AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗಕಾಮಿ ಪಾತ್ರದಲ್ಲಿ ಮಾಧುರಿ ದೀಕ್ಷಿತ್​? ಹೊರಬಿತ್ತು ಫ್ಯಾನ್ಸ್​ ಅಚ್ಚರಿಪಡುವಂತಹ ಬ್ರೇಕಿಂಗ್​ ನ್ಯೂಸ್​

Madhuri Dixit | Maja Maa: ಮಾಧುರಿ ದೀಕ್ಷಿತ್​ ಅವರು ಚಾಲೆಂಜಿಂಗ್​ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಮಜಾ ಮಾ’ ಸಿನಿಮಾದಲ್ಲಿ ಅವರಿಗೆ ಅಂಥದ್ದೊಂದು ಸವಾಲಿನ ಪಾತ್ರ ಸಿಕ್ಕಿದೆ.

ಸಲಿಂಗಕಾಮಿ ಪಾತ್ರದಲ್ಲಿ ಮಾಧುರಿ ದೀಕ್ಷಿತ್​? ಹೊರಬಿತ್ತು ಫ್ಯಾನ್ಸ್​ ಅಚ್ಚರಿಪಡುವಂತಹ ಬ್ರೇಕಿಂಗ್​ ನ್ಯೂಸ್​
‘ಮಜಾ ಮಾ’ ಪೋಸ್ಟರ್​​
Follow us
TV9 Web
| Updated By: ಮದನ್​ ಕುಮಾರ್​

Updated on:May 14, 2022 | 3:39 PM

ನಟಿ ಮಾಧುರಿ ದೀಕ್ಷಿತ್​ (Madhuri Dixit) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಬಗೆಯ ಪಾತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇಂದಿಗೂ ಮಾಧುರಿ ದೀಕ್ಷಿತ್​ ಅವರ ಚಾರ್ಮ್​ ಕಡಿಮೆ ಆಗಿಲ್ಲ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದಾರೆ. ರಿಯಾಲಿಟಿ ಶೋಗಳ ಜಡ್ಜ್​ ಆಗಿ ಕೆಲಸ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ಒಟಿಟಿ ಪ್ಲಾಟ್​ಫಾರ್ಮ್​ನಲ್ಲೂ ಅವರು ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಹೊಸ ಹೊಸ ವೆಬ್​ಸಿರೀಸ್ ಮತ್ತು ಸಿನಿಮಾ​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಮಾಧುರಿ ದೀಕ್ಷಿತ್​ ಅಭಿಮಾನಿಗಳಿಗೆ ಖುಷಿ ನೀಡುವ ವಿಚಾರವೇ ಸರಿ. ಆದರೆ ಈಗ ಒಂದು ಅಚ್ಚರಿಯ ಸುದ್ದಿ ಕೇಳಿಬಂದಿದೆ. ಮಾಧುರಿ ದೀಕ್ಷಿತ್ ಅವರು ಸಲಿಂಗಕಾಮಿ ಮಹಿಳೆಯ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಅಮೇಜಾನ್ ​ಪ್ರೈಂ ವಿಡಿಯೋ (Amazon Prime Video) ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ಅವರು ಈ ರೀತಿಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರಕ್ಕೆ ‘ಮಜಾ ಮಾ’ (Maja Maa Movie) ಎಂದು ಶೀರ್ಷಿಕೆ ಇಡಲಾಗಿದೆ. ಈ ಕುರಿತು ‘ಬಾಲಿವುಡ್​ ಹಂಗಾಮಾ’ ಸುದ್ದಿ ಪ್ರಕಟಿಸಿದೆ.

ಒಟಿಟಿ ಪ್ಲಾಟ್​ಫಾರ್ಮ್​ ವ್ಯಾಪ್ತಿ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಹೊಸ ಹೊಸ ಬಗೆಯ ಕಂಟೆಂಟ್​ಗಳನ್ನು ಪ್ರೇಕ್ಷಕರಿಗೆ ನೀಡುವಲ್ಲಿ ಎಲ್ಲ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಒರಿಜಿನಲ್​ ಸಿನಿಮಾಗಳ ನಿರ್ಮಾಣದಲ್ಲೂ ಸ್ಪರ್ಧೆ ಏರ್ಪಟ್ಟಿದೆ. ನೆಟ್​ಫ್ಲಿಕ್ಸ್​​ ಹಾಗೂ ಅಮೇಜಾನ್​ ಪ್ರೈಂ ವಿಡಿಯೋ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಇತ್ತೀಚೆಗೆ ಅಮೇಜಾನ್​ ಪ್ರೈಂ ವಿಡಿಯೋ ಕಡೆಯಿಂದ ಬರೋಬ್ಬರಿ 41 ಹೊಸ ಶೋ, ವೆಬ್​ ಸಿರೀಸ್​ ಮತ್ತು ಸಿನಿಮಾಗಳನ್ನು ಅನೌನ್ಸ್​ ಮಾಡಲಾಯಿತು. ಆ ಪೈಕಿ ಮಾಧುರಿ ದೀಕ್ಷಿತ್​ ನಟಿಸಲಿರುವ ‘ಮಜಾ ಮಾ’ ಚಿತ್ರದ ಬಗ್ಗೆ ಕೌತುಕ ಸೃಷ್ಟಿ ಆಗಿದೆ.

‘ಪ್ರೇಕ್ಷಕರು ಈಗಾಗಲೇ ಊಹಿಸಿರುವಂತೆ ‘ಮಜಾ ಮಾ’ ಒಂದು ಮಾಮೂಲಿ ಫ್ಯಾಮಿಲಿ ಡ್ರಾಮಾ ಅಲ್ಲ. ಇದರಲ್ಲಿ ಮಾಧರಿ ದೀಕ್ಷಿತ್​ ಅವರು ಸಲಿಂಗಕಾಮಿಯ ಪಾತ್ರ ಮಾಡಲಿದ್ದಾರೆ. ಆ ಪಾತ್ರದ ಲೈಂಗಿಕ ಆಸಕ್ತಿಯಿಂದಾಗಿ ಕಥೆಯಲ್ಲಿ ಟ್ವಿಸ್ಟ್​ಗಳು ಎದುರಾಗುತ್ತವೆ. ಇದು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲಿದೆ’ ಅಂತ ಮೂಲಗಳು ತಿಳಿಸಿವೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಇದನ್ನೂ ಓದಿ
Image
54ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುತ್ತಾರೆ ಮಾಧುರಿ ದೀಕ್ಷಿತ್; ಇಲ್ಲಿದೆ ಹೊಸ ಫೋಟೋಶೂಟ್  
Image
ಸಲಿಂಗಕಾಮ ಪಾತ್ರದಿಂದ ಈ ದೇಶಗಳಲ್ಲಿ ಬ್ಯಾನ್ ಆದ ‘ಡಾಕ್ಟರ್​ ಸ್ಟ್ರೇಂಜ್​’ ಸಿನಿಮಾ
Image
ಮಾಧುರಿ ದೀಕ್ಷಿತ್​ಗೂ ಹತ್ತಿದೆ ‘ಕಚ್ಚಾ ಬಾದಾಮ್​’ ಗುಂಗು; ರಿತೇಶ್​​ ಜತೆ ಮಸ್ತ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
ಗಂಡು-ಹೆಣ್ಣು ಇಬ್ಬರ ಜತೆಗೂ ಲೈಂಗಿಕ ಆಸಕ್ತಿ ಇರುವ ಮಹಿಳೆ ಪಾತ್ರದಲ್ಲಿ ಸಮಂತಾ; ಮತ್ತೆ ವಿವಾದಕ್ಕೆ ನಾಂದಿ?

ಈ ಸಿನಿಮಾದಲ್ಲಿ ಮಾಧರಿ ದೀಕ್ಷಿತ್​ ಜೊತೆ ಗಜರಾಜ್​ ರಾವ್​, ರಜತ್​ ಕಪೂರ್​, ಬರ್ಖಾ ಸಿಂಗ್​ ಮುಂತಾದವರು ನಟಿಸುತ್ತಿದ್ದಾರೆ. ಆನಂದ್​ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಮಾಧುರಿ ದೀಕ್ಷಿತ್​ ಅವರು ನಿಭಾಯಿಸುತ್ತಿರುವ ಪಾತ್ರ ತುಂಬ ಸೂಕ್ಷ್ಮವಾಗಿದೆ. ಅದನ್ನು ಸೂಕ್ತ ರೀತಿಯಲ್ಲಿ ತೆರೆಮೇಲೆ ಕಟ್ಟಿಕೊಡಬೇಕು. ಇಲ್ಲದಿದ್ದರೆ ಪ್ರೇಕ್ಷಕರಿಂದ ತಿರಸ್ಕಾರಕ್ಕೆ ಒಳಗಾಗಬೇಕಾಗುತ್ತದೆ. ಆ ವಿಚಾರದಲ್ಲಿ ನಿರ್ದೇಶಕರು ಸಂಪೂರ್ಣ ಭರವಸೆ ನೀಡಿದ್ದರಿಂದ ಮಾಧುರಿ ದೀಕ್ಷಿತ್​ ಅವರ ಸಲಿಂಗಕಾಮಿ ಮಹಿಳೆಯ ಮಾತ್ರ ಮಾಡಲು ಒಪ್ಪಿಕೊಂಡರು ಎನ್ನಲಾಗಿದೆ.

ಈ ಕಥಾಹಂದರದ ಬಗ್ಗೆ ಚಿತ್ರತಂಡದಿಂದ ಯಾರೂ ಈವರೆಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಮಾಧುರಿ ದೀಕ್ಷಿತ್​ ಮೌನ ಮುರಿಯಬಹುದು ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ. ಈಗಾಗಲೇ ಬಾಲಿವುಡ್​ನಲ್ಲಿ ಕೆಲವು ನಟ-ನಟಿಯರು ಈ ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಮಾಧುರಿ ದೀಕ್ಷಿತ್​ ಅವರು ಯಾವ ರೀತಿ ನಿಭಾಯಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:39 pm, Sat, 14 May 22

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್