AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಹಾದಿಯಲ್ಲಿ ನಾಗ ಚೈತನ್ಯ; ಹೊಸ ಪ್ರಯತ್ನಕ್ಕೆ ಸಿಗಲಿದೆಯೇ ಯಶಸ್ಸು?

ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಎಲ್ಲರೂ ಒಟಿಟಿಯತ್ತ ಹೆಚ್ಚು ಆಕರ್ಷಿತರಾದರು. ಚಿತ್ರಮಂದಿರಗಳು ಹಲವು ತಿಂಗಳ ಕಾಲ ಮುಚ್ಚಿದ್ದರಿಂದ ಅನೇಕ ನಿರ್ಮಾಪಕರಿಗೆ ಒಟಿಟಿ ಆಯ್ಕೆ ಅನಿವಾರ್ಯವಾಗಿತ್ತು. ಒಟಿಟಿ ವ್ಯಾಪ್ತಿ ಹೆಚ್ಚಿದಂತೆ ವೆಬ್​ ಸೀರಿಸ್​ ಕ್ರೇಜ್​ ಹೆಚ್ಚುತ್ತಾ ಬಂತು.

ಸಮಂತಾ ಹಾದಿಯಲ್ಲಿ ನಾಗ ಚೈತನ್ಯ; ಹೊಸ ಪ್ರಯತ್ನಕ್ಕೆ ಸಿಗಲಿದೆಯೇ ಯಶಸ್ಸು?
ಸಮಂತಾ, ನಾಗ ಚೈತನ್ಯ
TV9 Web
| Edited By: |

Updated on: Feb 06, 2022 | 6:22 PM

Share

ಸಮಂತಾ (Samantha) ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಯಾರೂ ಮುಟ್ಟಲಾರದಷ್ಟು ಎತ್ತರಕ್ಕೆ ಅವರು ಬೆಳೆದು ನಿಂತಿದ್ದಾರೆ. ಹೊಸಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ಅವರು ಕೊಂಚವೂ ಹಿಂಜರಿಯುತ್ತಿಲ್ಲ. ಸಮಂತಾಗೆ ‘ದಿ ಫ್ಯಾಮಿಲಿ ಮ್ಯಾನ್​ 2’ (The Family Man 2)ವೆಬ್​ ಸರಣಿ ಸಾಕಷ್ಟು ಖ್ಯಾತಿ ತಂದುಕೊಟ್ಟಿತ್ತು. ಈ ವೆಬ್​ ಸೀರಿಸ್​ನಿಂದಾಗಿ ಅವರಿಗೆ ಬಾಲಿವುಡ್​ನಿಂದಲೂ ಆಫರ್​ಗಳು ಬರೋಕೆ ಆರಂಭವಾದವು. ಸಮಂತಾ ನಿರ್ವಹಿಸಿದ ರಾಜಿ ಪಾತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಚರ್ಚೆ ನಡೆದಿತ್ತು. ಹೀಗಾಗಿ, ಈ ವೆಬ್​ ಸರಣಿಯಿಂದ ಸಮಂತಾ ಖ್ಯಾತಿ ದುಪ್ಪಟ್ಟಾಗಿದೆ ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಅಚ್ಚರಿ ವಿಚಾರ ಎಂದರೆ, ಸಮಂತಾ ಹಾದಿಯಲ್ಲಿ ಸಾಗೋಕೆ ನಾಗ ಚೈತನ್ಯ (Naga Chaitanya) ರೆಡಿ ಆಗಿದ್ದಾರೆ. ಅರ್ಥಾತ್​ ಅವರು ಕೂಡ ವೆಬ್​ ಸೀರಿಸ್​ನಲ್ಲಿ ನಟಿಸೋಕೆ ರೆಡಿ ಆಗಿದ್ದಾರೆ.  

ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಎಲ್ಲರೂ ಒಟಿಟಿಯತ್ತ ಹೆಚ್ಚು ಆಕರ್ಷಿತರಾದರು. ಚಿತ್ರಮಂದಿರಗಳು ಹಲವು ತಿಂಗಳ ಕಾಲ ಮುಚ್ಚಿದ್ದರಿಂದ ಅನೇಕ ನಿರ್ಮಾಪಕರಿಗೆ ಒಟಿಟಿ ಆಯ್ಕೆ ಅನಿವಾರ್ಯವಾಗಿತ್ತು. ಒಟಿಟಿ ವ್ಯಾಪ್ತಿ ಹೆಚ್ಚಿದಂತೆ ವೆಬ್​ ಸೀರಿಸ್​ ಕ್ರೇಜ್​ ಹೆಚ್ಚುತ್ತಾ ಬಂತು. ಸ್ಟಾರ್​ ನಟರುಗಳು ವೆಬ್​ ಸೀರಿಸ್​ನಲ್ಲಿ ನಟಿಸೋಕೆ ಆದ್ಯತೆ ಕೊಡೋಕೆ ಆರಂಭಿಸಿದರು. ಈಗ ನಾಗ ಚೈತನ್ಯ ಕೂಡ ವೆಬ್​ ಸೀರಿಸ್​ ಲೋಕಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ.

‘ದೂಥ’ ವೆಬ್​ ಸರಣಿಯಲ್ಲಿ ನಾಗ ಚೈತನ್ಯ ನಟಿಸಲಿದ್ದಾರೆ ಎನ್ನಲಾಗಿದೆ. ವೆಬ್​ ಸೀರಿಸ್​ನ ಟೈಟಲ್​ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಇದೊಂದು ಭಿನ್ನ ಕಾನ್ಸೆಪ್ಟ್​ನಲ್ಲಿ ಮೂಡಿ ಬರುತ್ತಿರುವ ವೆಬ್​ ಸರಣಿ ಎನ್ನಲಾಗಿದೆ. ಇದೊಂದು ಹಾರರ್​ ಥ್ರಿಲ್ಲರ್​ ವೆಬ್​ ಸರಣಿ ಇರಬಹುದು ಎಂಬುದು ಹಲವರ ಊಹೆ.

ಕ್ರೈಮ್​, ಸಸ್ಪೆನ್ಸ್​ ಥ್ರಿಲ್ಲರ್​ ವೆಬ್​ ಸರಣಿಗಳು ಸಾಕಷ್ಟು ಹಿಟ್​ ಆಗಿವೆ. ಈಗ ನಾಗ ಚೈತನ್ಯ ಕೂಡ ಇದೇ ಮಾದರಿಯ ವೆಬ್​ ಸರಣಿ ಮೇಲೆ ಕಣ್ಣಿಟ್ಟಿದ್ದಾರೆ. ‘ದೂಥ’ ವೆಬ್​ ಸೀರಿಸ್​ ಮೂಲಕ ಅವರು ಪ್ರೇಕ್ಷಕರ ಎದುರು ಬರಲಿದ್ದಾರೆ ಎನ್ನಲಾಗುತ್ತಿದೆ.

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿಕ್ರಮ್​ ಕೆ. ಕುಮಾರ್​ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಾಶಿ ಖನ್ನಾ ಅವರು ಚಿತ್ರದ ನಾಯಕಿ. ಮಾಸ್ಕೋದಲ್ಲಿ ಇತ್ತೀಚೆಗೆ ತಂಡ ಚಿತ್ರೀಕರಣ ಮುಗಿಸಿದೆ.  ಕೊರೆಯುವ ಚಳಿಯಲ್ಲಿ ಸಿನಿಮಾ ತಂಡ ಶೂಟಿಂಗ್​ ಮುಗಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

 ವಿದೇಶದಲ್ಲಿ ಹಣ ಉಳಿಸಲು ಇಂಥ ಕೆಲಸ ಮಾಡಿದ್ರಾ​ ನಾಗ ಚೈತನ್ಯ-ರಾಶಿ ಖನ್ನಾ? ಇದು ಟಾಲಿವುಡ್​ ಗಾಸಿಪ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?