AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್​ ಕಿಲ್ಲರ್​ ಆಗ್ತಾರಾ ಮಾಧುರಿ ದೀಕ್ಷಿತ್? ಬದಲಾಗಲಿದೆ ಸ್ಟಾರ್​ ನಟಿಯ ಇಮೇಜ್​

ಮಾಧುರಿ ದೀಕ್ಷಿತ್​ ಅವರು ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ್ದಾರೆ. ಇಂದಿಗೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹೊಸ ರೀತಿಯ ಪಾತ್ರಗಳನ್ನು ಮಾಡಲು ಅವರು ಹಂಬಲಿಸುತ್ತಿದ್ದಾರೆ. ಹೊಸ ವೆಬ್​ ಸರಣಿಯಲ್ಲಿ ಮಾಧುರಿ ದೀಕ್ಷಿತ್​ ಅವರು ಸ್ವಲ್ಪ ನೆಗೆಟಿವ್​ ಶೇಡ್​ ಇರುವ ಪಾತ್ರವನ್ನು ನಿಭಾಯಿಸುತ್ತಾರೆ ಎಂಬ ಬಗ್ಗೆ ಸುದ್ದಿ ಆಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ..

ಸೀರಿಯಲ್​ ಕಿಲ್ಲರ್​ ಆಗ್ತಾರಾ ಮಾಧುರಿ ದೀಕ್ಷಿತ್? ಬದಲಾಗಲಿದೆ ಸ್ಟಾರ್​ ನಟಿಯ ಇಮೇಜ್​
ಮಾಧುರಿ ದೀಕ್ಷಿತ್​
ಮದನ್​ ಕುಮಾರ್​
|

Updated on: Aug 05, 2024 | 4:11 PM

Share

ಖ್ಯಾತ ನಟಿ ಮಾಧುರಿ ದೀಕ್ಷಿತ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಈಗಾಗಲೇ ಅವರು ಅನೇಕ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ಹೊಸದೊಂದು ಪ್ರಯೋಗ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಮಾಧುರಿ ದೀಕ್ಷಿತ್​ ಅವರು ಇದೇ ಮೊದಲ ಬಾರಿಗೆ ಸೀರಿಯಲ್​ ಕಿಲ್ಲರ್​ ಪಾತ್ರ ಮಾಡಲಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ನಟಿಯ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಮಾಧುರಿ ದೀಕ್ಷಿತ್​ ಅವರು ಹೊಸ ಸಾಧ್ಯತೆಗಳನ್ನು ಹುಡುಕುತ್ತಿದ್ದಾರೆ.

ಅನೇಕ ವರ್ಷಗಳ ಕಾಲ ಸಿನಿಮಾಗಳಲ್ಲಿ ಮಿಂಚಿದ ಮಾಧುರಿ ದೀಕ್ಷಿತ್ ಅವರು ನಂತರ ಟಿವಿ ರಿಯಾಲಿಟಿ ಶೋಗಳಲ್ಲಿ ಜಡ್ಜ್​ ಆಗಿ ಜನರಿಗೆ ಹತ್ತಿರ ಆದರು. ಬಳಿಕ ಅವರು ಒಟಿಟಿಯಲ್ಲೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡರು. ‘ದಿ ಫೇಮ್​ ಗೇಮ್​’ ವೆಬ್​ ಸರಣಿಯಲ್ಲಿ ನಟಿಸುವ ಮೂಲಕ ಮಾಧುರಿ ದೀಕ್ಷಿತ್​ ಅವರು ಯಶಸ್ಸು ಕಂಡರು. ಈಗ ಹೊಸದೊಂದು ವೆಬ್​ ಸಿರೀಸ್​ನಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

‘ಮಿಸೆಸ್​ ದೇಶಪಾಂಡೆ’ ಎಂಬ ವೆಬ್​ ಸಿರೀಸ್​ನಲ್ಲಿ ಮಾಧುರಿ ದೀಕ್ಷಿತ್​ ಅವರಿಗೆ ಸರಣಿ ಹಂತಕಿಯ ಪಾತ್ರ ಇರಲಿದೆ. ಪೊಲೀಸರು ಇನ್ನೋರ್ವ ಸೀರಿಯಲ್​ ಕಿಲ್ಲರ್​ನ ಪತ್ತೆ ಹಚ್ಚಲು ಮಾಧುರಿ ದೀಕ್ಷಿತ್​ ಪಾತ್ರದ ಸಹಾಯ ಪಡೆಯುತ್ತಾರೆ. ಈ ರೀತಿಯ ಒಂದು ಡಿಫರೆಂಟ್​ ಕಥೆ ಇದರಲ್ಲಿ ಇರಲಿದೆ. ಇದು ಫ್ರೆಂಚ್​ ವೆಬ್​ ಸರಣಿಯ ರಿಮೇಕ್​ ಆಗಿರಲಿದೆ ಎಂದು ಕೂಡ ಹೇಳಲಾಗಿದೆ. ಆದರೆ ತಂಡದಿಂದ ಯಾರೊಬ್ಬರೂ ಈ ಕುರಿತು ಬಾಯಿ ಬಿಟ್ಟಿಲ್ಲ.

ಇದನ್ನೂ ಓದಿ: ಭಯೋತ್ಪಾದನೆ ನಂಟು ಇರುವ ಪಾಕ್ ​ವ್ಯಕ್ತಿ ಜತೆ ಮಾಧುರಿ ದೀಕ್ಷಿತ್​ ಕಾರ್ಯಕ್ರಮ? ಜನರ ಆಕ್ರೋಶ

ಖ್ಯಾತ ನಿರ್ದೇಶಕ ನಾಗೇಶ್​ ಕುಕುನೂರ್ ಅವರು ‘ಮಿಸೆಸ್​ ದೇಶಪಾಂಡೆ’ ವೆಬ್​ ಸರಣಿಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಒಂದು ವೇಳೆ ಮಾಧುರಿ ದೀಕ್ಷಿತ್​ ಅವರು ಇದರಲ್ಲಿ ನಟಿಸಿದ್ದೇ ಹೌದಾದರೆ ಅವರ ಇಮೇಜ್​ ಬದಲಾಗಲಿದೆ. 57ರ ಪ್ರಾಯದ ಮಾಧುರಿ ದೀಕ್ಷಿತ್​ ಈಗಲೂ ಸಖತ್​ ಬೇಡಿಕೆ ಹೊಂದಿದ್ದಾರೆ. ಫ್ಯಾಮಿಲಿ ಮತ್ತು ಬಣ್ಣದ ಲೋಕ ಎರಡನ್ನೂ ಅವರು ಸಮನಾಗಿ ನಿಭಾಯಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರು ಆ್ಯಕ್ಟೀವ್​ ಆಗಿದ್ದಾರೆ. ಬಾಲಿವುಡ್​ಗೆ ಕಾಲಿಟ್ಟು 40 ವರ್ಷ ಕಳೆದಿರುವ ಮಾಧುರಿ ಅವರು ಅಮೆರಿಕಕ್ಕೆ ತೆರಳಿ ಸೆಲೆಬ್ರೇಟ್​ ಮಾಡಲು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು