AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OTT Movies: ಈ ವಾರ ಒಟಿಟಿಗೆ ಲಗ್ಗೆ ಇಡಲಿವೆ ಭರ್ಜರಿ ಸಿನಿಮಾಗಳು: ಇಲ್ಲಿದೆ ಪಟ್ಟಿ

OTT Release: ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳು ಅಬ್ಬರಿಸುತ್ತಿರುವಾಗಲೆ ಕೆಲವು ಒಳ್ಳೆಯ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ದಾಂಗುಡಿ ಇಟ್ಟಿವೆ.

OTT Movies: ಈ ವಾರ ಒಟಿಟಿಗೆ ಲಗ್ಗೆ ಇಡಲಿವೆ ಭರ್ಜರಿ ಸಿನಿಮಾಗಳು: ಇಲ್ಲಿದೆ ಪಟ್ಟಿ
ಒಟಿಟಿ
ಮಂಜುನಾಥ ಸಿ.
|

Updated on: Jul 30, 2023 | 4:12 PM

Share

ಚಿತ್ರಮಂದಿರಗಳಲ್ಲಿ (Theater) ಕನ್ನಡದ ಸಿನಿಮಾಗಳು ಅಬ್ಬರಿಸುತ್ತಿವೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’, ‘ಕೌಸಲ್ಯ ಸುಪ್ರಜಾ ರಾಮ’, ‘ಆಚಾರ್ ಆಂಡ್ ಕೋ’ ಸಿನಿಮಾಗಳು ದೊಡ್ಡ ಸೂಪರ್ ಸ್ಟಾರ್​ಗಳಿಲ್ಲದೆಯೂ ಕೇವಲ ಕಂಟೆಂಟ್​ನಿಂದ ಗಮನ ಸೆಳೆಯುತ್ತಿವೆ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಸೆಳೆಯುತ್ತಿವೆ. ಕನ್ನಡ ಸಿನಿಮಾಗಳ ಮುಂದೆ ಪರಭಾಷೆ ಸಿನಿಮಾಗಳು ಮಂಕಾಗಿವೆ. ಆದರೆ ಇದರ ನಡುವೆ ಕೆಲವು ಒಳ್ಳೆಯ ಪರಭಾಷೆ ಸಿನಿಮಾಗಳು ಒಟಿಟಿಗೆ (OTT) ಲಗ್ಗೆ ಇಟ್ಟಿವೆ. ಅದರಲ್ಲಿ ಮುಖ್ಯವಾದ ಕೆಲವು ಸಿನಿಮಾ ಹಾಗೂ ವೆಬ್ ಸರಣಿಗಳ ಪಟ್ಟಿ ಇಲ್ಲಿದೆ.

ಒಂದು ತಿಂಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ‘ಮಾಮನ್ನನ್’ ಸಿನಿಮಾ ಇದೀಗ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಉದಯ್​ನಿಧಿ ಸ್ಟಾಲಿನ್, ವಡಿವೇಲು ನಟನೆಯ ಈ ಸಿನಿಮಾ ಬಗ್ಗೆ ಬಹಳ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಸಿನಿಮಾವನ್ನು ಮಾರಿ ಸೆಲ್ವರಾಜ್ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಜಾತಿ ವಿಷಯ ಆಧರಿಸಿದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾವನ್ನು ನೆಟ್​ಫ್ಲಿಕ್ಸ್​ನಲ್ಲಿ ನೋಡಬಹುದಾಗಿದೆ.

ಇತ್ತೀಚೆಗಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಫ್ಲಾಪ್ ಆಗಿದ್ದ ನಿಖಿಲ್ ಸಿದ್ಧಾರ್ಥ್ ನಟನೆಯ ‘ಸ್ಪೈ’ ಸಿನಿಮಾ ಇದೀಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಕಂಡಿದೆ. ಸುಭಾಷ್ ಚಂದ್ರ ಭೋಸ್ ಸಾವಿನ ರಹಸ್ಯ ಬೆನ್ನತ್ತುವ ಗೂಢಚಾರಿಯೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ಬಿಡುಗಡೆ ಸಮಯದಲ್ಲಿ ವ್ಯಕ್ತವಾಗಲಿಲ್ಲ.

ಇದನ್ನೂ ಓದಿ:ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಜೊತೆ ಬಂದ ವಿವೇಕ್ ಅಗ್ನಿಹೋತ್ರಿ; ಈ ಬಾರಿ ನೇರವಾಗಿ ಒಟಿಟಿಗೆ ಎಂಟ್ರಿ

ತಮಿಳಿನ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಪೋರ್ ತೊಳಿಲ್’ ಆಗಸ್ಟ್ 4 ರಂದು ಸೋನಿ ಲಿವ್​ನಲ್ಲಿ ಬಿಡುಗಡೆ ಆಗಲಿದೆ. ಸೈಕೋ ಕೊಲೆಗಾರನೊಬ್ಬನ ಬೆನ್ನು ಹತ್ತುವ ಇಬ್ಬರು ಪೊಲೀಸರ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಜೂನ್ 9 ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ಕೇಳಿ ಬಂದಿದ್ದವು. ಇದೀಗ ಸಿನಿಮಾ ಆಗಸ್ಟ್ 4ರಂದು ಸೋನಿ ಲಿವ್​ನಲ್ಲಿ ಬಿಡುಗಡೆ ಆಗುತ್ತಿದೆ.

ನಟ ನರೇಶ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಾಮಿಡಿ, ಕೌಟುಂಬಿಕ ಸಿನಿಮಾ ‘ಮಾಯಾಬಜಾರ್’ ಕೆಲವು ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ವಿಮರ್ಶೆ ಗಳಿಸಿತ್ತು. ನರೇಶ್ ನಟನೆಗೆ ಮೆಚ್ಚುಗೆ ವ್ಯಕ್ತವಾಗುವ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬಿಡುಗಡೆ ಆದ ಉತ್ತಮ ಕಾಮಿಡಿ ಹಾಗೂ ಕೌಟುಂಬಿಕ ಸಿನಿಮಾ ಎಂಬ ಖ್ಯಾತಿಗೆ ಮಾಯಾಬಜಾರ್ ಪಾತ್ರವಾಗಿತ್ತು. ಇದೀಗ ಈ ಸಿನಿಮಾ ಜೀ5 ಬಿಡುಗಡೆ ಆಗಿದೆ. ಈ ವಾರದಿಂದ ವೀಕ್ಷಣೆಗೆ ಸಿನಿಮಾ ಲಭ್ಯವಿದೆ.

ನಟಿ ತಮನ್ನಾರ ಬಾಯ್​ಫ್ರೆಂಡ್ ವಿಜಯ್ ವರ್ಮಾ ಅಪರೂಪಕ್ಕೆ ನಾಯಕನ ಪಾತ್ರದಲ್ಲಿ ನಟಿಸಿರುವ ‘ಕಾಲಕೂಟ್’ ವೆಬ್ ಸರಣಿ ಇದೇ ವಾರ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಜಿಯೋ ಸಿನಿಮಾಸ್​ನಲ್ಲಿ ‘ಕಾಲಕೂಟ್’ ವೆಬ್ ಸರಣಿಯನ್ನು ಉಚಿತವಾಗಿ ನೋಡಬಹುದಾಗಿದೆ. ಉದ್ಯೋಗದಿಂದ ಬೇಸತ್ತ ಇನ್​ಸ್ಪೆಕ್ಟರ್ ಒಬ್ಬನ ಬಳಿ ಒಂದು ಆಸಿಡ್ ದಾಳಿಯ ಪ್ರಕರಣ ಬರುತ್ತದೆ ಅದು ಆತನನ್ನು ಮತ್ತೆ ಉದ್ಯೋಗವನ್ನು ಮಾಡುವಂತೆ ಮಾಡುತ್ತದೆ. ಥ್ರಿಲ್ಲರ್ ಕತೆಯನ್ನು ಈ ವೆಬ್ ಸರಣಿ ಒಳಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ