ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ

ನಾಗ ಚೈತನ್ಯ ವಿಚ್ಛೇದನದ ಬಳಿಕ ಅವರ ಫ್ಯಾನ್ಸ್​ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಂಡ ‘ಲವ್​ ಸ್ಟೋರಿ’ ಚಿತ್ರ ಈಗ ಓಟಿಟಿಗೆ ಬರುತ್ತಿದೆ. ತೆಲುಗಿನ ‘ಆಹಾ’ ಓಟಿಟಿಗೆ ‘ಲವ್​ ಸ್ಟೋರಿ’ ಸೇಲ್​ ಆಗಿದೆ.

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ
ಸಮಂತಾ, ನಾಗ ಚೈತನ್ಯ
Follow us
| Updated By: ಮದನ್​ ಕುಮಾರ್​

Updated on: Oct 12, 2021 | 3:08 PM

ಟಾಲಿವುಡ್​ ನಟ ನಾಗ ಚೈತನ್ಯ ಅವರ ವೈಯಕ್ತಿಕ ಜೀವನ ಈಗ ಚೆನ್ನಾಗಿಲ್ಲ. ಸಮಂತಾಗೆ ವಿಚ್ಛೇದನ ನೀಡಿದ ಬಳಿಕ ಅವರ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಅದರ ನಡುವೆಯೂ ನಾಗ ಚೈತನ್ಯ ಮೊಗದಲ್ಲಿ ನಗು ಮೂಡುವಂತೆ ಮಾಡಿದ್ದು ‘ಲವ್​ ಸ್ಟೋರಿ’ ಸಿನಿಮಾ. ಸಾಯಿ ಪಲ್ಲವಿ ಜೊತೆ ನಟಿಸಿದ ಆ ಚಿತ್ರ ಸೆ.24ರಂದು ತೆರೆಕಂಡು ಗಲ್ಲಾಪಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸಿನಿಪ್ರಿಯರು ‘ಲವ್​ ಸ್ಟೋರಿ’ ನೋಡಿ ಮೆಚ್ಚಿಕೊಂಡರು. ಈ ಚಿತ್ರಕ್ಕೆ ಸಂಬಂಧಿಸಿದಂತೆ ಇನ್ನೊಂದು ಅಪ್​ಡೇಟ್​ ಕೇಳಿಬಂದಿದೆ. ಚಿತ್ರಮಂದಿರಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಈಗ ಮನೆಯಲ್ಲೇ ಕುಳಿತು ನೋಡಬಹುದು.

ಹೌದು, ನಾಗ ಚೈತನ್ಯ ವಿಚ್ಛೇದನದ ಬಳಿಕ ಅವರ ಫ್ಯಾನ್ಸ್​ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಂಡ ‘ಲವ್​ ಸ್ಟೋರಿ’ ಚಿತ್ರ ಈಗ ಓಟಿಟಿಗೆ ಬರುತ್ತಿದೆ. ತೆಲುಗು ಮೂಲದ ‘ಆಹಾ’ ಓಟಿಟಿಗೆ ‘ಲವ್​ ಸ್ಟೋರಿ’ ಸೇಲ್​ ಆಗಿದೆ. ಅ.22ರಿಂದ ವೀಕ್ಷಣೆಗೆ ಲಭ್ಯವಾಗಲಿದೆ. ಆ ದಿನಾಂಕಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ. ವೃತ್ತಿಜೀವನದ ವಿಚಾರದಲ್ಲಿ ಸಮಂತಾ ಬಗ್ಗೆ ನಾಗ ಚೈತನ್ಯ ಹೊಟ್ಟೆಕಿಚ್ಚು ಹೊಂದಿದ್ದರು ಎಂಬ ಗಾಸಿಪ್​ ಕೂಡ ಕೇಳಿಬಂದಿತ್ತು. ಈಗ ಅವರ ಸಿನಿಮಾ ಒಳ್ಳೆಯ ಬ್ಯುಸಿನೆಸ್​ ಮಾಡುತ್ತಿದೆ. ಈ ಚಿತ್ರದ ಕಿರುತೆರೆ ಪ್ರಸಾರ ಹಕ್ಕುಗಳನ್ನು ‘ಸ್ಟಾರ್​ ಮಾ’ ವಾಹಿನಿ ಖರೀದಿಸಿದ್ದು, ಶೀಘ್ರದಲ್ಲೇ ಪ್ರಸಾರ ಮಾಡಲಿದೆ.

ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಒಡೆತನದಲ್ಲಿ ‘ಆಹಾ’ ಓಟಿಟಿ ಆರಂಭ ಆಗಿದೆ. ತೆಲುಗು ಪ್ರೇಕ್ಷಕರನ್ನೇ ಗಮನದಲ್ಲಿ ಇಟ್ಟುಕೊಂಡು ಸ್ಥಳೀಯವಾಗಿ ಇದನ್ನು ಆರಂಭಿಸಲಾಗಿದೆ. ತೆಲುಗು ಚಿತ್ರಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ‘ಆಹಾ’ ನೆರವಾಗುತ್ತಿದೆ. ಈ ಹಿಂದೆ ರವಿ ತೇಜ ನಟನೆಯ ‘ಕ್ರ್ಯಾಕ್​’ ಚಿತ್ರವನ್ನು ಈ ಸಂಸ್ಥೆ ಖರೀದಿಸಿತ್ತು. ಈಗ ‘ಆಹಾ’ ಸಂಗ್ರಹಕ್ಕೆ ‘ಲವ್​ ಸ್ಟೋರಿ’ ಕೂಡ ಸೇರ್ಪಡೆ ಆಗಿದೆ.

ವಿಚ್ಛೇದನದ ನಂತರ ನಾಗ ಚೈತನ್ಯ ಹೊಸ ಅಪಾರ್ಟ್​ಮೆಂಟ್​ ಖರೀದಿಸಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಶೀಘ್ರದಲ್ಲೇ ಅವರು ಅಲ್ಲಿಗೆ ಶಿಫ್ಟ್​ ಆಗಲಿದ್ದಾರಂತೆ. ಆದರೆ ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ‘ಲವ್​ ಸ್ಟೋರಿ’ ಯಶಸ್ಸಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ.

ಇದನ್ನೂ ಓದಿ:

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ಅಬಾರ್ಷನ್​, ಅಫೇರ್​ ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ