AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

My Daughter joined a cult: ‘ಮೈ ಡಾಟರ್ ಜಾಯಿನ್ಡ್​​ ಎ ಕಲ್ಟ್​’; ನಿತ್ಯಾನಂದನ ಕತೆ ಆಧರಿಸಿದ ಡಾಕ್ಯುಮೆಂಟರಿ ಸೀರೀಸ್​​ ರಿಲೀಸ್

Swami Nithyananda | Docu-Series: ಸಾಕ್ಷ್ಯಚಿತ್ರಗಳನ್ನು ಪ್ರಸಾರ ಮಾಡುವ ಓಟಿಟಿ ವೇದಿಕೆಯಾದ ‘ಡಿಸ್ಕವರಿ +’ನಲ್ಲಿ ಗುರುವಾರದಿಂದ ಸ್ವಾಮಿ ನಿತ್ಯಾನಂದನ ಕತೆಯನ್ನು ಆಧರಿಸಿದ ಡಾಕ್ಯುಮೆಂಟರಿ ಸೀರೀಸ್ ‘ಮೈ ಡಾಟರ್​ ಜಾಯಿನ್ಡ್​​ ಎ ಕಲ್ಟ್​’ ಬಿತ್ತರವಾಗುತ್ತಿದೆ.

My Daughter joined a cult: ‘ಮೈ ಡಾಟರ್ ಜಾಯಿನ್ಡ್​​ ಎ ಕಲ್ಟ್​’; ನಿತ್ಯಾನಂದನ ಕತೆ ಆಧರಿಸಿದ ಡಾಕ್ಯುಮೆಂಟರಿ ಸೀರೀಸ್​​ ರಿಲೀಸ್
‘ಮೈ ಡಾಟರ್ ಜಾಯಿನ್ಡ್​​ ಎ ಕಲ್ಟ್’ ಸೀರೀಸ್ ಪೋಸ್ಟರ್
TV9 Web
| Updated By: shivaprasad.hs|

Updated on: Jun 04, 2022 | 5:24 PM

Share

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ (Swami Nithyananda) ಕತೆಯನ್ನು ಆಧರಿಸಿ ತಯಾರಾದ ಡಾಕ್ಯುಮೆಂಟರಿ ಸೀರೀಸ್ ‘ಮೈ ಡಾಟರ್​ ಜಾಯಿನ್ಡ್​​ ಎ ಕಲ್ಟ್​’ (My daughter joined a cult) ತೆರೆ ಕಂಡಿದೆ. ಮುಖ್ಯವಾಗಿ ಸಾಕ್ಷ್ಯಚಿತ್ರಗಳನ್ನು ಪ್ರಸಾರ ಮಾಡುವ ಓಟಿಟಿ ವೇದಿಕೆಯಾದ ‘ಡಿಸ್ಕವರಿ +’ನಲ್ಲಿ ಗುರುವಾರದಿಂದ ಡಾಕ್ಯುಮೆಂಟರಿಯು ಬಿತ್ತರವಾಗುತ್ತಿದೆ. VICE ಸ್ಟುಡಿಯೋಸ್‌ನಿಂದ ನಿರ್ಮಿಸಲ್ಪಟ್ಟ ಈ ಸರಣಿಯು ಹಿಂದಿ, ತಮಿಳು, ತೆಲುಗು, ಇಂಗ್ಲೀಷ್, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ನಮನ್ ಸಾರಯ್ಯ ನಿರ್ದೇಶಿಸಿದ ಈ ಸರಣಿಯಲ್ಲಿ ನಿತ್ಯಾನಂದನ ಮೇಲಿರುವ ಆರೋಪಗಳು ಸೇರಿದಂತೆ ಹಲವು ವಿಚಾರಗಳನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಭಕ್ತರನ್ನು ಆಮಿಷವೊಡ್ಡಿ ಧ್ಯಾನಪೀಠಕ್ಕೆ ಸೇರುವಂತೆ ಒತ್ತಾಯಿಸಿದ್ದು ನಂತರ ಅವರಿಗೆ ವಂಚಿಸಿದ್ದು, ಮಕ್ಕಳ ಅಕ್ರಮ ಬಂಧನದ ಆರೋಪ, ಅತ್ಯಾಚಾರ ಪ್ರಕರಣ, ವಿದೇಶಕ್ಕೆ ಪಲಾಯನ.. ಹೀಗೆ ಹಲವು ವಿಚಾರಗಳನ್ನು ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿದೆ.

ಪ್ರಸ್ತುತ ರಿಲೀಸ್ ಆಗಿರುವ ನಿತ್ಯಾನಂದನ ಕುರಿತ ಡಾಕ್ಯುಮೆಂಟರಿಗೆ ಪರ ವಿರೋಧದ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಕೆಲವರು ಈ ಸೀರೀಸ್ ಅನ್ನು ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ಮತ್ತೆ ಕೆಲವರು ಒಬ್ಬರ ಮೇಲೆ ಅಷ್ಟೊಂದು ಆರೋಪವಿದ್ದಾಗಲೂ ಆತ ದೇವರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟ ಕೆಲವು ಟ್ವೀಟ್​ಗಳು ಇಲ್ಲಿವೆ:

ಮೂರು ಸಂಚಿಕೆಗಳನ್ನು ಹೊಂದಿರುವ ‘ಮೈ ಡಾಟರ್ ಜಾಯಿನ್ಡ್​​ ಎ ಕಲ್ಟ್​’ನಲ್ಲಿ ಭಕ್ತರು, ವಕೀಲರು, ಪತ್ರಕರ್ತರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಹಾಗೆಯೇ ಅದಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳನ್ನೂ ಒದಗಿಸಲಾಗಿದೆ.​ ನಿತ್ಯಾನಂದನ ಮೇಲೆ ಹಲವು ಆರೋಪಗಳಿದ್ದರೂ ಹೇಗೆ ಹೆಚ್ಚು ಅನುಯಾಯಿಗಳನ್ನು ಆತ ಸಂಪಾದಿಸಿದ್ದಾನೆ ಎಂಬುದನ್ನು ಸೀರೀಸ್​ನಲ್ಲಿ ವಿವರಿಸಲಾಗಿದೆ.

ಪ್ರಸ್ತುತ ನಿತ್ಯಾನಂದ ಈಕ್ವೆಡಾರ್ ಬಳಿಯ ದ್ವೀಪವೊಂದರಲ್ಲಿ ಪ್ರತ್ಯೇಕ ರಾಷ್ಟ್ರ ಸ್ಥಾಪಿಸಿದ್ದು, ಅದಕ್ಕೆ ಕೈಲಾಸ ಎಂದು ಹೆಸರಿಡಲಾಗಿದೆ ಎಂದು ವರದಿಗಳು ಹೇಳಿವೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ