Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​

Koffee with Karan Season 7: ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮ ಎಂದರೆ ವಿವಾದಗಳು ಸಹಜ. ಈ ಶೋನಲ್ಲಿ ಸೆಲೆಬ್ರಿಟಿಗಳು ನೀಡುವ ಪ್ರತಿ ಹೇಳಿಕೆ ಕೂಡ ಚರ್ಚೆ ಹುಟ್ಟುಹಾಕುತ್ತದೆ. ಈಗ ನಯನತಾರಾ ವಿಚಾರವನ್ನು ಎಳೆದು ತರಲಾಗಿದೆ.

Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
ಕರಣ್ ಜೋಹರ್, ನಯನತಾರಾ
Follow us
TV9 Web
| Updated By: ಮದನ್​ ಕುಮಾರ್​

Updated on:Jul 25, 2022 | 7:25 AM

ಕರಣ್​ ಜೋಹರ್​ ಅವರು ಹತ್ತು ಹಲವು ಕಾರಣಗಳಿಗಾಗಿ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ನಡೆಸಿಕೊಡುವ ಜನಪ್ರಿಯ ‘ಕಾಫಿ ವಿತ್​ ಕರಣ್​’ (Koffee with Karan) ಶೋನ 7ನೇ ಸೀಸನ್​ ಪ್ರಸಾರ ಆಗುತ್ತಿದೆ. ಆ ಕಾರಣದಿಂದ ಅವರು ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಅನೇಕ ಅತಿಥಿಗಳನ್ನು ಆಹ್ವಾನಿಸುವ ಮೂಲಕ ಕರಣ್​ ಜೋಹರ್​ (Karan Johar) ಅವರು ಈ ಕಾರ್ಯಕ್ರಮದ ರಂಗು ಹೆಚ್ಚಿಸುತ್ತಿದ್ದಾರೆ. ಕಳೆದ ಎಪಿಸೋಡ್​ನಲ್ಲಿ ಅಕ್ಷಯ್​ ಕುಮಾರ್​ ಮತ್ತು ಸಮಂತಾ ರುತ್​ ಪ್ರಭು ಅವರು ಆಗಮಿಸಿದ್ದರು. ಈ ವೇಳೆ ಸಮಂತಾ ಹೇಳಿದ ಅನೇಕ ಮಾತುಗಳು ಗಮನ ಸೆಳೆದಿವೆ. ಇದೇ ಎಪಿಸೋಡ್​ನಲ್ಲಿ ನಟಿ ನಯನತಾರಾಗೆ ಅವಮಾನ ಆಗಿದೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ನಯನತಾರಾ (Nayanthara) ಅಭಿಮಾನಿಗಳು ಕರಣ್​ ಜೋಹರ್​ ವಿರುದ್ಧ ಸಿಡಿದೆದ್ದಿದ್ದಾರೆ.

‘ಕಾಫಿ ವಿತ್​ ಕರಣ್​’ ಕಾರ್ಯಕ್ರಮ ಎಂದರೆ ವಿವಾದಗಳು ಸಹಜ. ಈ ಶೋನಲ್ಲಿ ಸೆಲೆಬ್ರಿಟಿಗಳು ನೀಡುವ ಪ್ರತಿ ಹೇಳಿಕೆ ಕೂಡ ಚರ್ಚೆ ಹುಟ್ಟುಹಾಕುತ್ತದೆ. ಈಗ ನಯನತಾರಾ ವಿಚಾರವನ್ನು ಎಳೆದು ತರಲಾಗಿದೆ. ಇತ್ತೀಚೆಗಿನ ಸಂಚಿಕೆಯಲ್ಲಿ ಸಮಂತಾಗೆ ಕರಣ್​ ಜೋಹರ್​ ಒಂದು ಪ್ರಶ್ನೆ ಕೇಳಿದರು. ‘ದಕ್ಷಿಣ ಭಾರತದಲ್ಲಿ ಈಗ ಟಾಪ್​ ನಟಿ ಯಾರು’ ಎಂದು ಕೇಳಿದ್ದಕ್ಕೆ ನಯನತಾರಾ ಹೆಸರನ್ನು ಸಮಂತಾ ಹೇಳಿದ್ದಾರೆ.

‘ಆದರೆ ನಯನತಾರಾ ಹೆಸರು ನನ್ನ ಪಟ್ಟಿಯಲ್ಲಿ ಇಲ್ಲ’ ಎಂದು ಹೇಳುವ ಮೂಲಕ ಕರಣ್​ ಜೋಹರ್​ ಅವರು ಅಚ್ಚರಿಯ ಪ್ರತಿಕ್ರಿಯೆ ನೀಡಿದರು. ಖಾಸಗಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ವರದಿಯನ್ನು ಆಧರಿಸಿ ಕರಣ್​ ಜೋಹರ್​ ಆ ಪ್ರಶ್ನೆ ಕೇಳಿದ್ದರು. ಹಾಗಾಗಿ ಆ ಪಟ್ಟಿಯಲ್ಲಿ ನಯನತಾರಾ ಹೆಸರು ಇರಲಿಲ್ಲ. ಆ ಸಮೀಕ್ಷೆ ಪ್ರಕಾರ ಸಮಂತಾ ಅವರೇ ನಂಬರ್​ ಒನ್​ ನಟಿ.

ಇದನ್ನೂ ಓದಿ
Image
Nayanthara Wedding Video: ನಯನತಾರಾ ಮದುವೆ ವಿಡಿಯೋ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗೋದು ಖಚಿತ; ಇಲ್ಲಿದೆ ಅಪ್​ಡೇಟ್​
Image
Malaika Arora: ನವ ದಂಪತಿ ನಯನತಾರಾ-ವಿಘ್ನೇಶ್​ ಶಿವನ್​ ನಡುವೆ ಮಲೈಕಾ ಅರೋರಾಗೆ ಏನು ಕೆಲಸ? ಫೋಟೋ ವೈರಲ್​
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು
Image
ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಬೇಕಂತಲೇ ಈ ರೀತಿ ನಯನತಾರಾಗೆ ಅವಮಾನ ಮಾಡಲಾಗಿದೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಕರಣ್​ ಜೋಹರ್​ ಹಾಗೂ ಕಾಫಿ ವಿತ್​ ಕರಣ್​ ಶೋ ವಿರುದ್ಧ ನಯನತಾರಾ ಫ್ಯಾನ್ಸ್​ ಕಟು ಟೀಕೆ ಮಾಡುತ್ತಿದ್ದಾರೆ. ಜೂನ್​ 9ರಂದು ವಿಘ್ನೇಶ್​ ಶಿವನ್​ ಜೊತೆ ನಯನತಾರಾ ಮದುವೆ ನೆರವೇರಿತು. ಮದುವೆ ಬಳಿಕವೂ ಅವರು ಅನೇಕ ಸ್ಟಾರ್​ ನಟರ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಚಿತ್ರಕ್ಕೆ ಅವರೇ ನಾಯಕಿ ಆಗಿದ್ದಾರೆ.

Published On - 7:25 am, Mon, 25 July 22

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ