AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್ 3’ ರಿಲೀಸ್ ದಿನಾಂಕ ರಿವೀಲ್ ಮಾಡಿದ ಮನೋಜ್ ಬಾಜ್​ಪಾಯಿ

ಈ ಸೀಸನ್ ಕೊನೆಯಲ್ಲಿ ಮೂರನೇ ಪಾರ್ಟ್ ಬರಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ವೈರಸ್ ಕಥೆ ಆಧರಿಸಿ ‘ದಿ ಫ್ಯಾಮಿಲಿ ಮ್ಯಾನ್ 3’ ಬರುತ್ತಿದೆ. ರಿಲೀಸ್ ದಿನಾಂಕದ ಬಗ್ಗೆ ಮನೋಜ್ ಬಾಜ್​ಪಾಯಿ ಮಾಹಿತಿ ನೀಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್ 3’ ರಿಲೀಸ್ ದಿನಾಂಕ ರಿವೀಲ್ ಮಾಡಿದ ಮನೋಜ್ ಬಾಜ್​ಪಾಯಿ
ಫ್ಯಾಮಿಲಿ ಮ್ಯಾನ್ ಸರಣಿಯಲ್ಲಿ ಮನೋಜ್ ಬಾಜ್​ಪಾಯಿ
ರಾಜೇಶ್ ದುಗ್ಗುಮನೆ
|

Updated on:Feb 08, 2023 | 9:54 AM

Share

ಮನೋಜ್ ಬಾಜ್​ಪಾಯಿ (Manoj Bajpayee) ಅವರ ನಟನೆಯ ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯಲ್ಲಿ ಎರಡು ಸೀಸನ್​ಗಳು ಮೂಡಿ ಬಂದಿವೆ. ಈ ಸೀರಿಸ್​ನ ಅನೇಕರು ಇಷ್ಟಪಟ್ಟಿದ್ದಾರೆ. ಅವರು ನಿರ್ವಹಿಸಿರುವ ಶ್ರೀಕಾಂತ್ ತಿವಾರಿ ಪಾತ್ರ ಸೂಪರ್ ಹಿಟ್ ಆಗಿದೆ. ಈ ಪಾತ್ರದ ಮ್ಯಾನರಿಸಂ ಸಾಕಷ್ಟು ಜನರಿಗೆ ಕನೆಕ್ಟ್ ಆಗಿದೆ. ಈಗ ಈ ವೆಬ್​ ಸೀರಿಸ್​ನ ಮೂರನೇ ಸರಣಿ (The Family Man 3) ಬರಲಿದೆ. ಈ ಬಗ್ಗೆ ಮನೋಜ್ ಬಾಜ್​ಪಾಯಿ ಅವರು ಮಾಹಿತಿ ನೀಡಿದ್ದಾರೆ.

2021ರಲ್ಲಿ ‘ದಿ ಫ್ಯಾಮಿಲಿ ಮ್ಯಾನ್ 2’ ರಿಲೀಸ್ ಆಯಿತು. ಮೊದಲ ಸೀಸನ್​ನಲ್ಲಿ ಪಾಕ್​ ಟೆರರಿಸ್ಟ್​ಗಳ ಕಥೆ ಹೇಳಿದ್ದ ನಿರ್ದೇಶಕರಾದ ರಾಜ್​ ಹಾಗೂ ಡಿಕೆ ಎರಡನೇ ಸೀಸನ್​ನಲ್ಲಿ ಶ್ರೀಲಂಕಾ ರೆಬೆಲ್ಸ್​ಗಳ ಕಥೆ ಹೇಳಿದ್ದರು. ಸಮಂತಾ ಪಾತ್ರ ಸಾಕಷ್ಟು ಇಷ್ಟ ಆಗಿತ್ತು. ಈ ಸೀಸನ್ ಕೊನೆಯಲ್ಲಿ ಮೂರನೇ ಪಾರ್ಟ್ ಬರಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ವೈರಸ್ ಕಥೆ ಆಧರಿಸಿ ‘ದಿ ಫ್ಯಾಮಿಲಿ ಮ್ಯಾನ್ 3’ ಬರುತ್ತಿದೆ. ರಿಲೀಸ್ ದಿನಾಂಕದ ಬಗ್ಗೆ ಮನೋಜ್ ಬಾಜ್​ಪಾಯಿ ಮಾಹಿತಿ ನೀಡಿದ್ದಾರೆ.

‘ಈ ಹೋಳಿ ಹಬ್ಬಕ್ಕೆ ನಿಮ್ಮ ಕುಟುಂಬದ ಎದುರು ನಮ್ಮ ಕುಟುಂಬದ ಜತೆ ಬರುತ್ತಿದ್ದೇನೆ’ ಎಂದು ಮನೋಜ್ ಬಾಜ್​ಪಾಯಿ ಹೇಳಿದ್ದಾರೆ. ಈ ವಿಡಿಯೋ ಕ್ಯಾಪ್ಶನ್​ಗೆ ‘ಕುಟುಂಬ ಸಮೇತ ಬರುತ್ತಿದ್ದೇನೆ. ನಮ್ಮನ್ನು ಸ್ವಾಗತಿಸುವುದಿಲ್ಲವೇ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಈ ಪೋಸ್ಟ್​ಗೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ. ಈ ವರ್ಷ ಮಾರ್ಚ್​ 8ಕ್ಕೆ ಹೋಳಿ ಹಬ್ಬ ಇದೆ.

ಇದನ್ನೂ ಓದಿ: ಒಂದು ದಿನಕ್ಕೆ ಪ್ರಿಯಾಮಣಿ ಪಡೆಯುವ ಸಂಬಳ ಎಷ್ಟು? ‘ದಿ ಫ್ಯಾಮಿಲಿ ಮ್ಯಾನ್’ ನಟಿಯ ಸಂಭಾವನೆ ಏರಿಕೆ

‘ಬನ್ನಿ ಬನ್ನಿ ನಿಮಗಾಗಿ ಕಾಯುತ್ತಿದ್ದೆವು’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ‘ಈ ದಿನಕ್ಕಾಗಿ ಎಷ್ಟೊಂದು ಸಮಯದಿಂದ ಕಾಯುತ್ತಿದ್ದೆವು. ಏಕೆ ಇಷ್ಟು ವಿಳಂಬ ಮಾಡಿದಿರಿ’ ಎಂದು ಕೆಲವರು ಕೇಳಿದ್ದಾರೆ. ರಾಜ್ ಹಾಗೂ ಡಿಕೆ ಒಟ್ಟಾಗಿ ಈ ಸೀರಿಸ್ ನಿರ್ದೇಶನ ಮಾಡಿದ್ದಾರೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸೀರಿಸ್ ರಿಲೀಸ್ ಆಗಲಿದೆ. ಈ ಸೀಸನ್​ನಲ್ಲಿ ಎಷ್ಟು ಎಪಿಸೋಡ್​ಗಳು ಇರಲಿವೆ? ಸೀರಿಸ್​ನ ಕಥೆ ಯಾವ ರೀತಿ ಇರಲಿದೆ? ಎಂಬಿತ್ಯಾದಿ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:44 am, Wed, 8 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ