AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿರ್ಜಾಪುರ್​’ ಖ್ಯಾತಿಯ ನಟನ ಅನುಮಾನಾಸ್ಪದ ಸಾವು; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮನೆಯಿಂದ ಕೊಳೆತ ವಾಸನೆ ಬರುತ್ತಿರುವ ಬಗ್ಗೆ ಅಕ್ಕ-ಪಕ್ಕದ ಮನೆಯವರು ದೂರು ನೀಡಿದ್ದರು. ಪೊಲೀಸರು ಬಂದು ಮನೆ ಪ್ರವೇಶಿಸಿದಾಗ ಬ್ರಹ್ಮ ಮೃತಪಟ್ಟಿರುವ ವಿಚಾರ ಗೊತ್ತಾಗಿದೆ.

‘ಮಿರ್ಜಾಪುರ್​’ ಖ್ಯಾತಿಯ ನಟನ ಅನುಮಾನಾಸ್ಪದ ಸಾವು; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಬ್ರಹ್ಮ ಮಿಶ್ರಾ
TV9 Web
| Edited By: |

Updated on:Dec 02, 2021 | 7:20 PM

Share

ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ‘ಮಿರ್ಜಾಪುರ್​’ ವೆಬ್​ ಸರಣಿ ಸಾಕಷ್ಟು ಖ್ಯಾತಿ ಗಳಿಸಿತ್ತು. ಈಗಾಗಲೇ ಎರಡು ಸೀಸನ್​ ತೆರೆಕಂಡಿದ್ದು, ಎರಡೂ ಹಿಟ್​ ಆಗಿದೆ. ಈ ಸರಣಿಯಲ್ಲಿ ಲಲಿತ್ ಹೆಸರಿನ ಪಾತ್ರ ಮಾಡಿದ್ದ ಬ್ರಹ್ಮ ಮಿಶ್ರಾ ನಿಧನ ಹೊಂದಿದ್ದಾರೆ. ಮುಂಬೈನ ಅವರ ಮನೆಯಲ್ಲೇ ಮೃತಪಟ್ಟಿದ್ದಾರೆ. ಅವರ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದೆ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.  

ಬ್ರಹ್ಮ ಮಿಶ್ರಾ ಅವರಿಗೆ 36 ವರ್ಷ ವಯಸ್ಸಾಗಿತ್ತು. ನವೆಂಬರ್​ 29ರಂದು ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿತ್ತು. ನಂತರ ಅವರ ಮನೆಗೆ ವೈದ್ಯರು ಬಂದು ಹೋಗಿದ್ದರು. ಆ ಬಳಿಕ ಅವರು ಮನೆಯಿಂದ ಹೊರ ಬಂದಿರಲಿಲ್ಲ. ಈಗ ಬ್ರಹ್ಮ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಆದರೆ, ಈ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ. ಅನುಮಾನ ಕಂಡು ಬಂದರೆ ಪೊಲೀಸರು ತನಿಖೆ ನಡೆಸಲಿದ್ದಾರೆ.

ಮನೆಯ ಬಾತ್​ರೂಮ್​ನಲ್ಲಿ ಬ್ರಹ್ಮ ಅವರ ದೇಹ ಪತ್ತೆ ಆಗಿದೆ. ಮೂರು ದಿನಗಳ ಹಿಂದೆಯೇ ಅವರು ಮೃತಪಟ್ಟಿದ್ದಾರೆ. ಅವರ ಮನೆಯಿಂದ ಕೊಳೆತ ವಾಸನೆ ಬರುತ್ತಿರುವ ಬಗ್ಗೆ ಅಕ್ಕ-ಪಕ್ಕದ ಮನೆಯವರು ದೂರು ನೀಡಿದ್ದರು. ಪೊಲೀಸರು ಬಂದು ಮನೆ ಪ್ರವೇಶಿಸಿದಾಗ ಬ್ರಹ್ಮ ಮೃತಪಟ್ಟಿರುವ ವಿಚಾರ ಗೊತ್ತಾಗಿದೆ. ‘ಮಿರ್ಜಾಪುರ್​’ನಲ್ಲಿ ಮುನ್ನಾ ಭಯ್ಯಾ ಅವರ ರೈಟ್​ ಹ್ಯಾಂಡ್​ ಆಗಿ ಲಲಿತ್​ ಪಾತ್ರ ಇತ್ತು. ಎರಡನೇ ಸೀಸನ್​​ನಲ್ಲಿ ಲಲಿತ್​ ಪಾತ್ರ ಅಂತ್ಯವಾಗಿದೆ.

ಬ್ರಹ್ಮ ಅವರ ಸಹೋದರ ಸಂದೀಪ್​ ಮಿಶ್ರಾ ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ವಾಸವಾಗಿದ್ದಾರೆ. ಈ ಘಟನೆ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ. ಈಗಾಗಲೇ ಅವರು ಮುಂಬೈಗೆ ತೆರಳಿದ್ದಾರೆ.  ಮಿರ್ಜಾಪುರ್​ ಕಲಾವಿದರು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ‘ಮಿರ್ಜಾಪುರ್​’ ಮಾತ್ರವಲ್ಲದೆ ‘ದಂಗಲ್’, ‘ದಿ ಮೌಂಟೇನ್​ ಮ್ಯಾನ್​’, ‘ಬದ್ರಿನಾಥ್​ ಕಿ ದುಲ್ಹನಿಯಾ’ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು.

ಇದನ್ನೂ ಓದಿ: ಚಿತ್ರರಂಗದಲ್ಲಿಲ್ಲ ಚಾನ್ಸ್​​, ಆಲ್ಕೋಹಾಲ್​ ಮಾರಾಟ ಆರಂಭಿಸಿದ ಖ್ಯಾತ ಕಾಮಿಡಿಯನ್​; ಫೋಟೋ ವೈರಲ್

Published On - 7:15 pm, Thu, 2 December 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ