AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marakkar: ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?

Mohanlal: ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ‘ಮರಕ್ಕರ್​’ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇಂಥ ಸಿನಿಮಾಗಳನ್ನು ಚಿತ್ರಮಂದಿರದಲ್ಲಿಯೇ ನೋಡಲು ಬಯಸುತ್ತಾರೆ ಪ್ರೇಕ್ಷಕರು. ಆದರೆ ‘ಮರಕ್ಕರ್​’ ನಿರ್ಮಾಪಕರು ಓಟಿಟಿ ಹಾದಿ ಹಿಡಿದಿದ್ದಾರೆ.

Marakkar: ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?
‘ಮರಕ್ಕರ್​’ ಸಿನಿಮಾ ಪೋಸ್ಟರ್​
TV9 Web
| Updated By: ಮದನ್​ ಕುಮಾರ್​|

Updated on: Nov 07, 2021 | 8:55 AM

Share

ಭಾರತೀಯ ಚಿತ್ರರಂಗದ ಸೂಪರ್​ ಸ್ಟಾರ್​ ಕಲಾವಿದ ಮೋಹನ್​ಲಾಲ್​ ಅವರ ಸಿನಿಮಾಗಳಿಗೆ ದೊಡ್ಡ ಪ್ರೇಕ್ಷಕವರ್ಗವಿದೆ. ಮಲಯಾಳಂ ಮಾತ್ರವಲ್ಲದೇ ಇತರೆ ಭಾಷೆಯ ಸಿನಿಪ್ರಿಯರು ಕೂಡ ಮೋಹನ್​​ಲಾಲ್​​ ನಟನೆಯ ಚಿತ್ರಗಳನ್ನು ಕಣ್ಣರಳಿಸಿ ನೋಡುತ್ತಾರೆ. ಈ ವರ್ಷ ಫೆಬ್ರವರಿಯಲ್ಲಿ ತೆರೆಕಂಡ ‘ದೃಶ್ಯಂ 2’ ಸಿನಿಮಾ ಭರ್ಜರಿ ಗೆಲುವು ಪಡೆಯಿತು. ಅದರ ಬೆನ್ನಲ್ಲೇ ‘ಮರಕ್ಕರ್​: ಲಯನ್​ ಆಫ್​ ದಿ ಅರೇಬಿಯನ್​ ಸೀ’ ಸಿನಿಮಾ ಘರ್ಜಿಸಲು ಸಜ್ಜಾಗಿದೆ. ಚಿತ್ರಮಂದಿರದಲ್ಲಿಯೇ ಈ ಸಿನಿಮಾ ರಿಲೀಸ್​ ಆಗಲಿದೆ ಎಂದು ಊಹಿಸಲಾಗಿತ್ತು. ಆದರೆ ನೇರವಾಗಿ ಓಟಿಟಿ ಮೂಲಕ ಬಿಡುಗಡೆ ಮಾಡಲು ‘ಮರಕ್ಕರ್​’ ನಿರ್ಮಾಪಕರು ನಿರ್ಧರಿಸಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ‘ಮರಕ್ಕರ್​’ ಸಿನಿಮಾ ನಿರ್ಮಾಣ ಮಾಡಲಾಗಿದೆ. ಸಾಮಾನ್ಯವಾಗಿ ಇಂಥ ಸಿನಿಮಾಗಳನ್ನು ಚಿತ್ರಮಂದಿರದಲ್ಲಿಯೇ ನೋಡಲು ಬಯಸುತ್ತಾರೆ ಪ್ರೇಕ್ಷಕರು. ಸಿನಿಮಾ ಚೆನ್ನಾಗಿದ್ದರೆ ಥಿಯೇಟರ್​ನಲ್ಲೇ ದುಪ್ಪಟ್ಟು ಲಾಭ ಮಾಡುವ ಸಾಧ್ಯತೆ ದಟ್ಟವಾಗಿರುತ್ತದೆ. ಹಾಗಿದ್ದರೂ ಕೂಡ ‘ಮರಕ್ಕರ್​’ ಚಿತ್ರವನ್ನು ಓಟಿಟಿ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.

‘ಮರಕ್ಕರ್​’ ನಿರ್ಮಾಪಕರ ಈ ನಡೆ ಇಡೀ ಭಾರತೀಯ ಚಿತ್ರರಂಗದಲ್ಲಿ ಒಂದು ಕ್ರಾಂತಿಕಾರಕ ಬೆಳವಣಿಗೆ ಆಗಿದೆ. ಸಾಂಪ್ರದಾಯಿಕವಾಗಿ ಪ್ರಬಲವಾಗಿದ್ದ ಚಿತ್ರಮಂದಿರಗಳ ವ್ಯವಹಾರಕ್ಕೆ ಇದು ತೀವ್ರ ಪೆಟ್ಟು ಕೊಡಬಹುದು. ಒಂದು ಬಿಗ್​ ಬಜೆಟ್​ ಸಿನಿಮಾ ತೆರೆಕಂಡರೆ ಅದರಿಂದ ಚಿತ್ರಮಂದಿರಗಳಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ ಆಗುತ್ತದೆ. ಅನೇಕ ಜನ ಸ್ಥಳೀಯರಿಗೆ ಉದ್ಯೋಗ ಸಿಗುತ್ತದೆ. ಆದರೆ ಓಟಿಟಿಯಲ್ಲಿ ತೆರೆಕಂಡರೆ ಚಿತ್ರಮಂದಿರಗಳಿಗಾಗಲೀ, ಸ್ಥಳೀಯ ಜನರಿಗಾಗಲಿ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ.

ಎಷ್ಟು ಕೋಟಿಗೆ ‘ಮರಕ್ಕರ್​’ ಸಿನಿಮಾ ಸೇಲ್​ ಆಗಿದೆ ಎಂಬ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈಗಾಗಲೇ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’, ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾಗಳಿಗೂ ಕೂಡ ಓಟಿಟಿ ಸಂಸ್ಥೆಗಳಿಂದ ಬೇಡಿಕೆ ಬಂದಿತ್ತು. ಆದರೆ ಈ ಸಿನಿಮಾಗಳ ನಿರ್ಮಾಪಕರು ಅದನ್ನು ಒಪ್ಪಿಕೊಂಡಿಲ್ಲ. ಚಿತ್ರಮಂದಿರದಲ್ಲಿಯೇ ಬಿಡುಗಡೆ ಮಾಡಬೇಕು ಎಂಬುದು ಅವರ ಉದ್ದೇಶ. ಒಂದು ವೇಳೆ ‘ಮರಕ್ಕರ್​’ ಸಿನಿಮಾ ಓಟಿಟಿಯಲ್ಲಿ ಅದ್ಭುತವಾದ ಬ್ಯುಸಿನೆಸ್​ ಮಾಡಿದರೆ ಅದು ‘ಕೆಜಿಎಫ್​ 2’, ‘ಆರ್​ಆರ್​ಆರ್​’ ಮುಂತಾದ ಬಿಗ್​ ಬಜೆಟ್​ ಸಿನಿಮಾಗಳ ನಿರ್ಮಾಪಕರನ್ನು ಆಕರ್ಷಿಸಬಹುದು. ಮುಂಬರುವ ದಿನಗಳಲ್ಲಿ ಹೀಗೆ ಬಿಗ್​ ಬಜೆಟ್​ನಲ್ಲಿ ತಯಾರಾಗುವ ಹೊಸ ಸಿನಿಮಾಗಳ ನಿರ್ಮಾಪಕರು ನೇರವಾಗಿ ಓಟಿಟಿಯನ್ನೇ ಆಯ್ಕೆ ಮಾಡಿಕೊಂಡರೂ ಅಚ್ಚರಿ ಏನಿಲ್ಲ.

ಕೊವಿಡ್​ ಕಾರಣದಿಂದ ‘ಮರಕ್ಕರ್​’ ಸಿನಿಮಾದ ಬಿಡುಗಡೆ ದಿನಾಂಕ ಪದೇಪದೇ ಮುಂದೂಡಲ್ಪಡುತ್ತಲೇ ಬಂದಿತ್ತು. ಹಾಗಾಗಿ ಅಂತಿಮವಾಗಿ ಓಟಿಟಿ ಮೊರೆ ಹೋಗಲಾಗಿದೆ. ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಬಿಡುಗಡೆ ದಿನಾಂಕ ಕೂಡ ಎರಡೆರಡು ಬಾರಿ ಮುಂದೂಡಿಕೆ ಆಗಿತ್ತು. ಅಂತಿಮವಾಗಿ 2022ರ ಜ.7ರಂದು ‘ಆರ್​ಆರ್​ಆರ್​’ ಹಾಗೂ 2022ರ ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು

ನವೆಂಬರ್​ ತಿಂಗಳು ಪೂರ್ತಿ ಕನ್ನಡ ಸಿನಿಮಾಗಳ ಉತ್ಸವ; ರಿಲೀಸ್​ ಆಗುತ್ತಿವೆ ಮಸ್ತ್​ ಚಿತ್ರಗಳು

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ