AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Heist 5: ಉದ್ಯೋಗಿಗಳಿಗೆ ನೆಟ್​ಫ್ಲಿಕ್ಸ್​ ಸಬ್​ಸ್ಕ್ರಿಪ್ಶನ್​ ನೀಡಿ ರಜೆ ಘೋಷಿಸಿದ ಭಾರತದ ಕಂಪನಿ

‘ಮನಿ ಹೈಸ್ಟ್​’ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರತಿ ಪಾತ್ರಕ್ಕೂ ಖ್ಯಾತ ನಗರಗಳ ಹೆಸರನ್ನು ಇಟ್ಟಿರೋದು ವಿಶೇಷ. ಬ್ಯಾಂಕ್​ ದರೋಡೆ ಮಾಡುವ ಒಂದು ತಂಡದ ಕಥೆಯನ್ನು ಈ ವೆಬ್​ ಸೀರಿಸ್​ ಹೇಳುತ್ತಿದೆ.

Money Heist 5: ಉದ್ಯೋಗಿಗಳಿಗೆ ನೆಟ್​ಫ್ಲಿಕ್ಸ್​ ಸಬ್​ಸ್ಕ್ರಿಪ್ಶನ್​ ನೀಡಿ ರಜೆ ಘೋಷಿಸಿದ ಭಾರತದ ಕಂಪನಿ
Money Heist 5: ಉದ್ಯೋಗಿಗಳಿಗೆ ನೆಟ್​ಫ್ಲಿಕ್ಸ್​ ಸಬ್​ಸ್ಕ್ರಿಪ್ಶನ್​ ನೀಡಿ ರಜೆ ಘೋಷಿಸಿದ ಭಾರತದ ಕಂಪನಿ
TV9 Web
| Edited By: |

Updated on: Sep 01, 2021 | 6:59 PM

Share

‘ಮನಿ ಹೈಸ್ಟ್​ ಸೀಸನ್​ 5’ ರಿಲೀಸ್​ಗೆ ಕ್ಷಣಗಣನೆ ಆರಂಭವಾಗಿದೆ. ಸೆಪ್ಟೆಂಬರ್​​ 3ರಂದು ಈ ಸಿರೀಸ್​ ರಿಲೀಸ್​ ಆಗುತ್ತಿದೆ. ಮೂಲತಃ ಸ್ಪ್ಯಾನಿಶ್​ ವೆಬ್​ ಸೀರಿಸ್​ ಇದಾಗಿದ್ದು, ಇಂಗ್ಲಿಷ್​ನಲ್ಲೂ ಡಬ್​ ಆಗಿ ನೆಟ್​ಫ್ಲಿಕ್ಸ್​ನಲ್ಲಿ ತೆರೆಕಾಣುತ್ತಿದೆ. ಭಾರತದಲ್ಲಿಯೂ ಈ ವೆಬ್​ ಸೀರಿಸ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ರಿಲೀಸ್​ ದಿನಾಂಕ ಸಮೀಪಿಸಿದಂತೆ ಈ ವೆಬ್​ ಸೀರಿಸ್​ ಕ್ರೇಜ್​ ಜೋರಾಗಿದೆ. ಅಚ್ಚರಿ ಎಂದರೆ, ಈ ವೆಬ್​ ಸೀರಿಸ್​ ರಿಲೀಸ್​ ಆಗುವ ದಿನ ಕಂಪೆನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ.

‘ಮನಿ ಹೈಸ್ಟ್​’ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರತಿ ಪಾತ್ರಕ್ಕೂ ಖ್ಯಾತ ನಗರಗಳ ಹೆಸರನ್ನು ಇಟ್ಟಿರೋದು ವಿಶೇಷ. ಬ್ಯಾಂಕ್​ ದರೋಡೆ ಮಾಡುವ ಒಂದು ತಂಡದ ಕಥೆಯನ್ನು ಈ ವೆಬ್​ ಸೀರಿಸ್​ ಹೇಳುತ್ತಿದೆ. ಸಾಕಷ್ಟು ಕುತೂಹಲಕಾರಿ ಅಂಶ ಹಾಗೂ ಪ್ರಶ್ನೆಗಳೊಂದಿಗೆ ನಾಲ್ಕನೇ ಸೀಸನ್​ ಅಂತ್ಯವಾಗಿತ್ತು. ಈ ಎಲ್ಲಾ ಪ್ರಶ್ನೆಗಳಿಗೆ ಸೀಸನ್​ 5ರಲ್ಲಿ ಉತ್ತರ ಸಿಗುವ ನಿರೀಕ್ಷೆ ಪ್ರೇಕ್ಷಕರಲ್ಲಿದೆ. ಈ ಕಾರಣಕ್ಕೆ ಈ ವೆಬ್​ ಸೀರಿಸ್​ ನೋಡೋಕೆ ಅನೇಕರು ತುದಿಗಾಲಿನಲ್ಲಿ ನಿಂತಿದ್ದಾರೆ.

ಜೈಪುರ ಮೂಲದ ಕಂಪೆನಿ ಸೆಪ್ಟೆಂಬರ್​ 3ರಂದು ರಜೆ ಘೋಷಿಸಿದೆ. ಈ ವಿಶೇಷ ರಜೆಗೆ ‘ನೆಟ್​ಫ್ಲಿಕ್ಸ್​ ಮತ್ತು ಚಿಲ್​ ಹಾಲಿಡೇ’ ಎಂದು ಹೆಸರಿಡಲಾಗಿದೆ. ಈ ಬಗ್ಗೆ ಕಂಪೆನಿಯ ಸಿಇಒ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಕಳೆದ ಎರಡು ವರ್ಷಗಳಿಂದ ಎಲ್ಲಾ ಸಿಬ್ಬಂದಿ ಪ್ರಾಮಾಣಿಕವಾಗಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಸೆಪ್ಟೆಂಬರ್​ 3ರಂದು ‘ಮನಿ ಹೈಸ್ಟ್’​ ನೋಡೋಕೆ ನಾವು ಅವಕಾಶ ಮಾಡಿಕೊಡುತ್ತಿದ್ದೇವೆ. ಅಂದು ಸಿಬ್ಬಂದಿಗೆ ರಜೆ ನೀಡುತ್ತಿದ್ದೇವೆ. ನೆಟ್​ಫ್ಲಿಕ್ಸ್​ ಸಬ್​ಸ್ಕ್ರಿಪ್ಶನ್​ ಇಲ್ಲದವರಿಗೆ ಅದನ್ನೂ ನೀಡುತ್ತಿದ್ದೇವೆ’ ಎಂದಿದ್ದಾರೆ ಅಭಿಷೇಕ್.

ಸದ್ಯ, ಈ ಸಿಇಒ ಹೇಳಿಕೆ ಸಾಕಷ್ಟು ವೈರಲ್​ ಆಗುತ್ತಿದೆ. ಅನೇಕರು ಈ ಬಗ್ಗೆ ಅಚ್ಚರಿ ಕೂಡ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮನಿ ಹೈಸ್ಟ್​ ಪ್ರೊಫೆಸರ್​ಗೆ ಕಾಡಿತ್ತು ಕ್ಯಾನ್ಸರ್​; ಅವರ ಮುಂದಿತ್ತು ಸಾವು ಅಥವಾ ಕಾಲು ಕತ್ತರಿಸುವ ಆಯ್ಕೆ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ