AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಒಟಿಟಿಗೆ ಬರಲಿದೆ ಮುತ್ತಯ್ಯ ಮುರಳೀಧರನ್‌ ಬಯೋಪಿಕ್​ ‘800’: ಇಲ್ಲಿದೆ ವಿವರ..

ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಬದುಕಿನ ಸಾಧನೆಗಳನ್ನು ‘800’ ಸಿನಿಮಾದಲ್ಲಿ ತೋರಿಸಲಾಗಿದೆ. ಡಿಸೆಂಬರ್ 2ರಿಂದ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮ್​ ಆಗಲಿದೆ. ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಾಗುತ್ತಿದೆ ಎಂಬುದು ವಿಶೇಷ.

ಶೀಘ್ರವೇ ಒಟಿಟಿಗೆ ಬರಲಿದೆ ಮುತ್ತಯ್ಯ ಮುರಳೀಧರನ್‌ ಬಯೋಪಿಕ್​ ‘800’: ಇಲ್ಲಿದೆ ವಿವರ..
‘800’ ಸಿನಿಮಾ
Follow us
ಮದನ್​ ಕುಮಾರ್​
|

Updated on:Nov 21, 2023 | 5:09 PM

ಹೊಸ ಸಿನಿಮಾಗಳನ್ನು ಜನರಿಗೆ ತಲುಪಿಸುವಲ್ಲಿ ಒಟಿಟಿ ಪ್ಲಾಟ್​ಫಾರ್ಮ್​ಗಳ ನಡುವೆ ಪೈಪೋಟಿ ಇದೆ. ‘ಜಿಯೋ ಸಿನಿಮಾ’ (Jio Cinema) ಒಟಿಟಿ ಕೂಡ ಅನೇಕ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ 800’ ಸಿನಿಮಾ (800 Movie) ಕೂಡ ಶೀಘ್ರದಲ್ಲೇ ‘ಜಿಯೋ ಸಿನಿಮಾ’ದಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಅಂದಹಾಗೆ, ಇದು ಖ್ಯಾತ ಕ್ರಿಕೆಟರ್​ ಮುತ್ತಯ್ಯ ಮುರಳೀಧರನ್‌ (Muttiah Muralitharan) ಅವರ ಜೀವನವನ್ನು ಆಧರಿಸಿ ಸಿದ್ಧವಾದ ಸಿನಿಮಾ. ಈ ಚಿತ್ರಕ್ಕೆ ಎಂ.ಎಸ್‌. ಶ್ರೀಪತಿ ನಿರ್ದೇಶನ ಮಾಡಿದ್ದಾರೆ. ಡಿಸೆಂಬರ್ 2ರಿಂದ ಒಟಿಟಿಯಲ್ಲಿ ಈ ಸಿನಿಮಾ ಸ್ಟ್ರೀಮ್​ ಆಗಲಿದೆ.

ಶ್ರೀಲಂಕಾದ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಬದುಕಿನ ಸಾಧನೆಗಳನ್ನು ‘800’ ಸಿನಿಮಾದಲ್ಲಿ ತೋರಿಸಲಾಗಿದೆ. ಟೆಸ್ಟ್​ ಕ್ರಿಕೆಟ್​ನಲ್ಲಿ ಬರೋಬ್ಬರಿ 800 ವಿಕೆಟ್​ಗಳನ್ನು ಪಡೆದಿದ್ದು ಮುತ್ತಯ್ಯ ಮುರಳೀಧರನ್​ ಅವರ ಸಾಧನೆ. ಅದೇ ಕಾರಣಕ್ಕಾಗಿ ಈ ಸಿನಿಮಾಗೆ ಈ ಶೀರ್ಷಿಕೆ ಇಡಲಾಗಿದೆ. ಸಿನಿಪ್ರಿಯರಿಗೆ ಮತ್ತು ಕ್ರಿಕೆಟ್​ ಪ್ರೇಮಿಗಳಿಗೆ ಈ ಸಿನಿಮಾ ಇಷ್ಟ ಆಗಲಿದೆ. ವಿವೇಕ್‌ ರಂಗಾಚಾರಿ ನಿರ್ಮಾಣ ಮಾಡಿರುವ ಈ ಸಿನಿಮಾ ತಮಿಳು ಮಾತ್ರವಲ್ಲದೇ ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಾಗುತ್ತಿದೆ.

ಇದನ್ನೂ ಓದಿ: ಸಚಿನ್ ಅಥವಾ ಸೆಹ್ವಾಗ್, ಯಾರಿಗೆ ಬೌಲಿಂಗ್ ಮಾಡುವುದು ಕಷ್ಟ? ಮುತ್ತಯ್ಯ ಮುರಳೀಧರನ್ ಉತ್ತರ ಹೀಗಿದೆ

ಸೆಲೆಬ್ರಿಟಿಗಳ ಬದುಕು ದೂರದಿಂದ ಒಂದು ರೀತಿ ಕಾಣುತ್ತದೆ. ಆದರೆ ಹತ್ತಿರದಿಂದ ನೋಡಿದಾಗ ಬೇರೆ ವಿವರಗಳು ತೆರೆದುಕೊಳ್ಳುತ್ತವೆ. ಮುತ್ತಯ್ಯ ಮುರಳೀಧರನ್​ ಅವರ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಹಂಬಲ ಇರುವವರು ‘800’ ಸಿನಿಮಾ ನೋಡಬೇಕು. ಅವರ ಖಾಸಗಿ ಬದುಕಿನಲ್ಲಿ ಅನೇಕ ಸಂಕಷ್ಟಗಳು ಇದ್ದವು. ವಿವಾದಗಳನ್ನು ಮೀರಿ ನಿಂತ ಕಾರಣಕ್ಕೆ ಅವರು ಸಾಧಕ ಎನಿಸಿಕೊಂಡಿದ್ದಾರೆ. ಅನೇಕರಿಗೆ ಸ್ಫೂರ್ತಿ ಆಗುವಂತಹ ಅವರ ಜೀವನದ ಕಹಾನಿ ಈ ಚಿತ್ರದಲ್ಲಿದೆ. ಮುತ್ತಯ್ಯ ಮುರಳೀಧರನ್ ಅವರ ಪಾತ್ರಕ್ಕೆ ಕಾಲಿವುಡ್​ನ ನಟ ಮಧುರ್ ಮಿತ್ತಲ್ ಅವರು ಜೀವ ತುಂಬಿದ್ದಾರೆ. ಮಹಿಮಾ ನಂಬಿಯಾರ್, ನಾಸರ್ ಮುಂತಾದವರು ಕೂಡ ನಟಿಸಿದ್ದಾರೆ.

ಇದನ್ನೂ ಓದಿ: ‘ಜಿಯೋ ಸಿನಿಮಾ’ದಲ್ಲಿ 24 ಗಂಟೆಯೂ ಬಿಗ್​ ಬಾಸ್​ ಉಚಿತ ಪ್ರಸಾರ; ವೀಕ್ಷಕರಿಗೂ ಬಹುಮಾನ ಗೆಲ್ಲುವ ಅವಕಾಶ

‘ಚಿಕ್ಕ ವಯಸ್ಸಿನಿಂದಲೂ ನಾನು ಕ್ರಿಕೆಟ್‌ ಅಭಿಮಾನಿ. ಮುತ್ತಯ್ಯ ಮುರಳೀಧರನ್ ಅವರ ಆಟವನ್ನು ನೋಡಿ ಬೆಳೆದವನು ನಾನು. ಅವರ ಪಾತ್ರದಲ್ಲಿ ನಟಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಪಾಲಿಗೆ ದೊಡ್ಡ ಸಮ್ಮಾನ. ಈಗ ಒಟಿಟಿ ಮೂಲಕ ಈ ಚಿತ್ರ ಜನರನ್ನು ತಲುಪುತ್ತಿರುವುದಕ್ಕೆ ಖುಷಿಯಿದೆ’ ಎಂದು ಮಧುರ್ ಮಿತ್ತಲ್ ಹೇಳಿದ್ದಾರೆ. ‘800’ ಸಿನಿಮಾದ ಒಟಿಟಿ ರಿಲೀಸ್​ ಬಗ್ಗೆ ಸ್ವತಃ ಮುತ್ತಯ್ಯ ಮುರಳೀಧರನ್​ ಮಾತನಾಡಿದ್ದಾರೆ. ‘ಈ ಚಿತ್ರಕ್ಕೆ ಬಹಳ ಉತ್ತಮವಾದ ಪ್ರತಿಸ್ಪಂದನೆ ಸಿಗುತ್ತದೆ ಎಂಬ ನಂಬಿಕೆ ನನಗೆ ಇದೆ. ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಹಾದಿಯಲ್ಲಿರುವ ಅಸಂಖ್ಯಾತ ಯುವ ಪ್ರತಿಭಾವಂತರಿಗೆ ಈ ಸಿನಿಮಾ ಸ್ಫೂರ್ತಿ ಆಗಲಿ ಅಂತ ನಾನು ಹಾರೈಸುತ್ತೇನೆ’ ಎಂದು ಅವರು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:08 pm, Tue, 21 November 23

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್