AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಕನ್ನಡದ ‘ಮೂರು ಕಾಸಿನ ಕುದುರೆ’ ಸಿನಿಮಾ

‘ಮೂರು ಕಾಸಿನ ಕುದುರೆ’ ಸಿನಿಮಾಗೆ ಕರ್ತೃ ಗಿರೀಶ್ ನಿರ್ದೇಶನ ಮಾಡಿದ್ದು, ಅವರೇ ಬಂಡವಾಳ ಹೂಡಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ಗೋವಿಂದೇಗೌಡ, ಸನಾತನಿ, ಪೂರ್ಣಚಂದ್ರ ಮೈಸೂರು ಅವರು ಅಭಿನಯಿಸಿದ್ದಾರೆ. ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಸಿನಿಮಾ ಪ್ರಸಾರ ಆಗುತ್ತಿರುವ ಪ್ರಯುಕ್ತ ಚಿತ್ರತಂಡದವರು ಸುದ್ದಿಗೋಷ್ಠಿ ಆಯೋಜಿಸಿದ್ದರು.

‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಕನ್ನಡದ ‘ಮೂರು ಕಾಸಿನ ಕುದುರೆ’ ಸಿನಿಮಾ
‘ಮೂರು ಕಾಸಿನ ಕುದುರೆ’ ಚಿತ್ರತಂಡ
ಮದನ್​ ಕುಮಾರ್​
|

Updated on: Oct 31, 2024 | 4:51 PM

Share

‘ಮೂರು ಕಾಸಿನ ಕುದುರೆ’ ಸಿನಿಮಾದಲ್ಲಿ ಸೋಷಿಯಲ್ ಡ್ರಾಮಾ ಶೈಲಿಯ ಕಹಾನಿ ಇದೆ. ಈ ಸಿನಿಮಾದಲ್ಲಿ ಪ್ರಮುಖವಾಗಿ 3 ಪಾತ್ರಗಳಿವೆ. ಪೂರ್ಣಚಂದ್ರ ಮೈಸೂರು, ಗೋವಿಂದೇಗೌಡ ಹಾಗೂ ಸನಾತನಿ ಅವರು ಆ ಪಾತ್ರಗಳನ್ನು ನಿಭಾಯಿಸಿದ್ದಾರೆ. ಕರ್ತೃ ಗಿರೀಶ್ ಅವರು ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲಿಲ್ಲ. ಅಷ್ಟರಲ್ಲಾಗಲೇ ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ (ರೆಂಟಲ್) ವೀಕ್ಷಣೆಗೆ ಲಭ್ಯವಾಗಿದೆ. ಇದು ಚಿತ್ರತಂಡಕ್ಕೆ ಖುಷಿ ನೀಡಿದೆ. ಇತ್ತೀಚೆಗೆ ‘ಮೂರು ಕಾಸಿನ ಕುದುರೆ’ ಚಿತ್ರದ ಸುದ್ದಿಗೋಷ್ಠಿ ನಡೆಯಿತು.

‘ಮೂರು ಕಾಸಿನ ಕುದುರೆ’ ಚಿತ್ರಕ್ಕೆ ಪ್ರದೀಪ್ ಗಾಂಧಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಆನಂದರಾಜಾ ವಿಕ್ರಮ ಅವರ ಸಂಗೀತ ನಿರ್ದೇಶನ ಮಾಡಿದ್ದಾರೆ. ತಂತ್ರಜ್ಞಾನ ಸುಲಭವಾಗಿ ಕೈಗೆ ಸಿಗುತ್ತಿರುವುದರಿಂದ ಸಿನಿಮಾವನ್ನು ಹೇಗೋ ನಿರ್ಮಾಣ ಮಾಡಬಹುದು. ಆದರೆ ರಿಲೀಸ್​ ಮಾಡುವುದು ಕಷ್ಟದ ಕೆಲಸ. ಆ ಕಾರಣದಿಂದ ಅನೇಕ ಚಿತ್ರತಂಡಗಳು ತಮ್ಮ ಸಿನಿಮಾವನ್ನು ಬಿಡುಗಡೆ ಮಾಡದೇ ಸುಮ್ಮನಾಗಿವೆ. ಈ ಸಂದರ್ಭದಲ್ಲಿ ‘ಮೂರು ಕಾಸಿನ ಕುದುರೆ’ ಸಿನಿಮಾಗೆ ಒಟಿಟಿ ಹಾದಿ ಕಾಣಿಸಿದೆ.

ಗಿರೀಶ್ ನಿರ್ದೇಶನ ಮಾಡಿದ ‘ಮೂರು ಕಾಸಿನ ಕುದುರೆ’ ಸಿನಿಮಾ ಸಿದ್ಧವಾಗಿ 2 ವರ್ಷ ಕಳೆದಿದೆ. ಆದರೆ ವಿತರಕರು ಸಿಗದ ಕಾರಣ ಚಿತ್ರಮಂದಿರದಲ್ಲಿ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಇತ್ತೀಚೆಗೆ ‘ಅಮೆಜಾನ್ ಪ್ರೈಂ ವಿಡಿಯೋ’ ಒಟಿಟಿ ಸಂಸ್ಥೆಯವರು ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಹಾಗಾಗಿ ಚಿತ್ರತಂಡದ ಜೊತೆ ಒಟಿಟಿ ಕೈ ಜೋಡಿಸಿದೆ. ಕಳೆದ ಕೆಲವು ದಿನಗಳಿಂದ ಈ ಸಿನಿಮಾ ‘ಅಮೆಜಾನ್ ಪ್ರೈಂ ವಿಡಿಯೋ’ದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದು ಸಿನಿಮಾ ತಂಡಕ್ಕೆ ಸಂತಸ ಮೂಡಿಸಿದೆ.

ಒಟಿಟಿಯಲ್ಲಿ ‘ಮೂರು ಕಾಸಿನ ಕುದುರೆ’ ನೋಡಿದ ಕೆಲವರು ಇಂಥ ಉತ್ತಮ ಸಿನಿಮಾವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಿ ಎಂದು ಒತ್ತಾಯಿಸುತ್ತಿದ್ದಾರಂತೆ. ಈ ಮಾಹಿತಿಯನ್ನು ಸುದ್ದಿಯಲ್ಲಿ ಚಿತ್ರತಂಡ ಹಂಚಿಕೊಂಡಿತು. ಬಳಿಕ ಪಾತ್ರಧಾರಿಗಳು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: ಕನ್ನಡ ಸಿನಿಮಾಗಳಿಗೆ ಕಡಿಮೆ ದರದ ಹೊಸ ಒಟಿಟಿ ವೇದಿಕೆ

ನಿರ್ಮಾಪಕ/ನಿರ್ದೇಶಕ ಗಿರೀಶ್ ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಒಂದಷ್ಟು ಧಾರಾವಾಹಿ ಹಾಗೂ ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಈಗ ‘ಮೂರು ಕಾಸಿನ ಕುದುರೆ’ ಸಿನಿಮಾವನ್ನು ಮಾಡಿದ್ದಾರೆ. ಈ ಸಿನಿಮಾದಲ್ಲಿ ಕಿಡ್ನಾಪ್ ಕುರಿತ ಕಥೆ ಇದೆ. ಒಬ್ಬ ನಟ, ಮತ್ತೊಬ್ಬ ಕ್ಯಾಬ್ ಚಾಲಕ, ಮನೆಬಿಟ್ಟು ಬಂದ ಯುವತಿ ಈ ಮೂವರು ಒಂದೇ ಕ್ಯಾಬ್​ನಲ್ಲಿ ಪ್ರಮಾಣ ಮಾಡುವಾಗ ನಡೆಯುವ ಸನ್ನಿವೇಶಗಳೇ ಈ ಸಿನಿಮಾದ ಹೈಲೈಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್