‘ಮಂಜುಮ್ಮೇಲ್ ಬಾಯ್ಸ್’ ಒಟಿಟಿ: ಯಾರೂ ಊಹಿಸದ ಡೇಟ್ ಅನೌನ್ಸ್ ಮಾಡಿದ ಡಿಸ್ನಿ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಈಗ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಸಿನಿಮಾಗಳು ರಿಲೀಸ್ ಆಗೋದು ಸಾಮಾನ್ಯವಾಗಿ ಶುಕ್ರವಾರ. ಥಿಯೇಟರ್ ಮಾತ್ರವಲ್ಲದೆ ಒಟಿಟಿಗಳೂ ಈ ತಂತ್ರ ಉಪಯೋಗಿಸುತ್ತಿವೆ. ಈ ಕಾರಣದಿಂದಲೇ ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು.

‘ಮಂಜುಮ್ಮೇಲ್ ಬಾಯ್ಸ್’ ಒಟಿಟಿ: ಯಾರೂ ಊಹಿಸದ ಡೇಟ್ ಅನೌನ್ಸ್ ಮಾಡಿದ ಡಿಸ್ನಿ
ಮಂಜುಮ್ಮೇಲ್ ಬಾಯ್ಸ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 27, 2024 | 5:55 PM

ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ ಚಿತ್ರ (Manjummel Boys) ರಿಲೀಸ್ ಆಗಿದ್ದು ಫೆಬ್ರವರಿ 22ರಂದು. ಇದಾಗಿ ಎರಡು ತಿಂಗಳೇ ಕಳೆದಿವೆ. ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡಿದೆ. 200 ಕೋಟಿ ರೂಪಾಯಿ ಗಳಿಕೆ ಮಾಡಿದ ಮೊದಲ ಮಲಯಾಳಂ ಸಿನಿಮಾ ಎನ್ನುವ ಖ್ಯಾತಿಯೂ ಈ ಚಿತ್ರಕ್ಕೆ ಸಿಕ್ಕಿದೆ. ವಿಶೇಷ ಎಂದರೆ ಈ ಚಿತ್ರ ಈಗ ಒಟಿಟಿಗೆ ಕಾಲಿಡುತ್ತಿದೆ. ಆದರೆ, ಯಾರೂ ಊಹಿಸದ ರಿಲೀಸ್ ದಿನಾಂಕವನ್ನು ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್ ತಿಳಿಸಿದೆ.

‘ಮಂಜುಮ್ಮೇಲ್ ಬಾಯ್ಸ್’ ಪಕ್ಕಾ ಫ್ರೆಂಡ್​ಶಿಪ್ ಕಥೆ. ಇದರ ಜೊತೆಗೆ ಒಂದಷ್ಟು ಅಡ್ವೆಂಚರ್ ಕೂಡ ಇದೆ. ಕೊಡೈಕೆನಲ್​ನಲ್ಲಿರುವ ‘ಗುಣ ಕೇವ್​’ನಲ್ಲಿ ನಡೆದ ಒಂದು ಶಾಕಿಂಗ್ ಘಟನೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. 2006ರಲ್ಲಿ ಇಲ್ಲಿಗೆ ಒಂದು ಗೆಳೆಯರ ತಂಡ ಟ್ರಿಪ್ ತೆರಳಿರುತ್ತದೆ. ಈ ಪ್ರವಾಸಿ ಸ್ಥಳದಲ್ಲಿರುವ ಡೆವಿಲ್ಸ್ ಕಿಚನ್ ಎಂಬ ಕಂದಕದಲ್ಲಿ ಓರ್ವ ಬೀಳುತ್ತಾನೆ. ಆತನ ರಕ್ಷಿಸೋ ಕಥೆಯೇ ‘ಮಂಜುಮ್ಮೇಲ್ ಬಾಯ್ಸ್’.

ಈ ಸಿನಿಮಾ ಈಗ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಸಿನಿಮಾಗಳು ರಿಲೀಸ್ ಆಗೋದು ಸಾಮಾನ್ಯವಾಗಿ ಶುಕ್ರವಾರ. ಥಿಯೇಟರ್ ಮಾತ್ರವಲ್ಲದೆ ಒಟಿಟಿಗಳೂ ಈ ತಂತ್ರ ಉಪಯೋಗಿಸುತ್ತಿವೆ. ಈ ಕಾರಣದಿಂದಲೇ ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ನೀಡಲಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಈವರೆಗೆ 236 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸುಮಾರು 20 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗಿದೆ ಎನ್ನಲಾಗಿದೆ. ಚಿದಂಬರಂ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಸೌಬಿನ್ ಶಾಹಿರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದ ಜೊತೆಗೆ ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ಶ್ರೀನಾಥ್ ಬಾಶಿ, ಬಾಲು ವರ್ಗೀಶ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ