AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ

ನಾಗ ಚೈತನ್ಯ ವಿಚ್ಛೇದನದ ಬಳಿಕ ಅವರ ಫ್ಯಾನ್ಸ್​ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಂಡ ‘ಲವ್​ ಸ್ಟೋರಿ’ ಚಿತ್ರ ಈಗ ಓಟಿಟಿಗೆ ಬರುತ್ತಿದೆ. ತೆಲುಗಿನ ‘ಆಹಾ’ ಓಟಿಟಿಗೆ ‘ಲವ್​ ಸ್ಟೋರಿ’ ಸೇಲ್​ ಆಗಿದೆ.

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ
ಸಮಂತಾ, ನಾಗ ಚೈತನ್ಯ
TV9 Web
| Edited By: |

Updated on: Oct 12, 2021 | 3:08 PM

Share

ಟಾಲಿವುಡ್​ ನಟ ನಾಗ ಚೈತನ್ಯ ಅವರ ವೈಯಕ್ತಿಕ ಜೀವನ ಈಗ ಚೆನ್ನಾಗಿಲ್ಲ. ಸಮಂತಾಗೆ ವಿಚ್ಛೇದನ ನೀಡಿದ ಬಳಿಕ ಅವರ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಅದರ ನಡುವೆಯೂ ನಾಗ ಚೈತನ್ಯ ಮೊಗದಲ್ಲಿ ನಗು ಮೂಡುವಂತೆ ಮಾಡಿದ್ದು ‘ಲವ್​ ಸ್ಟೋರಿ’ ಸಿನಿಮಾ. ಸಾಯಿ ಪಲ್ಲವಿ ಜೊತೆ ನಟಿಸಿದ ಆ ಚಿತ್ರ ಸೆ.24ರಂದು ತೆರೆಕಂಡು ಗಲ್ಲಾಪಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸಿನಿಪ್ರಿಯರು ‘ಲವ್​ ಸ್ಟೋರಿ’ ನೋಡಿ ಮೆಚ್ಚಿಕೊಂಡರು. ಈ ಚಿತ್ರಕ್ಕೆ ಸಂಬಂಧಿಸಿದಂತೆ ಇನ್ನೊಂದು ಅಪ್​ಡೇಟ್​ ಕೇಳಿಬಂದಿದೆ. ಚಿತ್ರಮಂದಿರಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಈಗ ಮನೆಯಲ್ಲೇ ಕುಳಿತು ನೋಡಬಹುದು.

ಹೌದು, ನಾಗ ಚೈತನ್ಯ ವಿಚ್ಛೇದನದ ಬಳಿಕ ಅವರ ಫ್ಯಾನ್ಸ್​ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಂಡ ‘ಲವ್​ ಸ್ಟೋರಿ’ ಚಿತ್ರ ಈಗ ಓಟಿಟಿಗೆ ಬರುತ್ತಿದೆ. ತೆಲುಗು ಮೂಲದ ‘ಆಹಾ’ ಓಟಿಟಿಗೆ ‘ಲವ್​ ಸ್ಟೋರಿ’ ಸೇಲ್​ ಆಗಿದೆ. ಅ.22ರಿಂದ ವೀಕ್ಷಣೆಗೆ ಲಭ್ಯವಾಗಲಿದೆ. ಆ ದಿನಾಂಕಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ. ವೃತ್ತಿಜೀವನದ ವಿಚಾರದಲ್ಲಿ ಸಮಂತಾ ಬಗ್ಗೆ ನಾಗ ಚೈತನ್ಯ ಹೊಟ್ಟೆಕಿಚ್ಚು ಹೊಂದಿದ್ದರು ಎಂಬ ಗಾಸಿಪ್​ ಕೂಡ ಕೇಳಿಬಂದಿತ್ತು. ಈಗ ಅವರ ಸಿನಿಮಾ ಒಳ್ಳೆಯ ಬ್ಯುಸಿನೆಸ್​ ಮಾಡುತ್ತಿದೆ. ಈ ಚಿತ್ರದ ಕಿರುತೆರೆ ಪ್ರಸಾರ ಹಕ್ಕುಗಳನ್ನು ‘ಸ್ಟಾರ್​ ಮಾ’ ವಾಹಿನಿ ಖರೀದಿಸಿದ್ದು, ಶೀಘ್ರದಲ್ಲೇ ಪ್ರಸಾರ ಮಾಡಲಿದೆ.

ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಒಡೆತನದಲ್ಲಿ ‘ಆಹಾ’ ಓಟಿಟಿ ಆರಂಭ ಆಗಿದೆ. ತೆಲುಗು ಪ್ರೇಕ್ಷಕರನ್ನೇ ಗಮನದಲ್ಲಿ ಇಟ್ಟುಕೊಂಡು ಸ್ಥಳೀಯವಾಗಿ ಇದನ್ನು ಆರಂಭಿಸಲಾಗಿದೆ. ತೆಲುಗು ಚಿತ್ರಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ‘ಆಹಾ’ ನೆರವಾಗುತ್ತಿದೆ. ಈ ಹಿಂದೆ ರವಿ ತೇಜ ನಟನೆಯ ‘ಕ್ರ್ಯಾಕ್​’ ಚಿತ್ರವನ್ನು ಈ ಸಂಸ್ಥೆ ಖರೀದಿಸಿತ್ತು. ಈಗ ‘ಆಹಾ’ ಸಂಗ್ರಹಕ್ಕೆ ‘ಲವ್​ ಸ್ಟೋರಿ’ ಕೂಡ ಸೇರ್ಪಡೆ ಆಗಿದೆ.

ವಿಚ್ಛೇದನದ ನಂತರ ನಾಗ ಚೈತನ್ಯ ಹೊಸ ಅಪಾರ್ಟ್​ಮೆಂಟ್​ ಖರೀದಿಸಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಶೀಘ್ರದಲ್ಲೇ ಅವರು ಅಲ್ಲಿಗೆ ಶಿಫ್ಟ್​ ಆಗಲಿದ್ದಾರಂತೆ. ಆದರೆ ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ‘ಲವ್​ ಸ್ಟೋರಿ’ ಯಶಸ್ಸಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ.

ಇದನ್ನೂ ಓದಿ:

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ಅಬಾರ್ಷನ್​, ಅಫೇರ್​ ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ