‘ಹೀರಾಮಂಡಿ’ಗೆ ಸೀಕ್ವೆಲ್ ಘೋಷಿಸಿದ ನೆಟ್​ಫ್ಲಿಕ್ಸ್; ಭಾರತದಲ್ಲಿ ಸಾಗಲಿದೆ ಕಥೆ  

‘ಹೀರಾಮಂಡಿ’ ಕಲಾವಿದರ ನಟನೆಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ. ಹೀರಾಮಂಡಿಯ ವೇಶ್ಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿ ಆಗುತ್ತಾರೆ. ಎರಡನೇ ಭಾಗದಲ್ಲಿ ದ್ವಿಭಜನೆಯ ನಂತರ ಹೀರಾಮಂಡಿ ಮೇಲೆ ಆದ ಪರಿಣಾಮಗಳನ್ನು ವಿವರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

‘ಹೀರಾಮಂಡಿ’ಗೆ ಸೀಕ್ವೆಲ್ ಘೋಷಿಸಿದ ನೆಟ್​ಫ್ಲಿಕ್ಸ್; ಭಾರತದಲ್ಲಿ ಸಾಗಲಿದೆ ಕಥೆ  
ಹೀರಾಮಂಡಿ
Follow us
|

Updated on: Jun 03, 2024 | 1:07 PM

ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸೀರಿಸ್ ಸಾಕಷ್ಟು ಜನಪ್ರಿಯತೆ ಪಡೆದಿದೆ. ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ಈ ಸೀರಿಸ್ ದೊಡ್ಡ ಮಟ್ಟದಲ್ಲಿ ವೀಕ್ಷಣೆ ಕಂಡಿದೆ. ಈಗ ನೆಟ್​ಫ್ಲಿಕ್ಸ್ ಕಡೆಯಿಂದ ಘೋಷಣೆ ಒಂದು ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸೀರಿಸ್ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ.

‘ಹೀರಾಮಂಡಿ’ ಒಂದು ಮ್ಯೂಸಿಕ್ ಸೀರಿಸ್​ ರೀತಿಯಲ್ಲಿ ಮೂಡಿ ಬಂದಿದೆ. ಈ ಸರಣಿಯ ಹಾಡನ್ನು ಅನೇಕರು ಇಷ್ಟಪಟ್ಟಿದ್ದಾರೆ. ಕಲಾವಿದರ ನಟನೆಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ. ಹೀರಾಮಂಡಿಯ ವೇಶ್ಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿ ಆಗುತ್ತಾರೆ. ಎರಡನೇ ಭಾಗದಲ್ಲಿ ದ್ವಿಭಜನೆಯ ನಂತರ ಹೀರಾಮಂಡಿ ಮೇಲೆ ಆದ ಪರಿಣಾಮಗಳನ್ನು ವಿವರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

View this post on Instagram

A post shared by Netflix India (@netflix_in)

ಮಾಧ್ಯಮಗಳ ಜೊತೆ ಮಾತನಾಡಿರುವ ಬನ್ಸಾಲಿ ‘ಹೀರಾಮಂಡಿ 2’ ಬಗ್ಗೆ ಮಾತನಾಡಿದ್ದಾರೆ ‘ಹೀರಾಮಂಡಿ ಸೀಕ್ವೆಲ್​ನಲ್ಲಿ ಮಹಿಳೆಯರು ಲಾಹೋರ್​ನಿಂದ ಸಿನಿಮಾ ಜಗತ್ತಿಗೆ ಬಂದಿದ್ದಾರೆ. ಅನೇಕರು ಲಾಹೋರ್​ನ ತೊರೆದಿದ್ದಾರೆ. ಹಲವರು ಮುಂಬೈ ಫಿಲ್ಮ್ ಇಂಡಸ್ಟ್ರಿ ಅಥವಾ ಕೋಲ್ಕತ್ತಾ ಫಿಲ್ಮ್ ಇಂಡಸ್ಟ್ರಿಯಲ್ಲಿ ಸೆಟಲ್ ಆಗಿದ್ದಾರೆ. ಆದರೆ, ಬಜಾರ್​ನ ಪ್ರಯಾಣ ಹಾಗೆಯೇ ಇರುತ್ತದೆ. ಅವರು ಇಲ್ಲಿಯೂ ಡ್ಯಾನ್ಸ್ ಮಾಡಬೇಕು, ಹಾಡಬೇಕು. ಅವರು ಈಗ ನವಾಬ್​ಗಳಿಗಾಗಲ್ಲ, ನಿರ್ಮಾಪಕರಿಗೆ ಇದೆಲ್ಲವನ್ನೂ ಮಾಡಬೇಕು. ಯಾವಾಗ ಈ ಸರಣಿ ಸೆಟ್ಟೇರುತ್ತದೆ ಗೊತ್ತಿಲ್ಲ’ ಎಂದಿದ್ದರು ಅವರು.

ಇದನ್ನೂ ಓದಿ: ‘ಹುಡುಗಿಯರೂ ಅಸಹ್ಯವಾಗಿ ಮುಟ್ಟುತ್ತಾರೆ’: ಕೆಟ್ಟ ಘಟನೆ ವಿವರಿಸಿದ ‘ಹೀರಾಮಂಡಿ’ ನಟಿ

ಇಂದು (ಜೂನ್ 3) ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಮುಂಬೈನಲ್ಲಿ 100ಕ್ಕೂ ಅಧಿಕ ಡ್ಯಾನ್ಸರ್​ಗಳು ನೃತ್ಯ ಮಾಡುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ‘ಹೀರಾಮಂಡಿ ಎರಡನೇ ಸೀಸನ್ ಬರಲಿದೆ’ ಎಂದು ಬರೆಯಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ