AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಿ ಹೇಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಈ ವೆಬ್​ ಸೀರಿಸ್​ನಲ್ಲಿ ಪ್ರೊಫೆಸರ್​ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಪ್ರತಿ ದರೋಡೆಯ ರುವಾರಿ ಇದೇ ಪ್ರೊಫೆಸರ್​.

ಮನಿ ಹೇಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ
ಮನಿ ಹೇಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ
TV9 Web
| Edited By: |

Updated on: Aug 28, 2021 | 3:36 PM

Share

‘ಮನಿ ಹೇಸ್ಟ್’​ ವೆಬ್​ ಸೀರಿಸ್ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದಿದೆ. ಸ್ಪ್ಯಾನಿಶ್​ ಭಾಷೆಯ ಈ ವೆಬ್​ ಸೀರಿಸ್​ನಲ್ಲಿ ಬರುವ ಪ್ರತಿ ಪಾತ್ರಗಳು ಹಾಗೂ ಅವರಿಗೆ ಇಡಲಾದ ಹೆಸರುಗಳು ವೀಕ್ಷಕರಿಗೆ ಸಾಕಷ್ಟು ಇಷ್ಟವಾಗಿದೆ. ಈ ಕಾರಣಕ್ಕೆ ಭಾರತದಲ್ಲೂ ಇದಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ. ಈ ವೆಬ್​ ಸೀರಿಸ್​ನಲ್ಲಿ ಪ್ರೊಫೆಸರ್​ ಪಾತ್ರ ಮಾಡಿದ ಅಲ್ವಾರೊ ಮೊರ್ಟೆಗೆ ಕಾಲಿನ ಕ್ಯಾನ್ಸರ್​ ಕಾಡಿತ್ತು. ಈಗ ಅವರು ಅದರಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಈ ವೆಬ್​ ಸೀರಿಸ್​ನಲ್ಲಿ ಪ್ರೊಫೆಸರ್​ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಪ್ರತಿ ದರೋಡೆಯ ರುವಾರಿ ಇದೇ ಪ್ರೊಫೆಸರ್​. ಅಲ್ವಾರೊ ನಿರ್ವಹಿಸಿರುವ ಪಾತ್ರದ  ಮ್ಯಾನರಿಸಮ್​ ಎಲ್ಲರಿಗೂ ಇಷ್ಟವಾಗುತ್ತಿದೆ. ಅವರಿಗೆ ಒಂದು ಕಾಲದಲ್ಲಿ ಕ್ಯಾನ್ಸರ್​ ಕಾಡಿತ್ತು. ಅದರಿಂದ ಅವರು ಬದುಕಿ ಬಂದಿದ್ದಾರೆ.

‘ನಾನು ಹಾಸಿಗೆಯ ಮೇಲೆ ಮಲಗಿದ್ದೆ. ಬಿಳಿ ಬಣ್ಣದ ಕೋಟ್​ ಹಾಕಿ ಡಾಕ್ಟರ್​ ನನ್ನ ಬಳಿ ಬಂದರು. ನೀನು ಸಾಯುತ್ತೀಯಾ ಅಥವಾ ನಿನ್ನ ಕಾಲನ್ನು ಕತ್ತರಿಸಬೇಕು ಎಂದು ವೈದ್ಯರು ಹೇಳುತ್ತಾರೆ. ಅದೆರಡೇ ನನ್ನ ಮುಂದಿರುವ ಆಯ್ಕೆ ಎಂದು ನಾನು ಭಾವಿಸಿದ್ದೆ. ಆದರೆ, ವೈದ್ಯರು ಹಾಗೆ ಹೇಳಲಿಲ್ಲ. ಅವರು ಇದನ್ನು ಗುಣಮಾಡಬಹುದು ಎಂದರು. ಅಂತೆಯೇ ನಾನು ಕ್ಯಾನ್ಸರ್​ನಿಂದ ಗುಣಮುಖನಾದೆ’ ಎಂದಿದ್ದಾರೆ ಅವರು.

‘ಮನಿ ಹೇಸ್ಟ್’​ ಯಶಸ್ವಿಯಾಗಿ ನಾಲ್ಕು ಸೀಸನ್​ ಪೂರ್ಣಗೊಳಿಸಿದೆ. ನೆಟ್​​ಫ್ಲಿಕ್ಸ್​ನಲ್ಲಿ ಈ ವೆಬ್​ ಸೀರಿಸ್​ ಪ್ರಸಾರವಾಗುತ್ತಿದೆ. ಐದನೇ ಸೀಸನ್​ ಸೆಪ್ಟೆಂಬರ್ 3ರಂದು ಪ್ರಸಾರಗೊಳ್ಳಲಿದೆ. ಐದನೇ ಸೀಸನ್​ ಎರಡು ಪಾರ್ಟ್​ಗಳಲ್ಲಿ ಬರುತ್ತಿದೆ ಅನ್ನೋದು ವಿಶೇಷ. ಈ ವೆಬ್​ ಸೀರಿಸ್​ಗಾಗಿ ಅನೇಕರು ಕಾದು ಕೂತಿದ್ದಾರೆ.

ಇದನ್ನೂ ಓದಿ: ‘ಜಗಳವಾಡಿ ಕ್ಷಮೆ ಕೇಳುವುದರೊಳಗೆ ಹೆಣವಾಗಿ ಬಂದಿದ್ದರು ತಂದೆ’​; ‘ನನ್ನರಸಿ ರಾಧೆ’ ಅಭಿನವ್ ನೋವಿನ ಕಥೆ 

ಬಿಗ್​ ಬಾಸ್​ ಹೊಸ ಸೀಸನ್​ ಸೆ.5ರಿಂದ ಆರಂಭ; ಗನ್​ ಹಿಡಿದು ಬಂದ ನಿರೂಪಕ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ