AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ್​ಬೀರ್ ಕಪೂರ್-ಅಲ್ಲು ಅರ್ಜುನ್​ಗೆ ಆರು ತಿಂಗಳ ಗಡುವು ನೀಡಿದ ಬಾಲಕೃಷ್ಣ

Nandamuri Balakrishna: ತೆಲುಗು ಚಿತ್ರರಂಗದ ಸ್ಟಾರ್ ನಟ, ನಂದಮೂರಿ ಬಾಲಕೃಷ್ಣ, ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್ ಮತ್ತು ಪ್ಯಾನ್ ಇಂಡಿಯಾ ಸ್ಟಾರ್ ನಟ ಅಲ್ಲು ಅರ್ಜುನ್ ಅವರುಗಳಿಗೆ ಬರೋಬ್ಬರಿ ಆರು ತಿಂಗಳ ಕಾಲಾವಕಾಶ ನೀಡಿದ್ದಾರೆ.

ರಣ್​ಬೀರ್ ಕಪೂರ್-ಅಲ್ಲು ಅರ್ಜುನ್​ಗೆ ಆರು ತಿಂಗಳ ಗಡುವು ನೀಡಿದ ಬಾಲಕೃಷ್ಣ
ಮಂಜುನಾಥ ಸಿ.
|

Updated on: Nov 16, 2024 | 5:23 PM

Share

ಬಾಲಿವುಡ್​ ಸ್ಟಾರ್ ನಟ ರಣ್​ಬೀರ್ ಕಪೂರ್, ಪ್ಯಾನ್ ಇಂಡಿಯಾ ಸ್ಟಾರ್ ನಟ ಅಲ್ಲು ಅರ್ಜುನ್ ಇಬ್ಬರಿಗೂ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ಆರು ತಿಂಗಳ ಗಡುವು ನೀಡಿದ್ದಾರೆ. ಇತ್ತೀಚೆಗಷ್ಟೆ ಆಹಾ ಒಟಿಟಿಯ ‘ಅನ್​ಸ್ಟಾಪೆಬಲ್ ವಿತ್ ಎನ್​ಬಿಕೆ’ ಟಾಕ್ ಶೋಗೆ ಅತಿಥಿಯಾಗಿ ಆಗಮಿಸಿದ್ದ ಅಲ್ಲು ಅರ್ಜುನ್​ ಜೊತೆ ಮಾತನಾಡುತ್ತಾ ನಂದಮೂರಿ ಬಾಲಕೃಷ್ಣ ಈ ಗಡುವು ನೀಡಿದ್ದು, ಅಲ್ಲು ಅರ್ಜುನ್ ನಗುತ್ತಲೇ ಸ್ವೀಕಾರ ಮಾಡಿದ್ದಾರೆ.

ಆಗಿದ್ದಿಷ್ಟು, ಟಾಕ್ ಶೋಗೆ ಬಂದಿದ್ದ ಅಲ್ಲು ಅರ್ಜುನ್​ಗೆ ವಿವಿಧ ನಟರ ಫೋಟೊ ತೋರಿಸುತ್ತಾ ಅವರ ಬಗ್ಗೆ ಅಭಿಪ್ರಾಯಗಳನ್ನು ಹೇಳುವಂತೆ ಕೇಳಿದರು. ರಣ್​ಬೀರ್ ಕಪೂರ್ ಫೋಟೊ ತೋರಿಸಿದಾಗ ಮಾತನಾಡಿದ ಅಲ್ಲು ಅರ್ಜುನ್, ‘ರಣ್​ಬೀರ್ ಕಪೂರ್ ಭಾರತದ ಅತ್ಯುತ್ತಮ ನಟ. ಅವರಂಥಹಾ ನಟರು ಬಹಳ ಕಡಿಮೆ, ನಾನು ಅವರ ಅಭಿಮಾನಿ’ ಎಂದರು. ಅದಕ್ಕೆ ಹೌದೆಂದು ಬಾಲಕೃಷ್ಣ ಇಬ್ಬರಿಗೂ ಒಂದು ಟಾಸ್ಕ್​ ಕೊಟ್ಟರು, ಅದಕ್ಕೆ ಆರು ತಿಂಗಳ ಗಡುವು ನೀಡಿದರು.

‘ರಣ್​ಬೀರ್ ಕಪೂರ್ ಹಾಗೂ ಅಲ್ಲು ಅರ್ಜುನ್ ಅಂಥಹಾ ಇಬ್ಬರು ಸ್ಟಾರ್ ನಟರು ಒಟ್ಟಿಗೆ ನಟಿಸಿದರೆ ಹೇಗಿರುತ್ತದೆ? ಪ್ರೇಕ್ಷಕರಿಗೆ ಹಬ್ಬವೇ ಸರಿ, ಇನ್ನು ಆರು ತಿಂಗಳ ಒಳಗೆ ನೀವಿಬ್ಬರೂ ಒಟ್ಟಿಗೆ ಒಂದು ಸಿನಿಮಾದಲ್ಲಿ ನಟಿಸಬೇಕು, ನಿಮಗೆ ಆರು ತಿಂಗಳು ಮಾತ್ರವೇ ಕಾಲಾವಕಾಶ ಇದೆ. ಯಾರಾದರೂ ಕತೆ ಬರೆಯುವ ಹಾಗಿದ್ದರೆ ಬರೆಯಿರಿ. ಇಲ್ಲವಾದರೆ ನಾನೇ ಕತೆ ಬರೆಯುತ್ತೀನಿ, ನಾನೇ ನಿರ್ದೇಶನವನ್ನೂ ಮಾಡುತ್ತೇನೆ’ ಎಂದರು.

ಇದನ್ನೂ ಓದಿ:ನಂದಮೂರಿ ಬಾಲಕೃಷ್ಣಗೆ ಇಲ್ಲ ಸಚಿವ ಸ್ಥಾನ, ಅಭಿಮಾನಿಗಳ ಬೇಸರ

ಅದಕ್ಕೆ ಅಲ್ಲು ಅರ್ಜುನ್ ‘ನೀವೇ ನಿರ್ಮಾಣವನ್ನು ಮಾಡಿಬಿಡಿ’ ಎಂದರು. ಜಾಣತನದಿಂದ ಉತ್ತರ ನೀಡಿದ ಬಾಲಕೃಷ್ಣ, ‘ನಿಮ್ಮ ತಂದೆಯೇ ಇದ್ದಾರಲ್ಲ, ಜಿಪುಣ, ಅವರನ್ನೇ ನಿರ್ಮಾಪಕರನ್ನಾಗಿ ಮಾಡಿಬಿಡೋಣ’ ಎಂದರು. ಅದಕ್ಕೆ ಅಲ್ಲು ಅರ್ಜುನ್ ಎಸ್ ಎಂದರು. ಆದರೆ ರಣ್​ಬೀರ್ ಕಪೂರ್ ಇದಕ್ಕೆ ಒಪ್ಪುತ್ತಾರಾ? ಬಾಲಕೃಷ್ಣ ಆಸೆ ಈಡೇರುವುದು ತುಸು ಅನುಮಾನವೇ ಏಕೆಂದರೆ ಇಬ್ಬರೂ ನಟರು, ಬೇರೆ ಬೇರೆ ಸಿನಿಮಾಗಳಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

ಅಲ್ಲು ಅರ್ಜುನ್ ಇತ್ತೀಚೆಗಷ್ಟೆ ‘ಪುಷ್ಪ 2’ ಸಿನಿಮಾ ಮುಗಿಸಿದ್ದಾರೆ. ಅದಾದ ಬಳಿಕ ತ್ರಿವಿಕ್ರಮ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ಇನ್ನು ರಣ್​ಬೀರ್ ಕಪೂರ್ ಪ್ರಸ್ತುತ ರಾಮಾಯಣ ಕತೆ ಆಧರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾ 2026 ಕ್ಕೆ ಬಿಡುಗಡೆ ಆಗಲಿದೆ. ಅದರ ಜೊತೆಗೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಲಿರುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರ ಬಳಿಕ ‘ಬ್ರಹ್ಮಾಸ್ತ್ರ 2’ ಸಿನಿಮಾನಲ್ಲಿ ರಣ್​ಬೀರ್ ಕಪೂರ್ ನಟನೆ ಮಾಡಲಿದ್ದಾರೆ. ಹಾಗಾಗಿ ಇಬ್ಬರೂ ನಟರು ಕನಿಷ್ಟ ಎರಡು ವರ್ಷ ಬ್ಯುಸಿಯಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ