AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಜಾನ್ ಪ್ರೈಮ್​ನಲ್ಲಿ ಪ್ರಸಾರ ಆರಂಭಿಸಿದ ‘ಮಿರ್ಜಾಪುರ್ 3’; ಹೇಗಿದೆ ಹೊಸ ಸೀಸನ್?

ಕಳೆದ ಸೀರಿಸ್​ನ ಡೈಲಾಗ್​ಗಳು ಗಮನ ಸೆಳೆದಿದ್ದವು. ಕಳೆದ ಸೀಸನ್​ಗಳಲ್ಲಿ ಮೀಮ್​ಗಳನ್ನು ಮಾಡಲು ಸಾಕಷ್ಟು ದೃಶ್ಯಗಳು ಇದ್ದವು. . ಆದರೆ, ಈ ಬಾರಿ ಅದಕ್ಕೆಲ್ಲ ಹೆಚ್ಚು ಅವಕಾಶವಿಲ್ಲ ಎಂಬುದು ವೀಕ್ಷಕರ ಅಭಿಪ್ರಾಯ. ಇನ್ನು ನಿರೀಕ್ಷೆ ಹೆಚ್ಚಿದ್ದರೆ ನಿರಾಸೆ ಆಗೋದ ಖಂಡಿತ ಎನ್ನುತ್ತಾರೆ ಪ್ರೇಕ್ಷಕರು.

ಅಮೇಜಾನ್ ಪ್ರೈಮ್​ನಲ್ಲಿ ಪ್ರಸಾರ ಆರಂಭಿಸಿದ ‘ಮಿರ್ಜಾಪುರ್ 3’; ಹೇಗಿದೆ ಹೊಸ ಸೀಸನ್?
ಮಿರ್ಜಾಪುರ್
ರಾಜೇಶ್ ದುಗ್ಗುಮನೆ
|

Updated on: Jul 05, 2024 | 7:05 AM

Share

‘ಮಿರ್ಜಾಪುರ್’  ಯಶಸ್ವಿಯಾಗಿ ಎರಡು ಸೀಸನ್​ಗಳನ್ನು ಪೂರೈಸಿದೆ. ಇಂದಿನಿಂದ (ಜುಲೈ 12) ‘ಮಿರ್ಜಾಪುರ್ 3’ ಪ್ರಸಾರ ಆರಂಭಿಸಿದೆ. ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿ ಮೂಲಕ ಮೂರನೇ ಸೀಸನ್ ಪ್ರಸಾರ ಕಾಣುತ್ತಿದೆ. ಈ ಮೊದಲಿನ ಎರಡು ಸೀಸನ್​ಗಳು ಇದೇ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದರೆ ‘ಮಿರ್ಜಾಪುರ್ 3’ ನೀರಸ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದಕ್ಕೆ ಹಲವು ಕಾರಣಗಳನ್ನು ಪ್ರೇಕ್ಷಕರು ನೀಡಿದ್ದಾರೆ.

ಅಕ್ಟೋಬರ್ 2020ರಂದು ‘ಮಿರ್ಜಾಪುರ್ 2’ ರಿಲೀಸ್ ಆಯಿತು. ಈಗ ನಾಲ್ಕು ವರ್ಷಗಳ ಬಳಿಕ ಇದಕ್ಕೆ ಹೊಸ ಸೀಸನ್ ಬಂದಿದೆ. ಕಳೆದ ಸೀಸನ್​ನಂತೆ ಈ ಸೀಸನ್​ನಲ್ಲೂ ಭರ್ಜರಿಯಾಗಿ ಹಿಂಸೆ ಇದೆ. ಗನ್​ಗಳು ಇಲ್ಲಿಯೂ ಸದ್ದು ಮಾಡುತ್ತವೆ. ಆದರೆ, ಕಳೆದ ಸೀಸನ್​ಗಳಲ್ಲಿ ಇದ್ದಂತೆ ಈ ಸೀಸನ್​ಲ್ಲಿ ಕಿಡಿ ಇಲ್ಲ ಎಂದು ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ಸೀಸನ್​ಗಳಲ್ಲಿ ಮೀಮ್​ಗಳನ್ನು ಮಾಡಲು ಸಾಕಷ್ಟು ದೃಶ್ಯಗಳು ಇದ್ದವು. ಸೀರಿಸ್​ನ ಡೈಲಾಗ್​ಗಳು ಗಮನ ಸೆಳೆದಿದ್ದವು. ಆದರೆ, ಈ ಬಾರಿ ಅದಕ್ಕೆಲ್ಲ ಹೆಚ್ಚು ಅವಕಾಶವಿಲ್ಲ ಎಂಬುದು ವೀಕ್ಷಕರ ಅಭಿಪ್ರಾಯ. ಇನ್ನು ನಿರೀಕ್ಷೆ ಹೆಚ್ಚಿದ್ದರೆ ನಿರಾಸೆ ಆಗೋದ ಖಂಡಿತ ಎನ್ನುತ್ತಾರೆ ಪ್ರೇಕ್ಷಕರು.

ಇದನ್ನೂ ಓದಿ: ‘ಮಿರ್ಜಾಪುರ್’, ‘ಸೇಕ್ರೆಡ್ ಗೇಮ್ಸ್’ ಅಲ್ಲ, 500 ಕೋಟಿ ಬಜೆಟ್​ನಲ್ಲಿ ಸಿದ್ಧವಾಗಿದೆ ಭಾರತದ ಈ ಸೀರಿಸ್

ಮುನ್ನ ಭಯ್ಯ ಎರಡನೇ ಸೀಸನ್​ನ ಕೊನೆಯಲ್ಲಿ ನಿಧನ ಹೊಂದುತ್ತಾನೆ. ಹೀಗಾಗಿ ಆತನ ಅನುಪಸ್ಥಿತಿ ಬಹುವಾಗಿ ಕಾಡುತ್ತದೆ. ಕಾಲೀನ್ ಭಯ್ಯ ಕೂಡ ಹೆಚ್ಚು ಹೊತ್ತು ತೆರೆಮೇಲೆ ಬರುವುದಿಲ್ಲ. ಹೀಗಾಗಿ, ಕಳೆದ ಸೀಸನ್​ಗಳಿಗಿಂತ ಈ ಸೀಸನ್ ಡಲ್ ಎನಿಸುತ್ತದೆ. ಮೊದಲ ಮೂರು ಎಪಿಸೋಡ್​ಗಳು ನಿಧಾನವಾಗಿ ಸಾಗುತ್ತವೆ. ಆ ಬಳಿಕ ಸ್ವಲ್ಪ ವೇಗ ಪಡೆದುಕೊಳ್ಳುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ