ ವಿಜಯ್​ ದೇವರಕೊಂಡ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ‘ನ್ಯೂಸ್​ 9 ಪ್ಲಸ್​’ ಒಟಿಟಿಯಲ್ಲಿ ಇದು ಲಭ್ಯವಿದೆ.

ಟಿವಿ9 ನೆಟ್​ವರ್ಕ್​ ಸಿಇಒ ಬರುಣ್​ ದಾಸ್​ ಜತೆ ವಿಜಯ್​ ದೇವರಕೊಂಡ ವಿಶೇಷ ಸಂದರ್ಶನ: ‘ನ್ಯೂಸ್​ 9 ಪ್ಲಸ್​’ನಲ್ಲಿ ವೀಕ್ಷಿಸಿ
ಬರುಣ್​ ದಾಸ್​ - ವಿಜಯ್​ ದೇವರಕೊಂಡ
TV9 Web
| Edited By: |

Updated on: Aug 26, 2022 | 1:08 PM

Share

ಚಿತ್ರರಂಗದಲ್ಲಿ ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಅಪಾರ ಸಾಧನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ. ಅವರು ನಟಿಸಿದ ‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಅದ್ದೂರಿಯಾಗಿ ಬಿಡುಗಡೆ ಆಗಿದೆ. ಈ ಪ್ರಯುಕ್ತ ಅವರು ಒಂದು ವಿಶೇಷ ಸಂದರ್ಶನ (Vijay Deverakonda Interview) ನೀಡಿದ್ದಾರೆ. ‘ಟಿವಿ9 ನೆಟ್​ವರ್ಕ್​’ ಸಿಇಒ ಬರುಣ್​ ದಾಸ್​ ಅವರು ನಡೆಸಿದ ಈ ಸಂದರ್ಶನದಲ್ಲಿ ವಿಜಯ್​ ದೇವರಕೊಂಡ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇದರ ನಾಲ್ಕು ಎಪಿಸೋಡ್​ಗಳು ‘ನ್ಯೂಸ್​ 9 ಪ್ಲಸ್​’ (News 9 Plus) ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿವೆ. ಸಿನಿಮಾ, ಫಿಲಾಸಫಿ​, ಜೀವನ​ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ದೇವರಕೊಂಡ ಮಾತನಾಡಿದ್ದಾರೆ. ಅದೆಲ್ಲವನ್ನೂ ತಿಳಿಯಲು ‘ನ್ಯೂಸ್​ 9 ಪ್ಲಸ್​’ ಆ್ಯಪ್​ ಡೌನ್​ಲೋಡ್​ ಮಾಡಿಕೊಂಡು ಸಂದರ್ಶನ ವೀಕ್ಷಿಸಿ.

ವಿಜಯ್​ ದೇವರಕೊಂಡ ಅವರು ವೃತ್ತಿಜೀವನ ಆರಂಭಿಸಿದ್ದು ತೆಲುಗು ಚಿತ್ರರಂಗದಿಂದ. ಆದರೆ ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಾ ಬಂದ ಅವರು ಇಂದು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ಹಿಂದಿ ಚಿತ್ರರಂಗದಲ್ಲೂ ಸ್ಟಾರ್​ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇಡೀ ಭಾರತದಲ್ಲಿ ಅವರ ಹೆಸರು ಶೈನ್​ ಆಗುತ್ತಿದೆ. ಈ ಕುರಿತು ಕೇಳಿದ ಪ್ರಶ್ನೆಗಳಿಗೆ ವಿಜಯ್​ ದೇವರಕೊಂಡ ಉತ್ತರಿಸಿದ್ದಾರೆ.

ಇದನ್ನೂ ಓದಿ
Image
‘ಲೈಗರ್’ ಸಿನಿಮಾದ ಖಳನಟ ವಿಶ್​ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ
Image
Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​

‘ಲೈಗರ್​’ ಸಿನಿಮಾದ ಹಿಂದೆ ಸಾಕಷ್ಟು ಪರಿಶ್ರಮ ಇದೆ. ಮೂರು ವರ್ಷಗಳ ಕಾಲ ಸತತವಾಗಿ ವಿಜಯ್​ ದೇವರಕೊಂಡ ಅವರು ಈ ಚಿತ್ರಕ್ಕಾಗಿ ಶ್ರಮಿಸಿದ್ದಾರೆ. ಬಾಡಿ ಟ್ರಾನ್ಸ್​ಫಾರ್ಮೇಷನ್​ ಮಾಡಿಕೊಂಡಿದ್ದಾರೆ. ಬಾಕ್ಸಿಂಗ್​, ಮಿಕ್ಸ್ಡ್​ ಮಾರ್ಷಲ್ ಆರ್ಟ್ಸ್​ ಕಲಿತು ಕ್ಯಾಮೆರಾ ಎದುರಿಸಿದ್ದಾರೆ. ನಟನೆಯಲ್ಲೂ ಮಾಗಿದ್ದಾರೆ. ಅದ್ದೂರಿಯಾಗಿ ಚಿತ್ರೀಕರಣ ಮಾಡಲಾಗಿದೆ. ವಿದೇಶದಲ್ಲೂ ಹಲವು ದೃಶ್ಯಗಳನ್ನು ಚಿತ್ರಿಸಲಾಗಿದೆ. ಈ ಎಲ್ಲ ಪ್ರಕ್ರಿಯೆಗಳ ಹಿಂದಿರುವ ಅನುಭವ ಅಪಾರ. ಆ ಬಗ್ಗೆ ವಿಜಯ್​ ದೇವರಕೊಂಡ ಮನಸಾರೆ ಮಾತನಾಡಿದ್ದಾರೆ.

ಚಿತ್ರರಂಗ ಎಂಬುದೊಂದು ಸಾಗರ. ಸಾಧನೆಗೆ ಅಂತ್ಯವೇ ಇಲ್ಲ. ವಿಜಯ್​ ದೇವರಕೊಂಡ ಸಾಗಬೇಕಿರುವ ಹಾದಿ ಇನ್ನೂ ದೊಡ್ಡದಿದೆ. ಮುಂದಿನ ಯೋಜನೆಗಳ ಕುರಿತಾಗಿಯೂ ಅವರು ಬೆಳಕು ಚೆಲ್ಲಿದ್ದಾರೆ. ವಿಜಯ್​ ದೇವರಕೊಂಡ ಅಭಿಮಾನಿಗಳು ನೋಡಿ ತಿಳಿಯಲೇಬೇಕಾದ ಅನೇಕ ಸಂಗತಿಗಳ ಬಗ್ಗೆ ಈ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಒಟ್ಟು ನಾಲ್ಕು ಎಪಿಸೋಡ್​ಗಳಲ್ಲಿ ಸಂದರ್ಶನ ಲಭ್ಯವಾಗಿದೆ.

ಲೈಗರ್​ ಸಿನಿಮಾ ಕುರಿತು:

ಈ ಚಿತ್ರದಲ್ಲಿ ವಿಜಯ್​ ದೇವರಕೊಂಡ ಅವರಿಗೆ ನಾಯಕಿಯಾಗಿ ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಲೆಜೆಂಡರಿ ಬಾಕ್ಸರ್​ ಮೈಕ್ ಟೈಸನ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ರಮ್ಯಾ ಕೃಷ್ಣ ಮತ್ತು ವಿಜಯ್​ ದೇವರಕೊಂಡ ಅವರು ತಾಯಿ-ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಚಿತ್ರದ ತೆರೆಹಿಂದೆ ಕೆಲಸ ಮಾಡಿದ್ದಾರೆ. ನಿರ್ಮಾಣದಲ್ಲಿ ಪುರಿ ಜಗನ್ನಾಥ್​, ಚಾರ್ಮಿ ಕೌರ್​, ಕರಣ್​ ಜೋಹರ್​ ಕೈ ಜೋಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು