AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಭಾರತದ ಮೊದಲ ನೈಜ ಘಟನೆ ಆಧಾರಿತ ಕ್ರೈಮ್ ಸೀರೀಸ್ ‘ಕ್ರೈಂ ಸ್ಟೋರೀಸ್: ಇಂಡಿಯಾ ಡಿಟೆಕ್ಟೀವ್ಸ್’ ಬಿಡುಗಡೆಗೆ ನೆಟ್​ಫ್ಲಿಕ್ಸ್ ಮುಹೂರ್ತ ನಿಗದಿ ಮಾಡಿದೆ.

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ
ಕ್ರೈಮ್ ಸ್ಟೋರೀಸ್ ಪೋಸ್ಟರ್
TV9 Web
| Updated By: shivaprasad.hs|

Updated on: Aug 24, 2021 | 3:45 PM

Share

ಡಾಕ್ಯುಮೆಂಟರಿ ಹಾಗೂ ವೆಬ್​ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿರುವ ನೆಟ್​ಫ್ಲಿಕ್ಸ್, ಇದೀಗ ಹೊಸ ಸರಣಿಯ ಮುಖಾಂತರ ವಿಶೇಷ ಕಥಾ ವಸ್ತುವನ್ನು ಪ್ರೇಕ್ಷಕರಿಗೆ ಕಟ್ಟಿಕೊಡಲು ಸಿದ್ಧತೆ ನಡೆಸಿದೆ. ಬೆಂಗಳೂರಿನ ಅಪರಾಧ ಜಗತ್ತಿನ ನಾಲ್ಕು ವಿಶೇಷ ಪ್ರಕರಣಗಳನ್ನು ತೆರೆಯ ಮೇಲೆ ತರಲು ನೆಟ್​ಫ್ಲಿಕ್ಸ್ ತಯಾರಾಗಿದ್ದು, ಅದರ ಬಿಡುಗಡೆಗೂ ಮುಹೂರ್ತ ನಿಗದಿ ಮಾಡಿದೆ. ಸಾಕ್ಷ್ಯಚಿತ್ರದ ಮಾದರಿಯಲ್ಲಿ ಈ ಸೀರೀಸ್ ಮೂಡಿಬರಲಿದ್ದು, ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಭಾರತದ ಮೊದಲ ನೈಜ ಘಟನೆ ಆಧಾರಿತ ಕ್ರೈಮ್ ಸೀರೀಸ್ ಇದಾಗಿದೆ. ಈ ಚಿತ್ರಕ್ಕೆ ‘ಕ್ರೈಂ ಸ್ಟೋರೀಸ್: ಇಂಡಿಯಾ ಡಿಟೆಕ್ಟೀವ್ಸ್’ ಎಂದು ಹೆಸರಿಡಲಾಗಿದೆ.

ಈ ಸಾಕ್ಷ್ಯಚಿತ್ರವು ಸೆಪ್ಟೆಂಬರ್ 13ರಂದು ಬಿಡುಗಡೆ ಮಾಡಲಾಗುವುದು ಎಂದು ನೆಟ್​ಫ್ಲಿಕ್ಸ್ ತಿಳಿಸಿದೆ. ಈ ಸಾಕ್ಷ್ಯಚಿತ್ರದ ಮೂಲಕ ಬೆಂಗಳೂರಿನ ಪೊಲೀಸರು ಸಂಕೀರ್ಣ ಪ್ರಕರಣಗಳ ಹಿಂದೆ ಬಿದ್ದು, ಅವನ್ನು ಭೇಧಿಸುವುದನ್ನು ಎಳೆಎಳೆಯಾಗಿ ತೋರಿಸಲಾಗುವುದು. ಹಾಗೂ ಈ ಸರಣಿ ನಾಲ್ಕು ಪ್ರಮುಖ ಪ್ರಕರಣಗಳನ್ನು ಒಳಗೊಂಡಿದೆ ಎಂದು ನೆಟ್​ಫ್ಲಿಕ್ಸ್ ತಿಳಿಸಿದೆ. ಈ ಚಿತ್ರದ ಕುರಿತಂತೆ ಇನ್ನುಳಿದ ಮಾಹಿತಿಯನ್ನು ನೆಟ್​ಫ್ಲಿಕ್ಸ್ ಸದ್ಯದಲ್ಲೇ ಬಿಡುಗಡೆಗೊಳಿಸುವುದಾಗಿ ತಿಳಿಸಿದೆ.

ನೆಟ್​ಫ್ಲಿಕ್ಸ್​ನಲ್ಲಿ ಈ ಮಾಸಾಂತ್ಯದಲ್ಲಿ ಬಿಡುಗಡೆಯಾಗುವ ಚಿತ್ರಗಳು:

ಆಗಸ್ಟ್ 25: Clickbait: Season 1 The Old Ways Really Love The River Runner

ಆಗಸ್ಟ್ 26: EDENS ZERO: Season 1 Family Reunion: Part 4

ಆಗಸ್ಟ್ 27: He’s All That I Heart Arlo: Season 1 King of Boys: The Return of the King: Limited Series SAS: Rise of the Black Swan Titletown High: Season 1

ಆಗಸ್ಟ್ 28: Hometown Cha-Cha-Cha: Season 1

ಆಗಸ್ಟ್ 31: Sparking Joy: Season 1 Untold: Crime and Penalties

ಇದನ್ನೂ ಓದಿ:

Abhishek Bachchan: ಚಿತ್ರೀಕರಣದ ವೇಳೆ ಖ್ಯಾತ ನಟ ಅಭಿಷೇಕ್ ಬಚ್ಚನ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

(Netflix will release new documentary series on real Bangalore crime investigations)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ