Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ಫ್ಲಿಕ್ಸ್ ನಿರ್ಧಾರಕ್ಕೆ ಸಿನಿಪ್ರಿಯರ ಬೇಸರ; ‘ತಮ್ಮದೇನು ಇಲ್ಲ’ ಎಂದ ಒಟಿಟಿ ಪ್ಲಾಟ್​ಫಾರ್ಮ್​

‘ಲಿಯೋ’ ಸಿನಿಮಾ, ‘ಒಎಂಜಿ 2’ ಸಿನಿಮಾಗಳಲ್ಲಿ ಈ ಮೊದಲು ಕತ್ತರಿ ಹಾಕಿದ ಭಾಗಗಳನ್ನು ಸೇರ್ಪಡೆ ಮಾಡಿ ಪ್ರಸಾರ ಮಾಡಲಾಗುತ್ತಿತ್ತು. ಈಗ ಹೊಸ ಸೂಚನೆ ಮೇರೆಗೆ ನೆಟ್​ಫ್ಲಿಕ್ಸ್​ ಸೆನ್ಸಾರ್ ವರ್ಷನ್​ನ ಮಾತ್ರ ಪ್ರಸಾರ ಮಾಡಲು ಪ್ರಾರಂಭಿಸಿದೆ.   

ನೆಟ್​ಫ್ಲಿಕ್ಸ್ ನಿರ್ಧಾರಕ್ಕೆ ಸಿನಿಪ್ರಿಯರ ಬೇಸರ; ‘ತಮ್ಮದೇನು ಇಲ್ಲ’ ಎಂದ ಒಟಿಟಿ ಪ್ಲಾಟ್​ಫಾರ್ಮ್​
ನೆಟ್​ಫ್ಲಿಕ್ಸ್
Follow us
ರಾಜೇಶ್ ದುಗ್ಗುಮನೆ
|

Updated on:Dec 20, 2023 | 8:16 AM

ಕೊವಿಡ್ ಕಾಣಿಸಿಕೊಂಡ ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ಗಳ ಬಳಕೆ ಹೆಚ್ಚಿದೆ. ಅಮೇಜಾನ್​ ಪ್ರೈಮ್, ನೆಟ್​ಫ್ಲಿಕ್ಸ್ (Netflix) ಸೇರಿದಂತೆ ಅನೇಕ ಒಟಿಟಿ ಪ್ಲಾಟ್​ಫಾರ್ಮ್​​ಗಳಿಗೆ ಬೇಡಿಕೆ ಹೆಚ್ಚಿದೆ. ಈಗ ನೆಟ್​ಫ್ಲಿಕ್ಸ್​ ನಿರ್ಧಾರದಿಂದ ಭಾರತದ ಸಿನಿಪ್ರಿಯರಿಗೆ ಬೇಸರ ಆಗಿದೆ. ‘ಇದು ನಾವು ತೆಗೆದುಕೊಂಡ ನಿರ್ಧಾರ ಅಲ್ಲ. ಇದರ ಹಿಂದೆ ಸೆನ್ಸಾರ್ ಮಂಡಳಿಯ ಸೂಚನೆ ಇದೆ’ ಎಂದು ಸ್ಪಷ್ಟಪಡಿಸಿದೆ. ಅಷ್ಟಕ್ಕೂ ಬದಲಾದ ನಿರ್ಧಾರ ಏನು? ಸಿನಿಪ್ರಿಯರು ಬೇಸರಗೊಂಡಿದ್ದು ಏಕೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಸೆನ್ಸಾರ್ ಆದ ಬಳಿಕವೇ ಥಿಯೇಟರ್​ನಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಸಿನಿಮಾದಲ್ಲಿ ಯಾವುದಾದರೂ ಹೆಚ್ಚುವರಿ ದೃಶ್ಯ ಸೇರ್ಪಡೆ ಮಾಡಿದರೆ ಮತ್ತೆ ಅದನ್ನು ಸೆನ್ಸಾರ್ ಮಂಡಳಿಯ ಎದುರು ಇಟ್ಟ ಬಳಿಕವೇ ಅದನ್ನು ಪ್ರದರ್ಶಿಸಲು ಅವಕಾಶ ಇದೆ. ಆದರೆ, ಒಟಿಟಿ ಪ್ಲಾಟ್​ಫಾರ್ಮ್​ಗಳಿಗೆ ಈ ರೀತಿಯ ನಿರ್ಬಂಧ ಇಲ್ಲ. ಅಲ್ಲಿ ಪ್ರಸಾರ ಆಗುವ ಸಿನಿಮಾಗಳಿಗೆ ಯಾವುದೇ ಸೆನ್ಸಾರ್ ಪ್ರಕ್ರಿಯೆಯ ಅಗತ್ಯವಿಲ್ಲ. ಹೀಗಾಗಿ, ಕಟ್ ಮಾಡಲ್ಪಟ್ಟ ದೃಶ್ಯಗಳನ್ನು ಸೇರಿಸಿ ಒಟಿಟಿಯಲ್ಲಿ ಸಿನಿಮಾ ಪ್ರಸಾರ ಮಾಡಲಾಗುತ್ತಿತ್ತು. ಈ ರೀತಿ ಮಾಡದಂತೆ ನೆಟ್​ಫ್ಲಿಕ್ಸ್​ಗೆ ಸೆನ್ಸಾರ್ ಮಂಡಳಿ ಸೂಚನೆ ನೀಡಿದೆ.

ಸೆನ್ಸಾರ್ ಆಗದೇ ಇರುವ ವರ್ಷನ್​ನ ಪ್ರಸಾರ ಮಾಡದಂತೆ ನೆಟ್​ಫ್ಲಿಕ್ಸ್​ಗೆ ಸೆನ್ಸಾರ್ ಮಂಡಳಿ ಹೇಳಿದೆ. ಈ ಸೂಚನೆಯನ್ನು ನೆಟ್​ಫ್ಲಿಕ್ಸ್ ಪಾಲಿಸಲು ಆರಂಭಿಸಿದೆ. ‘ಭೀಡ್’ ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತಿತರ ರಾಜಕೀಯ ನಾಯಕರ ಉಲ್ಲೇಖ ಇದೆ. ಇದನ್ನು ಪ್ರಸಾರ ಮಾಡಲಾಗುತ್ತಿತ್ತು. ಆದರೆ, ಇದಕ್ಕೆ ಕತ್ತರಿ ಬಿದ್ದಿದೆ.

‘ಲಿಯೋ’ ಸಿನಿಮಾ, ‘ಒಎಂಜಿ 2’ ಸಿನಿಮಾಗಳಲ್ಲಿ ಈ ಮೊದಲು ಕತ್ತರಿ ಹಾಕಿದ ಭಾಗಗಳನ್ನು ಸೇರ್ಪಡೆ ಮಾಡಿ ಪ್ರಸಾರ ಮಾಡಲಾಗುತ್ತಿತ್ತು. ಈಗ ಹೊಸ ಸೂಚನೆ ಮೇರೆಗೆ ನೆಟ್​ಫ್ಲಿಕ್ಸ್​ ಸೆನ್ಸಾರ್ ವರ್ಷನ್​ನ ಮಾತ್ರ ಪ್ರಸಾರ ಮಾಡಲು ಪ್ರಾರಂಭಿಸಿದೆ.

ಇದನ್ನೂ ಓದಿ: ಇನ್ನು ನೆಟ್​ಫ್ಲಿಕ್ಸ್ ಪಾಸ್​ವರ್ಡ್ ಶೇರ್ ಮಾಡಲು ಸಾಧ್ಯವಿಲ್ಲ!

ಸೆನ್ಸಾರ್ ಮಂಡಳಿಯ ಸೂಚನೆಯಂತೆ ನೆಟ್​ಫ್ಲಿಕ್ಸ್ ತೆಗೆದುಕೊಂಡಿರುವ ನಿರ್ಧಾರದಿಂದ ನಿರ್ದೇಶಕರು ಹಾಗೂ ಪ್ರೇಕ್ಷಕರು ಬೇಸರಗೊಂಡಿದ್ದಾರೆ. ‘ಅನಿಮಲ್’ ಹಾಗೂ ‘ಸಲಾರ್’ ಸಿನಿಮಾದ ಪರಿಸ್ಥಿತಿ ಏನಾಗಲಿದೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Wed, 20 December 23

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ