AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರ್ತಿದೆ ಸಮಂತಾ ನಟನೆಯ ಸೂಪರ್ ಹಿಟ್ ಸಿನಿಮಾ ‘ಮಾ ಇಂಟಿ ಬಂಗಾರಂ’

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿ ದಾಖಲೆ ಬರೆದಿರುವ ಸಮಂತಾ ರುತ್ ಪ್ರಭು ನಟನೆಯ 'ಮಾ ಇಂಟಿ ಬಂಗಾರಂ' ಸಿನಿಮಾ ಒಟಿಟಿ ಬಿಡುಗಡೆಗೆ ಸಿದ್ಧವಾಗಿದೆ. ಮಹಿಳಾ ಪ್ರಧಾನ ತೆಲುಗು ಚಿತ್ರಗಳಲ್ಲಿಯೇ ಅತಿ ಹೆಚ್ಚು ಗಳಿಕೆ ಕಂಡಿರುವ ಈ ಆಕ್ಷನ್ ಸಿನಿಮಾ ಜುಲೈ 17 ರಿಂದ ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆಗಲಿದ್ದು, ಸಿನಿಮಾ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಒಟಿಟಿಗೆ ಬರ್ತಿದೆ ಸಮಂತಾ ನಟನೆಯ ಸೂಪರ್ ಹಿಟ್ ಸಿನಿಮಾ ‘ಮಾ ಇಂಟಿ ಬಂಗಾರಂ’
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Jul 14, 2026 | 6:55 AM

Share

ಮುಖ್ಯಾಂಶಗಳು

  • ಸಮಂತಾ ನಟನೆಯ ಆಕ್ಷನ್ ಸಿನಿಮಾ ಹೊಸ ಇತಿಹಾಸ
  • ಜಿಯೋ ಹಾಟ್‌ಸ್ಟಾರ್‌ನಲ್ಲಿ 'ಮಾ ಇಂಟಿ ಬಂಗಾರಂ'
  • ರಹಸ್ಯ ಹಂತಕಿಯ ರೋಚಕ ಕಥೆ

ಎಷ್ಟೇ ದೊಡ್ಡ ಯಶಸ್ಸು ಕಂಡರೂ ಒಟಿಟಿಗೆ ಬರೋದಕ್ಕೆ ಕೆಲವು ಸಿನಿಮಾಗಳು ವಿಳಂಬ ಮಾಡೋದಿಲ್ಲ. ಅದಕ್ಕೆ ಈಗ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೊಸ ಸೇರ್ಪಡೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಸಮಂತಾ (Samantha) ವೃತ್ತಿಜೀವನದಲ್ಲೇ ಇದು ಅತಿ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಮಹಿಳಾ ಪ್ರಧಾನ ತೆಲುಗು ಸಿನಿಮಾಗಳಲ್ಲೇ ಇದು ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರ ಈಗ ಒಟಿಟಿಗೆ ಕಾಲಿಡಲು ರೆಡಿ ಆಗಿದೆ.

‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಭಾರೀ ಮೆಚ್ಚುಗೆ ಸಿಕ್ಕಿತು. ತೆಲುಗಿನಲ್ಲಿ ಮಹಿಳಾ ಪ್ರಧಾನ ಸಿನಿಮಾ ಒಂದು 100 ಕೋಟಿ ರೂಪಾಯಿ ಸೇರಿದ್ದು ಇದೇ ಮೊದಲು ಅನ್ನೋದು ವಿಶೇಷ. ಈಗ ಚಿತ್ರದ ಒಟಿಟಿ ದಿನಾಂಕ ಲಾಕ್ ಆಗಿದೆ.

‘ಮ ಇಂಟಿ ಬಂಗಾರಂ’ ಚಿತ್ರವನ್ನು ಜಿಯೋ ಹಾಟ್‌ಸ್ಟಾರ್ ಒಟಿಟಿ ಮೂಲಕ ಜುಲೈ 17ರಿಂದ ವೀಕ್ಷಣೆ ಮಾಡಬಹುದಾಗಿದೆ. ಈಗ ಕೇವಲ ತೆಲುಗು ಆವೃತ್ತಿ ಮಾತ್ರ ಸ್ಟ್ರೀಮಿಂಗ್ ಆಗಲಿದೆ. ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇನ್ನು ಘೋಷಿಸಿಲ್ಲ.

ಚಿತ್ರದ ಕಥೆ ಮತ್ತು ತಾರಾಗಣ

ಸಮಂತಾ ಈ ಚಿತ್ರದಲ್ಲಿ ಸ್ವರ್ಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಆಕೆ ತನ್ನ ಹಳೆಯ ಜೀವನವನ್ನು ಮರೆತು ನೆಮ್ಮದಿಯ ಸಂಸಾರ ನಡೆಸಲು ಬಯಸುತ್ತಾಳೆ. ಆಕೆ ಭೂತಕಾಲದಲ್ಲಿ ಓರ್ವ ಪ್ರೋಫೇಷನಲ್ಕಿಲ್ಲರ್ ಆಗಿರುತ್ತಾಳೆ. ಹಳೆಯ ಶತ್ರುಗಳು ಮತ್ತೆ ಎದುರಾದಾಗ ಕುಟುಂಬವನ್ನು ರಕ್ಷಿಸಲು ಆಕೆ ಮತ್ತೆ ಅಖಾಡಕ್ಕೆ ಇಳಿಯುತ್ತಾಳೆ.

ಇದನ್ನೂ ಓದಿ: ಅಡೆತಡೆ ಮೀರಿ 100 ಕೋಟಿ ಕ್ಲಬ್ ಸೇರಿದ ಸಮಂತಾ ನಟನೆಯ ಮಾ ಇಂಟಿ ಬಂಗಾರಂ 

ಈ ಚಿತ್ರವನ್ನು ಬಿ. ವಿ. ನಂದಿನಿ ರೆಡ್ಡಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಗುಲ್ಶನ್ ದೇವಯ್ಯ, ದಿಗಂತ್ ಮಂಚಾಲೆ ಮತ್ತು ಗೌತಮಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾ ಥಿಯೇಟರ್​​ನಲ್ಲಿ ಯಶಸ್ವಿಯಾಗಿ ರನ್ ಮಾಡುವಾಗಲೇ ಒಟಿಟಿಗೆ ಬರುತ್ತಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್