AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ಗೆ ಸೀಕ್ವೆಲ್ ಘೋಷಿಸಿದ ನೆಟ್​ಫ್ಲಿಕ್ಸ್; ಭಾರತದಲ್ಲಿ ಸಾಗಲಿದೆ ಕಥೆ  

‘ಹೀರಾಮಂಡಿ’ ಕಲಾವಿದರ ನಟನೆಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ. ಹೀರಾಮಂಡಿಯ ವೇಶ್ಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿ ಆಗುತ್ತಾರೆ. ಎರಡನೇ ಭಾಗದಲ್ಲಿ ದ್ವಿಭಜನೆಯ ನಂತರ ಹೀರಾಮಂಡಿ ಮೇಲೆ ಆದ ಪರಿಣಾಮಗಳನ್ನು ವಿವರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

‘ಹೀರಾಮಂಡಿ’ಗೆ ಸೀಕ್ವೆಲ್ ಘೋಷಿಸಿದ ನೆಟ್​ಫ್ಲಿಕ್ಸ್; ಭಾರತದಲ್ಲಿ ಸಾಗಲಿದೆ ಕಥೆ  
ಹೀರಾಮಂಡಿ
ರಾಜೇಶ್ ದುಗ್ಗುಮನೆ
|

Updated on: Jun 03, 2024 | 1:07 PM

Share

ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸೀರಿಸ್ ಸಾಕಷ್ಟು ಜನಪ್ರಿಯತೆ ಪಡೆದಿದೆ. ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ಈ ಸೀರಿಸ್ ದೊಡ್ಡ ಮಟ್ಟದಲ್ಲಿ ವೀಕ್ಷಣೆ ಕಂಡಿದೆ. ಈಗ ನೆಟ್​ಫ್ಲಿಕ್ಸ್ ಕಡೆಯಿಂದ ಘೋಷಣೆ ಒಂದು ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸೀರಿಸ್ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ.

‘ಹೀರಾಮಂಡಿ’ ಒಂದು ಮ್ಯೂಸಿಕ್ ಸೀರಿಸ್​ ರೀತಿಯಲ್ಲಿ ಮೂಡಿ ಬಂದಿದೆ. ಈ ಸರಣಿಯ ಹಾಡನ್ನು ಅನೇಕರು ಇಷ್ಟಪಟ್ಟಿದ್ದಾರೆ. ಕಲಾವಿದರ ನಟನೆಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ. ಹೀರಾಮಂಡಿಯ ವೇಶ್ಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿ ಆಗುತ್ತಾರೆ. ಎರಡನೇ ಭಾಗದಲ್ಲಿ ದ್ವಿಭಜನೆಯ ನಂತರ ಹೀರಾಮಂಡಿ ಮೇಲೆ ಆದ ಪರಿಣಾಮಗಳನ್ನು ವಿವರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

View this post on Instagram

A post shared by Netflix India (@netflix_in)

ಮಾಧ್ಯಮಗಳ ಜೊತೆ ಮಾತನಾಡಿರುವ ಬನ್ಸಾಲಿ ‘ಹೀರಾಮಂಡಿ 2’ ಬಗ್ಗೆ ಮಾತನಾಡಿದ್ದಾರೆ ‘ಹೀರಾಮಂಡಿ ಸೀಕ್ವೆಲ್​ನಲ್ಲಿ ಮಹಿಳೆಯರು ಲಾಹೋರ್​ನಿಂದ ಸಿನಿಮಾ ಜಗತ್ತಿಗೆ ಬಂದಿದ್ದಾರೆ. ಅನೇಕರು ಲಾಹೋರ್​ನ ತೊರೆದಿದ್ದಾರೆ. ಹಲವರು ಮುಂಬೈ ಫಿಲ್ಮ್ ಇಂಡಸ್ಟ್ರಿ ಅಥವಾ ಕೋಲ್ಕತ್ತಾ ಫಿಲ್ಮ್ ಇಂಡಸ್ಟ್ರಿಯಲ್ಲಿ ಸೆಟಲ್ ಆಗಿದ್ದಾರೆ. ಆದರೆ, ಬಜಾರ್​ನ ಪ್ರಯಾಣ ಹಾಗೆಯೇ ಇರುತ್ತದೆ. ಅವರು ಇಲ್ಲಿಯೂ ಡ್ಯಾನ್ಸ್ ಮಾಡಬೇಕು, ಹಾಡಬೇಕು. ಅವರು ಈಗ ನವಾಬ್​ಗಳಿಗಾಗಲ್ಲ, ನಿರ್ಮಾಪಕರಿಗೆ ಇದೆಲ್ಲವನ್ನೂ ಮಾಡಬೇಕು. ಯಾವಾಗ ಈ ಸರಣಿ ಸೆಟ್ಟೇರುತ್ತದೆ ಗೊತ್ತಿಲ್ಲ’ ಎಂದಿದ್ದರು ಅವರು.

ಇದನ್ನೂ ಓದಿ: ‘ಹುಡುಗಿಯರೂ ಅಸಹ್ಯವಾಗಿ ಮುಟ್ಟುತ್ತಾರೆ’: ಕೆಟ್ಟ ಘಟನೆ ವಿವರಿಸಿದ ‘ಹೀರಾಮಂಡಿ’ ನಟಿ

ಇಂದು (ಜೂನ್ 3) ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಮುಂಬೈನಲ್ಲಿ 100ಕ್ಕೂ ಅಧಿಕ ಡ್ಯಾನ್ಸರ್​ಗಳು ನೃತ್ಯ ಮಾಡುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ‘ಹೀರಾಮಂಡಿ ಎರಡನೇ ಸೀಸನ್ ಬರಲಿದೆ’ ಎಂದು ಬರೆಯಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್