AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naseeruddin Shah: ‘ಹೊಸ ಧರ್ಮ ಸ್ಥಾಪಿಸಲು ಅಕ್ಬರ್​ ಪ್ರಯತ್ನಿಸಿದ್ದ ಎಂಬುದು ನಾನ್​ ಸೆನ್ಸ್​’: ನಟ ನಸಿರುದ್ದೀನ್ ಷಾ

Akbar | Taj Divided By Blood: ಅಕ್ಬರ್ ಹೊಸ ಧರ್ಮವನ್ನು ಸ್ಥಾಪಿಸಲು ಪ್ರಯತ್ನಿಸಿದ್ದ ಎಂಬ ಮಾತಿದೆ. ಈ ಬಗ್ಗೆ ಪಠ್ಯ ಪುಸ್ತಕಗಳಲ್ಲೂ ಉಲ್ಲೇಖ ಆಗಿದೆ. ಅದನ್ನು ನಸೀರುದ್ದೀನ್​ ಷಾ ಅವರು ಅಲ್ಲಗಳೆದಿದ್ದಾರೆ.

Naseeruddin Shah: ‘ಹೊಸ ಧರ್ಮ ಸ್ಥಾಪಿಸಲು ಅಕ್ಬರ್​ ಪ್ರಯತ್ನಿಸಿದ್ದ ಎಂಬುದು ನಾನ್​ ಸೆನ್ಸ್​’: ನಟ ನಸಿರುದ್ದೀನ್ ಷಾ
ನಸೀರುದ್ದೀನ್ ಷಾ
ಮದನ್​ ಕುಮಾರ್​
|

Updated on: Feb 28, 2023 | 7:02 PM

Share

ಹಿರಿಯ ನಟ ನಸೀರುದ್ದೀನ್ ಷಾ (Naseeruddin Shah) ಅವರು ಅಭಿನಯದ ಜೊತೆಗೆ ತಮ್ಮ ನೇರ ನಡೆ-ನುಡಿಯ ಕಾರಣದಿಂದ ಗುರುತಿಸಿಕೊಂಡಿದ್ದಾರೆ. ಆಗಾಗ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾರೆ. ಅದರಿಂದ ಅವರು ಕೆಲವರ ವಿರೋಧ ಕಟ್ಟಿಕೊಂಡಿದ್ದೂ ಉಂಟು. ಪ್ರಸ್ತುತ ಅವರು ‘ತಾಜ್​: ಡಿವೈಡೆಡ್​ ಬೈ ಬ್ಲಡ್​’ (Taj Divided By Blood) ವೆಬ್​ ಸರಣಿಯಲ್ಲಿ ಅಭಿನಯಿಸಿದ್ದಾರೆ. ಇದು ಮೊಘಲರ ಕುರಿತಾದ ವೆಬ್​ ಸಿರೀಸ್​. ಇದರಲ್ಲಿ ನಸೀರುದ್ದೀನ್​ ಷಾ ಅವರು ಅಕ್ಬರ್​ನ ಪಾತ್ರವನ್ನು ಮಾಡಿದ್ದಾರೆ. ‘ಜೀ5’ ಮೂಲಕ ಮಾರ್ಚ್​ 3ರಿಂದ ಈ ವೆಬ್​ ಸರಣಿ ವೀಕ್ಷಣೆಗೆ ಲಭ್ಯವಾಗಲಿದೆ. ಈ ಪ್ರಯುಕ್ತ ಅನೇಕ ಮಾಧ್ಯಮಗಳಿಗೆ ನಸೀರುದ್ದೀನ್​ ಷಾ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಅಕ್ಬರ್​ (Akbar) ಬಗ್ಗೆ ಒಂದಷ್ಟು ಮಾತುಗಳನ್ನು ಆಡಿದ್ದಾರೆ.

ಹೊಸ ಧರ್ಮವನ್ನು ಸ್ಥಾಪಿಸಲು ಅಕ್ಬರ್​ ಪ್ರಯತ್ನಿಸಿದ್ದ ಎಂಬ ಮಾತಿದೆ. ಈ ಬಗ್ಗೆ ಪಠ್ಯ ಪುಸ್ತಕಗಳಲ್ಲೂ ಉಲ್ಲೇಖ ಆಗಿದೆ. ಅದನ್ನು ನಸೀರುದ್ದೀನ್​ ಷಾ ಅವರು ಅಲ್ಲಗಳೆದಿದ್ದಾರೆ. ‘ಆಕ್ಬರ್​ ಓರ್ವ ಹೃದಯವಂತ, ಸಭ್ಯ, ವಿಶಾಲ ಮನೋಭಾವದ ವ್ಯಕ್ತಿ ಆಗಿದ್ದ. ಆತ ಹೊಸ ಧರ್ಮ ಸ್ಥಾಪಿಸಲು ಬಯಸಿದ್ದ ಎಂಬುದೊಂದೆ ಆತನ ಮೇಲಿರುವ ಕಪ್ಪು ಚುಕ್ಕಿ. ಆದರೆ ಇತಿಹಾಸದ ಪುಸ್ತಕದಲ್ಲಿ ನಾವು ಓದಿದ ಈ ಮಾಹಿತಿ ಶುದ್ಧ ನಾನ್​ ಸೆನ್ಸ್​’ ಎಂದು ನಸೀರುದ್ದೀನ್​ ಷಾ ಹೇಳಿದ್ದಾರೆ.

ಇದನ್ನೂ ಓದಿ:ತಾಲಿಬಾನ್​ ಪರ ಇರುವ ಭಾರತದ ಮುಸ್ಲಿಮರಿಗೆ ನಟ ನಸೀರುದ್ದೀನ್​ ಷಾ ಛೀಮಾರಿ; ವಿಡಿಯೋ ವೈರಲ್​

ಇದನ್ನೂ ಓದಿ
Image
Naseeruddin Shah: ‘ಮೊಘಲರು ಲೂಟಿ ಮಾಡಲು ಬಂದವರಲ್ಲ, ಭಾರತಕ್ಕೆ ಅವರ ಕೊಡುಗೆಯೂ ಇದೆ’: ನಸೀರುದ್ದೀನ್​ ಷಾ
Image
ನಾಸಿರುದ್ದೀನ್​ ಶಾ ಜನ್ಮದಿನ: ಕನ್ನಡದಲ್ಲೂ ನಟಿಸಿದ ಈ ಕಲಾವಿದ ಮಾಡಿಕೊಂಡ ವಿವಾದಗಳು ಒಂದೆರೆಡಲ್ಲ
Image
ತಾಲಿಬಾನ್​ ಪರ ಇರುವ ಭಾರತದ ಮುಸ್ಲಿಮರಿಗೆ ನಟ ನಸೀರುದ್ದೀನ್​ ಷಾ ಛೀಮಾರಿ; ವಿಡಿಯೋ ವೈರಲ್​
Image
ಬಾಲಿವುಡ್​ ಖ್ಯಾತ ನಟ ನಾಸಿರುದ್ದೀನ್ ಷಾ ಆಸ್ಪತ್ರೆಯಿಂದ ಬಿಡುಗಡೆ: ಅಭಿಮಾನಿಗಳಿಗೆ ಹರ್ಷ

ಅಕ್ಬರ್​ ಬಳಿಕ ಆತನ ಮೂವರು ಮಕ್ಕಳ ಪೈಕಿ ಸಿಂಹಾಸನದ ಜವಾಬ್ದಾರಿ ಹೊರುವವರು ಯಾರು ಎಂಬುದನ್ನು ತೀರ್ಮಾನಿಸುವ ಸಮಯ ಬರುತ್ತದೆ. ವಯಸ್ಸಿನಲ್ಲಿ ಯಾರು ಹಿರಿಯರು ಎಂಬುದರ ಬದಲಿಗೆ ಸಾಮರ್ಥ್ಯದ ಆಧಾರದಲ್ಲಿ ಉತ್ತಾಧಿಕಾರಿಯನ್ನು ​ಆಯ್ಕೆ ಮಾಡಲು ಅಕ್ಬರ್​ ಮುಂದಾಗುತ್ತಾನೆ. ಆ ಕಥೆ ‘ತಾಜ್​: ಡಿವೈಡೆಡ್​ ಬೈ ಬ್ಲಡ್​​’ ವೆಬ್​ ಸೀರಿಸ್​ನಲ್ಲಿದೆ. ನಸೀರುದ್ದೀನ್​ ಷಾ ಜೊತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಸಲೀಂ ಪಾತ್ರದಲ್ಲಿ ಆಶಿಮ್​ ಗುಲಾಟಿ, ಮುರಾದ್​ ಪಾತ್ರದಲ್ಲಿ ತಹಾ ಷಾ, ಅನಾರ್ಕಲಿ ಪಾತ್ರದಲ್ಲಿ ಅದಿತಿ ರಾವ್​ ಹೈದರಿ, ಜೋಧಾ ಬಾಯ್​ ಆಗಿ ಸಂಧ್ಯಾ ಮೃದುಲ್​ ಅವರು ನಟಿಸಿದ್ದಾರೆ.

ಇದನ್ನೂ ಓದಿ: ನಾಸಿರುದ್ದೀನ್​ ಶಾ ಜನ್ಮದಿನ: ಕನ್ನಡದಲ್ಲೂ ನಟಿಸಿದ ಈ ಕಲಾವಿದ ಮಾಡಿಕೊಂಡ ವಿವಾದಗಳು ಒಂದೆರೆಡಲ್ಲ

‘ನಾದಿರ್​ ಷಾ, ತೈಮೂರ್​ ಮುಂತಾದವರು ಭಾರತವನ್ನು ಲೂಟಿ ಮಾಡಲು ಬಂದರು. ಆದರೆ ಮೊಘಲರು ಲೂಟಿ ಮಾಡಲು ಬರಲಿಲ್ಲ. ಈ ನೆಲವನ್ನು ತಮ್ಮ ಮನೆಯಾಗಿಸಿಕೊಳ್ಳಲು ಮೊಘಲರು ಬಂದರು. ಅದನ್ನೇ ಅವರು ಮಾಡಿದ್ದು. ಅವರ ಕೊಡುಗೆಯನ್ನು ಯಾರು ತೆಗೆದುಹಾಕಲು ಸಾಧ್ಯ?’ ಎಂದು ಮತ್ತೊಂದು ಸಂದರ್ಶನದಲ್ಲಿ ನಸೀರುದ್ದೀನ್​ ಷಾ ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು