AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matthe Maduve: ಒಟಿಟಿಗೆ ಬರುತ್ತಿದೆ ‘ಮತ್ತೆ ಮದುವೆ’ ಸಿನಿಮಾ; ಜೂನ್​ 23ರಿಂದ ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ

Amazon Prime Video: ನರೇಶ್ ಹಾಗೂ ಪವಿತ್ರಾ ಲೋಕೇಶ್ ಅವರ ರಿಯಲ್​ ಲೈಫ್​ನಲ್ಲಿ ನಡೆದ ಅನೇಕ ಘಟನೆಗಳಿಗೆ ‘ಮತ್ತೆ ಮದುವೆ’ ಸಿನಿಮಾ ಹತ್ತಿರವಾಗಿದೆ. ಈ ಚಿತ್ರ ಸೆಟ್ಟೇರುವುದಕ್ಕೂ ಮುನ್ನ ಈ ಸೆಲೆಬ್ರಿಟಿಗಳ ಖಾಸಗಿ ಬದುಕಿನಲ್ಲಿ ಸಖತ್​ ಕಿರಿಕ್​ ಆಗಿತ್ತು.

Matthe Maduve: ಒಟಿಟಿಗೆ ಬರುತ್ತಿದೆ ‘ಮತ್ತೆ ಮದುವೆ’ ಸಿನಿಮಾ; ಜೂನ್​ 23ರಿಂದ ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ
ಪವಿತ್ರಾ ಲೋಕೇಶ್​, ನರೇಶ್​
ಮದನ್​ ಕುಮಾರ್​
|

Updated on: Jun 20, 2023 | 4:32 PM

Share

ಟಾಲಿವುಡ್​ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ‘ಮದುವೆ ಚಿತ್ರ’ ಯಾವಾಗ ಒಟಿಟಿಗೆ ಬರಲಿದೆ ಎಂದು ಪ್ರೇಕ್ಷಕರು ಕಾಯುತ್ತಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ. ಈ ಸಿನಿಮಾದ ಒಟಿಟಿ ಎಂಟ್ರಿಗೆ ದಿನಾಂಕ ನಿಗದಿ ಆಗಿದೆ. ಜೂನ್ 23ರಂದು ಅಮೇಜಾನ್ ಪ್ರೈಮ್ ವಿಡಿಯೋ (Amazon Prime Video) ಮೂಲಕ ಈ ಸಿನಿಮಾದ ಸ್ಟ್ರೀಮಿಂಗ್ ಆರಂಭ ಆಗಲಿದೆ. ತೆಲುಗು ಹಾಗೂ ಕನ್ನಡದಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಜೂನ್​ 9ರಂದು ಬಿಡುಗಡೆ ಆದ ಈ ಸಿನಿಮಾಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತ್ತು. ಥಿಯೇಟರ್​ನಲ್ಲಿ ‘ಮತ್ತೆ ಮದುವೆ’ (Matthe Maduve Movie) ನೋಡಿದ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಈ ಚಿತ್ರದ ಶೀರ್ಷಿಕೆ ‘ಮಳ್ಳಿ ಪೆಳ್ಳಿ’. ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮೇ 26ರಂದು ‘ಮಳ್ಳಿ ಪೆಳ್ಳಿ’ ಬಿಡುಗಡೆಯಾಗಿತ್ತು.

ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ಕನ್ನಡದಲ್ಲಿ ‘ಮತ್ತೆ ಮದುವೆ’ ಶೀರ್ಷಿಕೆಯಡಿ ಜೂನ್ 9ರಂದು ಈ ಸಿನಿಮಾವನ್ನು ಬಿಡುಗಡೆ ಮಾಡಲಾಯಿತು. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗಾಗಿ ಪ್ರೀಮಿಯರ್​ ಪ್ರದರ್ಶನ ಕೂಡ ಏರ್ಪಡಿಸಲಾಗಿತ್ತು. ಸಿನಿಪ್ರಿಯರು ಮೆಚ್ಚಿದ್ದ ಈ ಸಿನಿಮಾ ಈಗ ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿ ಮೂಲಕ ಇನ್ನೂ ಹೆಚ್ಚಿನ ವೀಕ್ಷಕರನ್ನು ತಲುಪಲಿದೆ.

Matthe Maduve: ‘ಮತ್ತೆ ಮದುವೆ’ ಬಗ್ಗೆ ಮಾತನಾಡುತ್ತಾ ಖುಷಿ ಖುಷಿಯಾಗಿ ಕಾಣಿಸಿಕೊಂಡ ಪವಿತ್ರಾ ಲೋಕೇಶ್​-ನರೇಶ್​; ಇಲ್ಲಿದೆ ಫೋಟೋ ಗ್ಯಾಲರಿ

ನರೇಶ್ ಹಾಗೂ ಪವಿತ್ರಾ ಲೋಕೇಶ್ ಅವರ ರಿಯಲ್​ ಲೈಫ್​ನಲ್ಲಿ ನಡೆದ ಅನೇಕ ಘಟನೆಗಳಿಗೆ ‘ಮತ್ತೆ ಮದುವೆ’ ಸಿನಿಮಾ ಹತ್ತಿರವಾಗಿದೆ. ಈ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನ ಈ ಸೆಲೆಬ್ರಿಟಿಗಳ ಖಾಸಗಿ ಬದುಕಿನಲ್ಲಿ ಸಖತ್​ ಕಿರಿಕ್​ ಆಗಿತ್ತು. ನರೇಶ್​ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅವರು ಸುದ್ದಿಗೋಷ್ಠಿಯಲ್ಲಿ ಅನೇಕ ಆರೋಪಗಳನ್ನು ಹೊರಿಸಿದ್ದರು. ಈ ಎಲ್ಲ ಘಟನೆಗಳ ಹಿಂದಿನ ಅಸಲಿ ವಿಷಯಗಳೇನು ಎಂಬುದನ್ನು ‘ಮತ್ತೆ ಮದುವೆ’ ಸಿನಿಮಾದಲ್ಲಿ ತೋರಿಸಲಾಗಿದೆ. ಆ ಕಾರಣದಿಂದ ಈ ಸಿನಿಮಾ ಹೆಚ್ಚು ಚರ್ಚೆ ಆಯಿತು.

Matthe Maduve Review: ಅವರು ಯಾಕೆ ‘ಮತ್ತೆ ಮದುವೆ’ ಆದರು? ಉತ್ತರ, ಸಮರ್ಥನೆ, ಸ್ಪಷ್ಟನೆ ಎಲ್ಲವೂ ಇದೆ ಇಲ್ಲಿ

ನರೇಶ್ ಅವರ ತಾಯಿ ಹೆಸರು ವಿಜಯಾ ನಿರ್ಮಲಾ. ಟಾಲಿವುಡ್​ನಲ್ಲಿ ನಟಿ ಹಾಗೂ ನಿರ್ದೇಶಕಿಯಾಗಿ ಅವರು ಸಾಕಷ್ಟು ಹೆಸರು ಮಾಡಿದ್ದರು. 1973ರಲ್ಲಿ ಅವರು ‘ಸೂಪರ್ ಸ್ಟಾರ್‌’ ಕೃಷ್ಣ ಜತೆಗೂಡಿ ‘ವಿಜಯ ಕೃಷ್ಣ ಮೂವೀಸ್’ ಸಂಸ್ಥೆ ಆರಂಭಿಸಿದ್ದರು. ಆ ಬ್ಯಾನರ್‌ಗೆ ಈಗ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಅದೇ ಸಂಸ್ಥೆಯ ಮೂಲಕ ‘ಮತ್ತೆ ಮದುವೆ’ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಈ ಸಿನಿಮಾಗೆ ಎಂ. ಎಸ್. ರಾಜು ಅವರು ಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ.

ಹಿರಿಯ ಕಲಾವಿದರಾದ ಜಯಸುಧಾ ಮತ್ತು ಶರತ್ ಬಾಬು ಅವರು ಈ ಸಿನಿಮಾದಲ್ಲಿನ ಎರಡು ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತಾ ವಿಜಯ್​ಕುಮಾರ್, ಅನನ್ಯಾ ನಾಗೆಲ್ಲ, ರೋಶನ್, ರವಿವರ್ಮಾ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಮುಂತಾದವರು ‘ಮತ್ತೆ ಮದುವೆ’ ಚಿತ್ರದಲ್ಲಿ ನಟಿಸಿದ್ದಾರೆ. ರಿಯಲ್​ ಲೈಫ್​ ಜೋಡಿಯ ಫ್ಯಾಮಿಲಿ ಕಥಾಹಂದರದ ಸಿನಿಮಾವನ್ನು ಚಿತ್ರಮಂದಿರದಲ್ಲಿ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ