AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಿ ಹೇಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಈ ವೆಬ್​ ಸೀರಿಸ್​ನಲ್ಲಿ ಪ್ರೊಫೆಸರ್​ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಪ್ರತಿ ದರೋಡೆಯ ರುವಾರಿ ಇದೇ ಪ್ರೊಫೆಸರ್​.

ಮನಿ ಹೇಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ
ಮನಿ ಹೇಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ
TV9 Web
| Edited By: |

Updated on: Aug 28, 2021 | 3:36 PM

Share

‘ಮನಿ ಹೇಸ್ಟ್’​ ವೆಬ್​ ಸೀರಿಸ್ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದಿದೆ. ಸ್ಪ್ಯಾನಿಶ್​ ಭಾಷೆಯ ಈ ವೆಬ್​ ಸೀರಿಸ್​ನಲ್ಲಿ ಬರುವ ಪ್ರತಿ ಪಾತ್ರಗಳು ಹಾಗೂ ಅವರಿಗೆ ಇಡಲಾದ ಹೆಸರುಗಳು ವೀಕ್ಷಕರಿಗೆ ಸಾಕಷ್ಟು ಇಷ್ಟವಾಗಿದೆ. ಈ ಕಾರಣಕ್ಕೆ ಭಾರತದಲ್ಲೂ ಇದಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ. ಈ ವೆಬ್​ ಸೀರಿಸ್​ನಲ್ಲಿ ಪ್ರೊಫೆಸರ್​ ಪಾತ್ರ ಮಾಡಿದ ಅಲ್ವಾರೊ ಮೊರ್ಟೆಗೆ ಕಾಲಿನ ಕ್ಯಾನ್ಸರ್​ ಕಾಡಿತ್ತು. ಈಗ ಅವರು ಅದರಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಈ ವೆಬ್​ ಸೀರಿಸ್​ನಲ್ಲಿ ಪ್ರೊಫೆಸರ್​ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಪ್ರತಿ ದರೋಡೆಯ ರುವಾರಿ ಇದೇ ಪ್ರೊಫೆಸರ್​. ಅಲ್ವಾರೊ ನಿರ್ವಹಿಸಿರುವ ಪಾತ್ರದ  ಮ್ಯಾನರಿಸಮ್​ ಎಲ್ಲರಿಗೂ ಇಷ್ಟವಾಗುತ್ತಿದೆ. ಅವರಿಗೆ ಒಂದು ಕಾಲದಲ್ಲಿ ಕ್ಯಾನ್ಸರ್​ ಕಾಡಿತ್ತು. ಅದರಿಂದ ಅವರು ಬದುಕಿ ಬಂದಿದ್ದಾರೆ.

‘ನಾನು ಹಾಸಿಗೆಯ ಮೇಲೆ ಮಲಗಿದ್ದೆ. ಬಿಳಿ ಬಣ್ಣದ ಕೋಟ್​ ಹಾಕಿ ಡಾಕ್ಟರ್​ ನನ್ನ ಬಳಿ ಬಂದರು. ನೀನು ಸಾಯುತ್ತೀಯಾ ಅಥವಾ ನಿನ್ನ ಕಾಲನ್ನು ಕತ್ತರಿಸಬೇಕು ಎಂದು ವೈದ್ಯರು ಹೇಳುತ್ತಾರೆ. ಅದೆರಡೇ ನನ್ನ ಮುಂದಿರುವ ಆಯ್ಕೆ ಎಂದು ನಾನು ಭಾವಿಸಿದ್ದೆ. ಆದರೆ, ವೈದ್ಯರು ಹಾಗೆ ಹೇಳಲಿಲ್ಲ. ಅವರು ಇದನ್ನು ಗುಣಮಾಡಬಹುದು ಎಂದರು. ಅಂತೆಯೇ ನಾನು ಕ್ಯಾನ್ಸರ್​ನಿಂದ ಗುಣಮುಖನಾದೆ’ ಎಂದಿದ್ದಾರೆ ಅವರು.

‘ಮನಿ ಹೇಸ್ಟ್’​ ಯಶಸ್ವಿಯಾಗಿ ನಾಲ್ಕು ಸೀಸನ್​ ಪೂರ್ಣಗೊಳಿಸಿದೆ. ನೆಟ್​​ಫ್ಲಿಕ್ಸ್​ನಲ್ಲಿ ಈ ವೆಬ್​ ಸೀರಿಸ್​ ಪ್ರಸಾರವಾಗುತ್ತಿದೆ. ಐದನೇ ಸೀಸನ್​ ಸೆಪ್ಟೆಂಬರ್ 3ರಂದು ಪ್ರಸಾರಗೊಳ್ಳಲಿದೆ. ಐದನೇ ಸೀಸನ್​ ಎರಡು ಪಾರ್ಟ್​ಗಳಲ್ಲಿ ಬರುತ್ತಿದೆ ಅನ್ನೋದು ವಿಶೇಷ. ಈ ವೆಬ್​ ಸೀರಿಸ್​ಗಾಗಿ ಅನೇಕರು ಕಾದು ಕೂತಿದ್ದಾರೆ.

ಇದನ್ನೂ ಓದಿ: ‘ಜಗಳವಾಡಿ ಕ್ಷಮೆ ಕೇಳುವುದರೊಳಗೆ ಹೆಣವಾಗಿ ಬಂದಿದ್ದರು ತಂದೆ’​; ‘ನನ್ನರಸಿ ರಾಧೆ’ ಅಭಿನವ್ ನೋವಿನ ಕಥೆ 

ಬಿಗ್​ ಬಾಸ್​ ಹೊಸ ಸೀಸನ್​ ಸೆ.5ರಿಂದ ಆರಂಭ; ಗನ್​ ಹಿಡಿದು ಬಂದ ನಿರೂಪಕ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್