AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ

ನಾಗ ಚೈತನ್ಯ ವಿಚ್ಛೇದನದ ಬಳಿಕ ಅವರ ಫ್ಯಾನ್ಸ್​ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಂಡ ‘ಲವ್​ ಸ್ಟೋರಿ’ ಚಿತ್ರ ಈಗ ಓಟಿಟಿಗೆ ಬರುತ್ತಿದೆ. ತೆಲುಗಿನ ‘ಆಹಾ’ ಓಟಿಟಿಗೆ ‘ಲವ್​ ಸ್ಟೋರಿ’ ಸೇಲ್​ ಆಗಿದೆ.

ಡಿವೋರ್ಸ್​ ಬಳಿಕ ನಾಗ ಚೈತನ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್​: ಅ.22ಕ್ಕಾಗಿ ಎಲ್ಲರ ನಿರೀಕ್ಷೆ
ಸಮಂತಾ, ನಾಗ ಚೈತನ್ಯ
Follow us
TV9 Web
| Updated By: ಮದನ್​ ಕುಮಾರ್​

Updated on: Oct 12, 2021 | 3:08 PM

ಟಾಲಿವುಡ್​ ನಟ ನಾಗ ಚೈತನ್ಯ ಅವರ ವೈಯಕ್ತಿಕ ಜೀವನ ಈಗ ಚೆನ್ನಾಗಿಲ್ಲ. ಸಮಂತಾಗೆ ವಿಚ್ಛೇದನ ನೀಡಿದ ಬಳಿಕ ಅವರ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಅದರ ನಡುವೆಯೂ ನಾಗ ಚೈತನ್ಯ ಮೊಗದಲ್ಲಿ ನಗು ಮೂಡುವಂತೆ ಮಾಡಿದ್ದು ‘ಲವ್​ ಸ್ಟೋರಿ’ ಸಿನಿಮಾ. ಸಾಯಿ ಪಲ್ಲವಿ ಜೊತೆ ನಟಿಸಿದ ಆ ಚಿತ್ರ ಸೆ.24ರಂದು ತೆರೆಕಂಡು ಗಲ್ಲಾಪಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸಿನಿಪ್ರಿಯರು ‘ಲವ್​ ಸ್ಟೋರಿ’ ನೋಡಿ ಮೆಚ್ಚಿಕೊಂಡರು. ಈ ಚಿತ್ರಕ್ಕೆ ಸಂಬಂಧಿಸಿದಂತೆ ಇನ್ನೊಂದು ಅಪ್​ಡೇಟ್​ ಕೇಳಿಬಂದಿದೆ. ಚಿತ್ರಮಂದಿರಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಈಗ ಮನೆಯಲ್ಲೇ ಕುಳಿತು ನೋಡಬಹುದು.

ಹೌದು, ನಾಗ ಚೈತನ್ಯ ವಿಚ್ಛೇದನದ ಬಳಿಕ ಅವರ ಫ್ಯಾನ್ಸ್​ ಪಾಲಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಂಡ ‘ಲವ್​ ಸ್ಟೋರಿ’ ಚಿತ್ರ ಈಗ ಓಟಿಟಿಗೆ ಬರುತ್ತಿದೆ. ತೆಲುಗು ಮೂಲದ ‘ಆಹಾ’ ಓಟಿಟಿಗೆ ‘ಲವ್​ ಸ್ಟೋರಿ’ ಸೇಲ್​ ಆಗಿದೆ. ಅ.22ರಿಂದ ವೀಕ್ಷಣೆಗೆ ಲಭ್ಯವಾಗಲಿದೆ. ಆ ದಿನಾಂಕಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ. ವೃತ್ತಿಜೀವನದ ವಿಚಾರದಲ್ಲಿ ಸಮಂತಾ ಬಗ್ಗೆ ನಾಗ ಚೈತನ್ಯ ಹೊಟ್ಟೆಕಿಚ್ಚು ಹೊಂದಿದ್ದರು ಎಂಬ ಗಾಸಿಪ್​ ಕೂಡ ಕೇಳಿಬಂದಿತ್ತು. ಈಗ ಅವರ ಸಿನಿಮಾ ಒಳ್ಳೆಯ ಬ್ಯುಸಿನೆಸ್​ ಮಾಡುತ್ತಿದೆ. ಈ ಚಿತ್ರದ ಕಿರುತೆರೆ ಪ್ರಸಾರ ಹಕ್ಕುಗಳನ್ನು ‘ಸ್ಟಾರ್​ ಮಾ’ ವಾಹಿನಿ ಖರೀದಿಸಿದ್ದು, ಶೀಘ್ರದಲ್ಲೇ ಪ್ರಸಾರ ಮಾಡಲಿದೆ.

ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಒಡೆತನದಲ್ಲಿ ‘ಆಹಾ’ ಓಟಿಟಿ ಆರಂಭ ಆಗಿದೆ. ತೆಲುಗು ಪ್ರೇಕ್ಷಕರನ್ನೇ ಗಮನದಲ್ಲಿ ಇಟ್ಟುಕೊಂಡು ಸ್ಥಳೀಯವಾಗಿ ಇದನ್ನು ಆರಂಭಿಸಲಾಗಿದೆ. ತೆಲುಗು ಚಿತ್ರಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ‘ಆಹಾ’ ನೆರವಾಗುತ್ತಿದೆ. ಈ ಹಿಂದೆ ರವಿ ತೇಜ ನಟನೆಯ ‘ಕ್ರ್ಯಾಕ್​’ ಚಿತ್ರವನ್ನು ಈ ಸಂಸ್ಥೆ ಖರೀದಿಸಿತ್ತು. ಈಗ ‘ಆಹಾ’ ಸಂಗ್ರಹಕ್ಕೆ ‘ಲವ್​ ಸ್ಟೋರಿ’ ಕೂಡ ಸೇರ್ಪಡೆ ಆಗಿದೆ.

ವಿಚ್ಛೇದನದ ನಂತರ ನಾಗ ಚೈತನ್ಯ ಹೊಸ ಅಪಾರ್ಟ್​ಮೆಂಟ್​ ಖರೀದಿಸಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಶೀಘ್ರದಲ್ಲೇ ಅವರು ಅಲ್ಲಿಗೆ ಶಿಫ್ಟ್​ ಆಗಲಿದ್ದಾರಂತೆ. ಆದರೆ ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ‘ಲವ್​ ಸ್ಟೋರಿ’ ಯಶಸ್ಸಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ.

ಇದನ್ನೂ ಓದಿ:

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

ಅಬಾರ್ಷನ್​, ಅಫೇರ್​ ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು