AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naseeruddin Shah: ‘ಹೊಸ ಧರ್ಮ ಸ್ಥಾಪಿಸಲು ಅಕ್ಬರ್​ ಪ್ರಯತ್ನಿಸಿದ್ದ ಎಂಬುದು ನಾನ್​ ಸೆನ್ಸ್​’: ನಟ ನಸಿರುದ್ದೀನ್ ಷಾ

Akbar | Taj Divided By Blood: ಅಕ್ಬರ್ ಹೊಸ ಧರ್ಮವನ್ನು ಸ್ಥಾಪಿಸಲು ಪ್ರಯತ್ನಿಸಿದ್ದ ಎಂಬ ಮಾತಿದೆ. ಈ ಬಗ್ಗೆ ಪಠ್ಯ ಪುಸ್ತಕಗಳಲ್ಲೂ ಉಲ್ಲೇಖ ಆಗಿದೆ. ಅದನ್ನು ನಸೀರುದ್ದೀನ್​ ಷಾ ಅವರು ಅಲ್ಲಗಳೆದಿದ್ದಾರೆ.

Naseeruddin Shah: ‘ಹೊಸ ಧರ್ಮ ಸ್ಥಾಪಿಸಲು ಅಕ್ಬರ್​ ಪ್ರಯತ್ನಿಸಿದ್ದ ಎಂಬುದು ನಾನ್​ ಸೆನ್ಸ್​’: ನಟ ನಸಿರುದ್ದೀನ್ ಷಾ
ನಸೀರುದ್ದೀನ್ ಷಾ
ಮದನ್​ ಕುಮಾರ್​
|

Updated on: Feb 28, 2023 | 7:02 PM

Share

ಹಿರಿಯ ನಟ ನಸೀರುದ್ದೀನ್ ಷಾ (Naseeruddin Shah) ಅವರು ಅಭಿನಯದ ಜೊತೆಗೆ ತಮ್ಮ ನೇರ ನಡೆ-ನುಡಿಯ ಕಾರಣದಿಂದ ಗುರುತಿಸಿಕೊಂಡಿದ್ದಾರೆ. ಆಗಾಗ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾರೆ. ಅದರಿಂದ ಅವರು ಕೆಲವರ ವಿರೋಧ ಕಟ್ಟಿಕೊಂಡಿದ್ದೂ ಉಂಟು. ಪ್ರಸ್ತುತ ಅವರು ‘ತಾಜ್​: ಡಿವೈಡೆಡ್​ ಬೈ ಬ್ಲಡ್​’ (Taj Divided By Blood) ವೆಬ್​ ಸರಣಿಯಲ್ಲಿ ಅಭಿನಯಿಸಿದ್ದಾರೆ. ಇದು ಮೊಘಲರ ಕುರಿತಾದ ವೆಬ್​ ಸಿರೀಸ್​. ಇದರಲ್ಲಿ ನಸೀರುದ್ದೀನ್​ ಷಾ ಅವರು ಅಕ್ಬರ್​ನ ಪಾತ್ರವನ್ನು ಮಾಡಿದ್ದಾರೆ. ‘ಜೀ5’ ಮೂಲಕ ಮಾರ್ಚ್​ 3ರಿಂದ ಈ ವೆಬ್​ ಸರಣಿ ವೀಕ್ಷಣೆಗೆ ಲಭ್ಯವಾಗಲಿದೆ. ಈ ಪ್ರಯುಕ್ತ ಅನೇಕ ಮಾಧ್ಯಮಗಳಿಗೆ ನಸೀರುದ್ದೀನ್​ ಷಾ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಅಕ್ಬರ್​ (Akbar) ಬಗ್ಗೆ ಒಂದಷ್ಟು ಮಾತುಗಳನ್ನು ಆಡಿದ್ದಾರೆ.

ಹೊಸ ಧರ್ಮವನ್ನು ಸ್ಥಾಪಿಸಲು ಅಕ್ಬರ್​ ಪ್ರಯತ್ನಿಸಿದ್ದ ಎಂಬ ಮಾತಿದೆ. ಈ ಬಗ್ಗೆ ಪಠ್ಯ ಪುಸ್ತಕಗಳಲ್ಲೂ ಉಲ್ಲೇಖ ಆಗಿದೆ. ಅದನ್ನು ನಸೀರುದ್ದೀನ್​ ಷಾ ಅವರು ಅಲ್ಲಗಳೆದಿದ್ದಾರೆ. ‘ಆಕ್ಬರ್​ ಓರ್ವ ಹೃದಯವಂತ, ಸಭ್ಯ, ವಿಶಾಲ ಮನೋಭಾವದ ವ್ಯಕ್ತಿ ಆಗಿದ್ದ. ಆತ ಹೊಸ ಧರ್ಮ ಸ್ಥಾಪಿಸಲು ಬಯಸಿದ್ದ ಎಂಬುದೊಂದೆ ಆತನ ಮೇಲಿರುವ ಕಪ್ಪು ಚುಕ್ಕಿ. ಆದರೆ ಇತಿಹಾಸದ ಪುಸ್ತಕದಲ್ಲಿ ನಾವು ಓದಿದ ಈ ಮಾಹಿತಿ ಶುದ್ಧ ನಾನ್​ ಸೆನ್ಸ್​’ ಎಂದು ನಸೀರುದ್ದೀನ್​ ಷಾ ಹೇಳಿದ್ದಾರೆ.

ಇದನ್ನೂ ಓದಿ:ತಾಲಿಬಾನ್​ ಪರ ಇರುವ ಭಾರತದ ಮುಸ್ಲಿಮರಿಗೆ ನಟ ನಸೀರುದ್ದೀನ್​ ಷಾ ಛೀಮಾರಿ; ವಿಡಿಯೋ ವೈರಲ್​

ಇದನ್ನೂ ಓದಿ
Image
Naseeruddin Shah: ‘ಮೊಘಲರು ಲೂಟಿ ಮಾಡಲು ಬಂದವರಲ್ಲ, ಭಾರತಕ್ಕೆ ಅವರ ಕೊಡುಗೆಯೂ ಇದೆ’: ನಸೀರುದ್ದೀನ್​ ಷಾ
Image
ನಾಸಿರುದ್ದೀನ್​ ಶಾ ಜನ್ಮದಿನ: ಕನ್ನಡದಲ್ಲೂ ನಟಿಸಿದ ಈ ಕಲಾವಿದ ಮಾಡಿಕೊಂಡ ವಿವಾದಗಳು ಒಂದೆರೆಡಲ್ಲ
Image
ತಾಲಿಬಾನ್​ ಪರ ಇರುವ ಭಾರತದ ಮುಸ್ಲಿಮರಿಗೆ ನಟ ನಸೀರುದ್ದೀನ್​ ಷಾ ಛೀಮಾರಿ; ವಿಡಿಯೋ ವೈರಲ್​
Image
ಬಾಲಿವುಡ್​ ಖ್ಯಾತ ನಟ ನಾಸಿರುದ್ದೀನ್ ಷಾ ಆಸ್ಪತ್ರೆಯಿಂದ ಬಿಡುಗಡೆ: ಅಭಿಮಾನಿಗಳಿಗೆ ಹರ್ಷ

ಅಕ್ಬರ್​ ಬಳಿಕ ಆತನ ಮೂವರು ಮಕ್ಕಳ ಪೈಕಿ ಸಿಂಹಾಸನದ ಜವಾಬ್ದಾರಿ ಹೊರುವವರು ಯಾರು ಎಂಬುದನ್ನು ತೀರ್ಮಾನಿಸುವ ಸಮಯ ಬರುತ್ತದೆ. ವಯಸ್ಸಿನಲ್ಲಿ ಯಾರು ಹಿರಿಯರು ಎಂಬುದರ ಬದಲಿಗೆ ಸಾಮರ್ಥ್ಯದ ಆಧಾರದಲ್ಲಿ ಉತ್ತಾಧಿಕಾರಿಯನ್ನು ​ಆಯ್ಕೆ ಮಾಡಲು ಅಕ್ಬರ್​ ಮುಂದಾಗುತ್ತಾನೆ. ಆ ಕಥೆ ‘ತಾಜ್​: ಡಿವೈಡೆಡ್​ ಬೈ ಬ್ಲಡ್​​’ ವೆಬ್​ ಸೀರಿಸ್​ನಲ್ಲಿದೆ. ನಸೀರುದ್ದೀನ್​ ಷಾ ಜೊತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಸಲೀಂ ಪಾತ್ರದಲ್ಲಿ ಆಶಿಮ್​ ಗುಲಾಟಿ, ಮುರಾದ್​ ಪಾತ್ರದಲ್ಲಿ ತಹಾ ಷಾ, ಅನಾರ್ಕಲಿ ಪಾತ್ರದಲ್ಲಿ ಅದಿತಿ ರಾವ್​ ಹೈದರಿ, ಜೋಧಾ ಬಾಯ್​ ಆಗಿ ಸಂಧ್ಯಾ ಮೃದುಲ್​ ಅವರು ನಟಿಸಿದ್ದಾರೆ.

ಇದನ್ನೂ ಓದಿ: ನಾಸಿರುದ್ದೀನ್​ ಶಾ ಜನ್ಮದಿನ: ಕನ್ನಡದಲ್ಲೂ ನಟಿಸಿದ ಈ ಕಲಾವಿದ ಮಾಡಿಕೊಂಡ ವಿವಾದಗಳು ಒಂದೆರೆಡಲ್ಲ

‘ನಾದಿರ್​ ಷಾ, ತೈಮೂರ್​ ಮುಂತಾದವರು ಭಾರತವನ್ನು ಲೂಟಿ ಮಾಡಲು ಬಂದರು. ಆದರೆ ಮೊಘಲರು ಲೂಟಿ ಮಾಡಲು ಬರಲಿಲ್ಲ. ಈ ನೆಲವನ್ನು ತಮ್ಮ ಮನೆಯಾಗಿಸಿಕೊಳ್ಳಲು ಮೊಘಲರು ಬಂದರು. ಅದನ್ನೇ ಅವರು ಮಾಡಿದ್ದು. ಅವರ ಕೊಡುಗೆಯನ್ನು ಯಾರು ತೆಗೆದುಹಾಕಲು ಸಾಧ್ಯ?’ ಎಂದು ಮತ್ತೊಂದು ಸಂದರ್ಶನದಲ್ಲಿ ನಸೀರುದ್ದೀನ್​ ಷಾ ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು