AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಈ ವಾರ ಹೊಸದಾಗಿ ರಿಲೀಸ್ ಆದ ಈ ಎರಡು ಸಿನಿಮಾಗಳನ್ನು ತಪ್ಪದೇ ನೋಡಿ

ವೀಕೆಂಡ್​ನಲ್ಲಿ ಯಾವ ಸಿನಿಮಾ ನೋಡಬೇಕು ಎನ್ನುವ ಪ್ರಶ್ನೆ ಅನೇಕರಲ್ಲಿ ಇರುತ್ತದೆ. ಇದಕ್ಕೆ ಉತ್ತರವನ್ನು ನಾವು ನೀಡುತ್ತಿದ್ದೇವೆ. ಈ ವಾರಾಂತ್ಯದಲ್ಲಿ ಒಟಿಟಿಯಲ್ಲಿ ವೀಕ್ಷಿಸಲು ಎರಡು ಅದ್ಭುತ ಚಿತ್ರಗಳನ್ನು ನಾವು ಶಿಫಾರಸು ಮಾಡುತ್ತಿದ್ದೇವೆ. ಎರಡೂ ಸಿನಿಮಾಗಳು ಹೊಸದಾಗಿ ರಿಲೀಸ್ ಆಗಿವೆ ಅನ್ನೋದು ವಿಶೇಷ .

ಒಟಿಟಿಯಲ್ಲಿ ಈ ವಾರ ಹೊಸದಾಗಿ ರಿಲೀಸ್ ಆದ ಈ ಎರಡು ಸಿನಿಮಾಗಳನ್ನು ತಪ್ಪದೇ ನೋಡಿ
ಒಟಿಟಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Mar 08, 2025 | 7:09 AM

Share

ವೀಕೆಂಡ್ ಬಂತು ಎಂದರೆ ಕೆಲವರಿಗೆ ಹಾಯಾಗಿ ಸುತ್ತಾಡಿಕೊಂಡು ಬರೋಣ ಎಂದಿರುತ್ತದೆ. ಇನ್ನೂ ಕೆಲವರಿಗೆ ವಾರವಿಡೀ ಕಚೇರಿಗೆ ತೆರಳಿ ಸಾಕಾಗಿರುವುದರಿಂದ ಮನೆಯಲ್ಲೇ ಕುಳಿತು ಹಾಯಾಗಿ ಒಟಿಟಿಯಲ್ಲಿ ಸಿನಿಮಾ ನೋಡೋಣ ಎಂದಿರುತ್ತದೆ. ಆದರೆ, ಯಾವ ಸಿನಿಮಾ ನೋಡೋದೋ? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದರಲ್ಲೇ ಅರ್ಧ ದಿನ ಕಳೆದು ಹೋಗಿ ಬಿಡುತ್ತದೆ. ಆದರೆ, ಆ ಬಗ್ಗೆ ಚಿಂತಿಸೋ ಅಗತ್ಯವಿಲ್ಲ. ನಾವು ಈ ವೀಕೆಂಡ್​ನ ಕಳೆಯಲು ಒಟಿಟಿಯಲ್ಲಿ (OTT) ಎರಡು ಸಿನಿಮಾಗಳನ್ನು ಸೂಚಿಸುತ್ತಿದ್ದೇವೆ.

ಥಿಯೇಟರ್​ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆದ ‘ತಂಡೇಲ್’ ಚಿತ್ರ ಈಗ ಒಟಿಟಿ ಮೂಲಕ ಪ್ರಸಾರ ಆರಂಭಿಸಿದೆ. ಈ ಸಿನಿಮಾ ಥಿಯೇಟರ್​ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಅನ್ನೋದು ವಿಶೇಷ.

ನೆಟ್​ಫ್ಲಿಕ್ಸ್​ನಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾದ ಅವಧಿ 2 ಗಂಟೆ 28 ನಿಮಿಷ. ನೈಜ ಘಟನೆ ಆಧಾರಿತ ಸಿನಿಮಾ ಆಗಿರುವುದರಿಂದ ಸಿನಿಮಾ ಕ್ರೇಜ್ ಹೆಚ್ಚಿಸಿಕೊಂಡಿದೆ. ಮೀನುಗಾರನೋರ್ವ ಅಂತಾರಾಷ್ಟ್ರೀಯ ಜಲ ಗಡಿ ದಾಟಿ ಪಾಕಿಸ್ತಾತನಕ್ಕೆ ಹೋಗುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ಇದನ್ನೂ ಓದಿ
Image
ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ವೆಬ್ ಸೀರಿಸ್ ಈಗ ಒಟಿಟಿಯಲ್ಲಿ
Image
ಎರಡು ಭಾಗದಲ್ಲಿ ಬರಲಿದೆ ಮಹೇಶ್​ಬಾಬು-ರಾಜಮೌಳಿ ಸಿನಿಮಾ; ಅಭಿಮಾನಿಗಳಿಗೆ ಬೇಸರ

ಇದನ್ನೂ ಓದಿ:  ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ವೆಬ್ ಸೀರಿಸ್ ಈಗ ಒಟಿಟಿಯಲ್ಲಿ; ಕೊನೆವರೆಗೂ ಗೆಸ್ ಮಾಡ್ತಾನೇ ಇರ್ಬೇಕು

ಮಲಯಾಳಂನ ‘ರೇಖಾಚಿತ್ರಂ’ ಕೂಡ ಈ ವಾರ ತೆರೆಗೆ ಬಂದಿದೆ. ಸೋನಿಲಿವ್ ಆ್ಯಪ್ ಮೂಲಕ ಈ ಚಿತ್ರವನ್ನು ನೀವು ವೀಕ್ಷಿಸಬಹುದು. ಆಸಿಫ್ ಅಲಿ ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅನಸ್ವರ ರಂಜನ್ ಅವರು ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 6 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ 57 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಈ ಚಿತ್ರ ಕೂಡ ನಿಮ್ಮ ಲಿಸ್ಟ್​ನಲ್ಲಿ ಸೇರಿಸಬಹುದು. ಇದು ಕ್ರೈಮ್ ಥ್ರಿಲ್ಲರ್ ಕಥಾ ಹೊಂದರ ಹೊಂದಿದೆ. ಸಾಲು ಸಾಲು ಕೊಲೆಗಳನ್ನು ಹುಡುಕಿ ಹೋಗುವ ಕಥೆಯನ್ನು ಚಿತ್ರ ಒಳಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Sat, 8 March 25

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ