AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರೋಕೆ ರೆಡಿ ಆಯ್ತು ‘ತಾಂಡೇಲ್’ ಸಿನಿಮಾ; ರಿಲೀಸ್ ಯಾವಾಗ?

ನಾಗ ಚೈತನ್ಯ ಅಭಿನಯದ ‘ತಾಂಡೇಲ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ಈಗ 100 ಕೋಟಿಗೂ ಅಧಿಕ ಗಳಿಕೆ ಮಾಡಿರುವ ಈ ಚಿತ್ರವು ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಸಾಯಿ ಪಲ್ಲವಿ ಅವರೊಂದಿಗೆ ನಟಿಸಿರುವ ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ.

ಒಟಿಟಿಗೆ ಬರೋಕೆ ರೆಡಿ ಆಯ್ತು ‘ತಾಂಡೇಲ್’ ಸಿನಿಮಾ; ರಿಲೀಸ್ ಯಾವಾಗ?
ನಾಗ ಚೈತನ್ಯ-ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
|

Updated on: Feb 26, 2025 | 8:46 AM

Share

ನಾಗ ಚೈತನ್ಯ ವೃತ್ತಿ ಜೀವನದಲ್ಲಿ ದೊಡ್ಡ ಯಶಸ್ಸು ಕಂಡಿದ್ದು ‘ತಾಂಡೇಲ್’ ಚಿತ್ರದ ಮೂಲಕ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡಿದೆ. ಈ ಚಿತ್ರ 100 ಕೋಟಿ ರೂಪಾಯಿ ಗಳಿಕೆ ಮಾಡಿದ ಬಳಿಕ ಒಟಿಟಿಗೆ ಬರೋಕೆ ರೆಡಿ ಆಗಿದೆ. ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಅವರ ಪರ್ಫಾರ್ಮೆನ್ಸ್​​ನ ಒಟಿಟಿಯಲ್ಲಿ ನೋಡುವ ದಿನ ಹತ್ತಿರವಾಗಿದೆ. ಈ ಚಿತ್ರದ ಒಟಿಟಿ ರಿಲೀಸ್ ಬಗ್ಗೆ ಇಲ್ಲಿದೆ ಮಾಹಿತಿ.

ನಾಗ ಚೈತನ್ಯ ಅವರು ಇತ್ತೀಚೆಗೆ ಸಾಲು ಸಾಲು ಸೋಲು ಕಂಡರು. ಅವರಿಗೆ ‘ತಾಂಡೇಲ್’ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇತ್ತು. ಈಗ ಅವರು ಗೆದ್ದು ತೋರಿಸಿದ್ದಾರೆ. ಈ ಮೂಲಕ ವಿವಾಹ ಆದ ಬಳಿಕ ರಿಲೀಸ್ ಆದ ಮೊದಲ ಚಿತ್ರವೇ ಹಿಟ್ ಆಗಿದೆ. ಹೀಗಾಗಿ, ಅನೇಕರು ಶೋಭಿತಾ ಅವರನ್ನು ಅದೃಷ್ಟ ದೇವತೆ ಎನ್ನುತ್ತಿದ್ದಾರೆ. ಈಗ ಸಿನಿಮಾ ಒಟಿಟಿಗೆ ಕಾಲಿಡುತ್ತಿದೆ.

ನೆಟ್​ಫ್ಲಿಕ್ಸ್ ಒಟಿಟಿ ಈ ಚಿತ್ರದ ಹಕ್ಕನ್ನು ಪಡೆದಿದೆ. ಮಾರ್ಚ್​ 7ರಂದು ಸಿನಿಮಾ ಒಟಿಟಿಯಲ್ಲಿ ಪ್ರಸಾರ ಆಗುವ ನಿರೀಕ್ಷೆ ಇದೆ. ಈ ಸಿನಿಮಾ ನೈಜ ಘಟನೆ ಆಧರಿಸಿದೆ. ಮೀನುಗಾರನೋರ್ವ ಸಮುದ್ರದಲ್ಲಿ ಮೀನು ಹಿಡಿಯಲು ಹೋದಾಗ ಅಂತಾರಾಷ್ಟ್ರೀಯ ಗಡಿ ದಾಟಿ ತೆರಳುತ್ತಾನೆ. ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಾನೆ. ಇದು ಚಿತ್ರದ ಕಥೆ. ಈ ಚಿತ್ರಕ್ಕೆ ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ನಾಗ ಚೈತನ್ಯ ಅವರು ‘ತಾಂಡೇಲ್’ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಿದ್ದಾರೆ. ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮತ್ತಷ್ಟು ಸಂಚಲನ ಸೃಷ್ಟಿಸುವ ನಿರೀಕ್ಷೆ ಇದೆ. ಸದ್ಯ ಥಿಯೇಟರ್​​ನಲ್ಲಿ ಸಿನಿಮಾದ ಹವಾ ಕಡಿಮೆ ಆಗುತ್ತಿದ್ದು, ಚಿತ್ರ ಒಟಿಟಿಗೆ ಬರೋಕೆ ಇದು ಸರಿಯಾದ ಸಮಯ ಎಂದು ತಂಡ ನಿರ್ಧರಿಸಿದಂತೆ ಇದೆ.

ಇದನ್ನೂ ಓದಿ: ಕ್ಯಾನ್ಸರ್ ಪೀಡಿತ ಮಕ್ಕಳ ಮುಖದಲ್ಲಿ ನಗು ಮೂಡಿಸಿದ ನಾಗ ಚೈತನ್ಯ-ಶೋಭಿತಾ

2023ರಲ್ಲಿ ರಿಲೀಸ್ ಆದ ನಾಗ ಚೈತನ್ಯ ನಟನೆಯ ‘ಕಸ್ಟಡಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿರಲಿಲ್ಲ. ಆ ಬಳಿಕ ಅವರು ಒಪ್ಪಿಕೊಂಡಿದ್ದು, ‘ತಾಂಡೇಲ್’. ಸದ್ಯ ನಾಗ ಚೈತನ್ಯ ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ