AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoj Bajpayee: ದಾಖಲೆ ಬರೆದ ‘ಬಂದಾ’ ಸಿನಿಮಾ; ಒಟಿಟಿಯಲ್ಲಿ ಮನೋಜ್​ ಬಾಜ್​ಪಾಯಿ ಕಿಂಗ್​ ಅನ್ನೋದು ಮತ್ತೆ ಸಾಬೀತು

Sirf Ek Bandaa Kaafi Hai: ನ್ಯಾಯ ಕೊಡಿಸಲು ಹೋರಾಡುವ ವಕೀಲನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್​ ಬಾಜ್​ಪಾಯಿ ಅವರ ನಟನೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

Manoj Bajpayee: ದಾಖಲೆ ಬರೆದ ‘ಬಂದಾ’ ಸಿನಿಮಾ; ಒಟಿಟಿಯಲ್ಲಿ ಮನೋಜ್​ ಬಾಜ್​ಪಾಯಿ ಕಿಂಗ್​ ಅನ್ನೋದು ಮತ್ತೆ ಸಾಬೀತು
ಮನೋಜ್​ ಬಾಜ್​ಪಾಯಿ
TV9 Web
| Updated By: ಮದನ್​ ಕುಮಾರ್​|

Updated on: May 27, 2023 | 4:04 PM

Share

ನಟ ಮನೋಜ್​ ಬಾಜ್​ಪಾಯಿ (Manoj Bajpayee) ಅವರು ತಮ್ಮದೇ ಆದಂತಹ ಅಭಿಮಾನಿ ಬಳಗ ಹೊಂದಿದ್ದಾರೆ. ಸಿನಿಮಾ ಮತ್ತು ಒಟಿಟಿ ಕ್ಷೇತ್ರದಲ್ಲಿ ಅವರು ಛಾಪು ಮೂಡಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​’ ಮತ್ತು ‘ದಿ ಫ್ಯಾಮಿಲಿ ಮ್ಯಾನ್​ 2’ ಸೀರಿಸ್​ನಿಂದ ಅವರಿಗೆ ಸಿಕ್ಕ ಜನಪ್ರಿಯತೆ ಅಪಾರ. ಈಗ ಅವರ ಹೊಸ ಸಿನಿಮಾ ‘ಸಿರ್ಫ್​ ಏಕ್​ ಬಂದಾ ಕಾಫಿ ಹೈ’ (Sirf Ek Bandaa Kaafi Hai) ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ. ಜೀ5 ಮೂಲಕ ಈ ಚಿತ್ರ ವೀಕ್ಷಣೆಗೆ ಲಭ್ಯವಾಗಿದೆ. ಮೇ 23ರಂದು ಸ್ಟ್ರೀಮಿಂಗ್​ ಆರಂಭಿಸಿದ ಈ ಚಿತ್ರಕ್ಕೆ ಎಲ್ಲರಿಂದ ಪಾಸಿಟಿವ್​ ಪ್ರತಿಕ್ರಿಯೆ ಸಿಕ್ಕಿದೆ. ದಾಖಲೆ ಪ್ರಮಾಣದಲ್ಲಿ ವೀಕ್ಷಣೆ ಕಾಣುತ್ತಿದೆ. ಈ ಬಗ್ಗೆ ಸ್ವತಃ ಮನೋಜ್​ ಬಾಜ್​ಪಾಯಿ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. 200 ಮಿಲಿಯನ್​ ನಿಮಿಷಗಳಿಗೂ ಹೆಚ್ಚು ಕಾಲ ಪ್ರದರ್ಶನ ಕಾಣುವ ಮೂಲಕ ಈ ಸಿನಿಮಾ ದಾಖಲೆ ಬರೆದಿದೆ. ಇದು ಮನೋಜ್​ ಬಾಜ್​ಪಾಯಿ ಅವರಿಗೆ ಖುಷಿ ನೀಡಿದೆ. ಈ ಸಿನಿಮಾದಲ್ಲಿ ಅವರು ಲಾಯರ್​ ಪಾತ್ರ ಮಾಡಿದ್ದಾರೆ. ಕೋರ್ಟ್​ ರೂಮ್​ ಡ್ರಾಮಾ ಶೈಲಿಯಲ್ಲಿ ಮೂಡಿಬಂದಿರುವ ‘ಸಿರ್ಫ್​ ಏಕ್​ ಬಂದಾ ಕಾಫಿ ಹೈ’ ಚಿತ್ರವು ಈಗ ಜೀ5ನ (Zee5) ಟ್ರೆಂಡಿಂಗ್​ನಲ್ಲಿದೆ.

ಅಪೂರ್ವ್​ ಸಿಂಗ್​ ಕಾರ್ಕಿ ಅವರು ‘ಸಿರ್ಫ್​ ಏಕ್​ ಬಂದಾ ಕಾಫಿ ಹೈ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿನೋದ್​ ಭಾನುಶಾಲಿ ಅವರು ನಿರ್ಮಾಣ ಮಾಡಿದ್ದಾರೆ. ಅಂದ್ರಿಜಾ, ಸೂರ್ಯ ಮೋಹನ್​, ನಿಖಿಲ್​ ಪಾಂಡೆ, ಜೈಹಿಂದ್​ ಕುಮಾರ್​, ದುರ್ಗಾ ಶರ್ಮಾ ಮುಂತಾದವರು ಕೂಡ ಮನೋಜ್​ ಬಾಜ್​ಪಾಯಿ ಜೊತೆ ನಟಿಸಿದ್ದಾರೆ. ದೇವ ಮಾನವ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಆಗುತ್ತದೆ. ಆಕೆಗೆ ನ್ಯಾಯ ಕೊಡಿಸಲು ಹೋರಾಡುವ ವಕೀಲನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್​ ಬಾಜ್​ಪಾಯಿ ಅವರ ನಟನೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

View this post on Instagram

A post shared by Bandaa (@bajpayee.manoj)

ಒಟಿಟಿಯಲ್ಲಿ ಮನೋಜ್​ ಬಾಜ್​ಪಾಯಿ ಅವರ ಹವಾ ಜೋರಿದೆ. ವೆಬ್​ ಸಿರೀಸ್​ಗಳಲ್ಲಿ ಅವರು ಜನಮನ ಗೆದ್ದಿದ್ದಾರೆ. ಈಗ ‘ಸಿರ್ಫ್​ ಏಕ್​ ಬಂದಾ ಕಾಫಿ ಹೈ’ ಚಿತ್ರದ ಮೂಲಕ ತಾವು ಒಟಿಟಿಯಲ್ಲಿ ಕಿಂಗ್​ ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ. ಎಲ್ಲರ ಪರಿಶ್ರಮದಿಂದಾಗಿ ಈ ಗೆಲುವು ಸಿಕ್ಕಿದೆ ಎಂದು ಅವರು ಹೇಳಿದ್ದಾರೆ. ಇದು ಒಟಿಟಿ ಜಮಾನಾ. ಪ್ರತಿ ದಿನ ಹೊಸ ಹೊಸ ಕಾಂಟೆಂಟ್​ ಬಿಡುಗಡೆ ಆಗುತ್ತಲೇ ಇರುತ್ತವೆ. ಅವುಗಳ ಮಧ್ಯೆ ಜನರ ಮನಸ್ಸು ಗೆಲ್ಲುವಂತಹ ಸಿನಿಮಾ ಅಥವಾ ವೆಬ್​ ಸಿರೀಸ್​ ಬಂದರೆ ಉತ್ತಮವಾದ ಬಾಯಿ ಮಾತಿನ ಪ್ರಚಾರ ಸಿಗುತ್ತದೆ. ಮನೋಜ್​ ಬಾಜ್​ಪಾಯಿ ಅವರ ಅಭಿಮಾನಿಗಳ ವಲಯದಲ್ಲಿ ‘ಸಿರ್ಫ್​ ಏಕ್​ ಬಂದಾ ಕಾಫಿ ಹೈ’ ಚಿತ್ರದ ಬಗ್ಗೆಯೇ ಟಾಕ್​ ಸೃಷ್ಟಿಯಾಗಿದೆ.

ಇದನ್ನೂ ಓದಿ: ‘ಸಾವಿರ ಕೋಟಿ ಕಲೆಕ್ಷನ್​ ಬಗ್ಗೆ ಎಲ್ರೂ ಮಾತಾಡ್ತಾರೆ, ಆದ್ರೆ ಮುಖ್ಯ ವಿಚಾರ ಚರ್ಚೆ ಆಗ್ತಿಲ್ಲ’: ಮನೋಜ್​ ಬಾಜ್​ಪಾಯಿ

ಬಣ್ಣದ ಲೋಕದಲ್ಲಿ ಮನೋಜ್​ ಬಾಜ್​ಪಾಯಿ ಅವರಿಗೆ ಸಾಕಷ್ಟು ವರ್ಷಗಳ ಅನುಭವ ಇದೆ. 1994ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ಬ್ಯಾಂಡಿಟ್​ ಕ್ವೀನ್​’, ‘ಸತ್ಯ’, ‘ಪ್ರೇಮ ಕಥಾ’, ‘ದಿಲ್​ ಪೇ ಮತ್​ ಲೇ ಯಾರ್​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುಚಿತ್ರಗಳಲ್ಲೂ ಅವರು ಅಭಿನಯಿಸಿದ್ದಾರೆ. ನಿರ್ಮಾಪಕನಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ಸದ್ಯ ಅವರ ಕೈಯಲ್ಲಿ ಸಾಕಷ್ಟು ಆಫರ್​ಗಳಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ