AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ಫ್ಲಿಕ್ಸ್​ನಲ್ಲಿ ಮಣಿರತ್ನಂ ಧಮಾಕಾ; ‘ನವರಸ’ ವೆಬ್​ ಸಿರೀಸ್​ ಟ್ರೇಲರ್​ನಲ್ಲಿ ಘಟಾನುಘಟಿಗಳ ಸಂಗಮ

Navarasa Trailer: ನೆಟ್​ಫ್ಲಿಕ್ಸ್​ ಮೂಲಕ ಆಗಸ್ಟ್​ 6ರಂದು ‘ನವರಸ’ ಬಿಡುಗಡೆ ಆಗಲಿದೆ. ತಮಿಳು ಮಾತ್ರವಲ್ಲದೆ, ತೆಲುಗು, ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ.

ನೆಟ್​ಫ್ಲಿಕ್ಸ್​ನಲ್ಲಿ ಮಣಿರತ್ನಂ ಧಮಾಕಾ; ‘ನವರಸ’ ವೆಬ್​ ಸಿರೀಸ್​ ಟ್ರೇಲರ್​ನಲ್ಲಿ ಘಟಾನುಘಟಿಗಳ ಸಂಗಮ
ನವರಸ ಚಿತ್ರದ ಪೋಸ್ಟರ್(ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 27, 2021 | 1:06 PM

Share

ಸಿನಿಮಾಗಳಿಗಿಂತಲೂ ಹೆಚ್ಚಾಗಿ ಈಗ ವೆಬ್​ ಸಿರೀಸ್​ಗಳು ಧೂಳೆಬ್ಬಿಸುತ್ತಿವೆ. ಲಾಕ್​ಡೌನ್​ ಬಳಿಕ ಬದಲಾದ ಕಾಲಘಟ್ಟದಲ್ಲಿ ಓಟಿಟಿ ಮೂಲಕ ಮನರಂಜನೆ ಪಡೆಯುವ ಪ್ರೇಕ್ಷಕರ ಸಂಖ್ಯೆ ಹೆಚ್ಚಿದೆ. ಅದಕ್ಕೆ ತಕ್ಕಂತೆಯೇ ದೊಡ್ಡ ದೊಡ್ಡ ಸ್ಟಾರ್​ ಕಲಾವಿದರು ವೆಬ್​ ಸಿರೀಸ್​ಗಳ (Web Series) ಕಡೆಗೆ ಮುಖ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಇದೇ ಮೊದಲ ಬಾರಿಗೆ ವೆಬ್​ ಸಿರೀಸ್​ ನಿರ್ಮಾಣ ಮಾಡಿದ್ದಾರೆ. ‘ನವರಸ’  (Navarasa) ಶೀರ್ಷಿಕೆಯ ಈ ವೆಬ್​ ಸರಣಿಯಲ್ಲಿ ತಮಿಳು ಚಿತ್ರರಂಗದ ಅನೇಕ ಸ್ಟಾರ್​ ನಟರು ಅಭಿನಯಿಸಿದ್ದಾರೆ. ಈಗ ಟ್ರೇಲರ್​ ಮೂಲಕ ಈ ವೆಬ್​ ಸಿರೀಸ್​ ಕೌತುಕ ಮೂಡಿಸಿದೆ.

‘ನವರಸ’ ವೆಬ್​ ಸಿರೀಸ್​ನಲ್ಲಿ ಹೆಸರೇ ಸೂಚಿಸುವಂತೆ 9 ಕಥೆಗಳ ಸಂಗಮ ಆಗಿದೆ. 9 ಪ್ರತ್ಯೇಕ ಕಥೆಗಳ ಮೂಲಕ ನವರಸಗಳನ್ನು ವಿವರಿಸಲಾಗಿದೆ. ಪ್ರತಿ ಕಥೆಗೂ ಬೇರೆ ಬೇರೆ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕಾಲಿವುಡ್​ನ ಖ್ಯಾತ ನಿರ್ದೇಶಕರಾದ ಪ್ರಿಯದರ್ಶನ್​, ವಸಂತ್​ ಎಸ್​. ಸಾಯಿ, ಗೌತಮ್​ ವಾಸುದೇವ್​ ಮೆನನ್​, ಅರವಿಂದ್ ಸ್ವಾಮಿ, ಬಿಜೋಯ್​ ನಂಬಿಯಾರ್​, ಕಾರ್ತಿಕ್​ ಸುಬ್ಬರಾಜು, ಕಾರ್ತಿಕ್​ ನರೇನ್​, ಸರ್ಜುನ್​ ಕೆ.ಎಮ್​, ರತೀಂದ್ರನ್​ ಆರ್​. ಪ್ರಸಾದ್​ ನಿರ್ದೇಶನ ಮಾಡಿದ್ದಾರೆ.

ವಿಜಯ್ ಸೇತುಪತಿ, ಸೂರ್ಯ, ಪ್ರಕಾಶ್​ ರೈ, ಸಿದ್ಧಾರ್ಥ್​, ಅಶೋಕ್​ ಸೆಲ್ವನ್​, ನಾಗ ಶೌರ್ಯ, ಪಾರ್ವತಿ ತಿರುವತ್ತು, ರೇವತಿ, ಯೋಗಿ ಬಾಬು, ಅಂಜಲಿ, ಅರವಿಂದ್​ ಸ್ವಾಮಿ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಜು.27ರಂದು ಬಿಡುಗಡೆ ಆಗಿರುವ ಟ್ರೇಲರ್​ಗೆ ಮೆಚ್ಚುಗೆ ಸಿಕ್ಕಿದೆ. ನೆಟ್​ಫ್ಲಿಕ್ಸ್​ ಮೂಲಕ ಆಗಸ್ಟ್​ 6ರಂದು ‘ನವರಸ’ ಬಿಡುಗಡೆ ಆಗಲಿದೆ. ತಮಿಳು ಮಾತ್ರವಲ್ಲದೆ, ತೆಲುಗು, ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ.

(ನವರಸ ವೆಬ್​ ಸಿರೀಸ್​ ಟ್ರೇಲರ್​)

ಕನ್ನಡದಲ್ಲೂ ಸಹ ಈ ರೀತಿಯ ಪ್ರಯತ್ನ ನಡೆಯುತ್ತಿದೆ. ಹಲವು ನಿರ್ದೇಶಕರು ಸೇರಿಕೊಂಡು, ಹಲವು ಕಥೆಗಳನ್ನು ಇಟ್ಟುಕೊಂಡು ಒಂದೇ ಸಿನಿಮಾ ಮಾಡುವ ಕೆಲಸ ಜಾರಿಯಲ್ಲಿದೆ. ‘ಆದ್ದರಿಂದ’ ಮತ್ತು ‘ಪೆಂಟಗಾನ್​’ ಚಿತ್ರಗಳಿಗೆ ಹಲವು ನಿರ್ದೇಶಕರು ಕೈ ಜೋಡಿಸಿದ್ದಾರೆ.

ಇದನ್ನೂ ಓದಿ:

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?

ನೆಟ್​ಫ್ಲಿಕ್ಸ್​ನಲ್ಲಿ ಹೆಚ್ಚುವರಿ ಶುಲ್ಕವಿಲ್ಲದೆ ವಿಡಿಯೊ ಗೇಮ್ಸ್​: ಮಕ್ಕಳಿಗಾಗಿ ಎರಡು ಹೊಸ ಕೊಡುಗೆ ಘೋಷಣೆ

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು