‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ

ಬಿಗ್​ ಬಾಸ್​ ನಿರೂಪಣೆ ಮಾಡುವುದು ಸುಲಭದ ಕೆಲಸ ಅಲ್ಲ. ತಾನೂ ಕೂಡ ಬಿಗ್​ ಬಾಸ್​ ನಡೆಸಿಕೊಡಬಲ್ಲೆ ಎಂದು ಜವಾಬ್ದಾರಿ ಹೊತ್ತುಕೊಂಡ ಸ್ಟಾರ್​ ನಟನಿಗೆ ವೀಕ್ಷಕರು ಕಳಪೆ ಪಟ್ಟ ನೀಡಿದ್ದಾರೆ. ಹೌದು, ಬಾಲಿವುಡ್​ ನಟ ಅನಿಲ್​ ಕಪೂರ್​ ಅವರಿಗೆ ನೆಟ್ಟಿಗರಿಂದ ತೀವ್ರ ಟೀಕೆ ಎದುರಾಗಿದೆ. ‘ಬಿಗ್​ ಬಾಸ್​ ಒಟಿಟಿ 3’ ಶೋ ನೋಡಿದವರು ಇಂಥ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ
ಬಿಗ್​ ಬಾಸ್
Follow us
|

Updated on: Jul 27, 2024 | 5:19 PM

ಹಲವು ಭಾಷೆಯಲ್ಲಿ ಬಿಗ್​ ಬಾಸ್​ ರಿಯಾಲಿಟಿ ಶೋ ಫೇಮಸ್​ ಆಗಿದೆ. ಟಿವಿಯಲ್ಲಿ ಪ್ರಸಾರ ಆಗುವ ಕಾರ್ಯಕ್ರಮ ಮಾತ್ರವಲ್ಲದೇ ಒಟಿಟಿ ವರ್ಷನ್​ ಕೂಡ ಜನಮೆಚ್ಚುಗೆ ಗಳಿಸಿದೆ. ಆದರೆ ಈ ಕಾರ್ಯಕ್ರಮವನ್ನು ಯಾರು ನಡೆಸಿಕೊಡುತ್ತಾರೆ ಎಂಬುದು ಹೆಚ್ಚು ಮುಖ್ಯವಾಗುತ್ತದೆ. ಕನ್ನಡದಲ್ಲಿ ನಟ ಸುದೀಪ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಕೂಡ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅನಿಲ್​ ಕಪೂರ್​ ಅವರು ಅತಿ ಕಳಪೆ ನಿರೂಪಕ ಎಂಬ ಟೀಕೆಗೆ ಒಳಗಾಗಿದ್ದಾರೆ.

ಹಿಂದಿಯಲ್ಲಿ ‘ಬಿಗ್​ ಬಾಸ್​ ಒಟಿಟಿ’ ಶೋ ಸೆನ್ಸೇಷನ್​ ಸೃಷ್ಟಿಸಿದೆ. ಈ ಮೊದಲು ಎರಡು ಸೀಸನ್​ಗಳು ಯಶಸ್ವಿ ಆಗಿದ್ದವು. ಈ ವರ್ಷ ‘ಬಿಗ್​ ಬಾಸ್​ ಒಟಿಟಿ 3’ ನಡೆಯುತ್ತಿದೆ. ಮೊದಲ ಸೀಸನ್​ಗೆ ಕರಣ್​ ಜೋಹರ್​ ನಿರೂಪಣೆ ಮಾಡಿದ್ದರು, ಎರಡನೇ ಸೀಸನ್​ಗೆ ಸಲ್ಮಾನ್​ ಖಾನ್​ ನಿರೂಪಕ ಆಗಿದ್ದರು. ಮೂರನೇ ಸೀಸನ್​ನಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಅನಿಲ್​ ಕಪೂರ್​ ಅವರಿಗೆ ನೀಡಲಾಯಿತು.

ಈಗ ಹಿಂದಿ ‘ಬಿಗ್​ ಬಾಸ್​ ಒಟಿಟಿ 3’ ಕೊನೇ ಹಂತ ತಲುಪಿದೆ. ಶೀಘ್ರದಲ್ಲೇ ಇದರ ಫಿನಾಲೆ ನಡೆಯಲಿದೆ. ಇಷ್ಟು ದಿನಗಳ ಕಾಲ ಅನಿಲ್​ ಕಪೂರ್​ ಅವರ ನಿರೂಪಣೆಯನ್ನು ನೋಡಿದ ವೀಕ್ಷಕರು ಬೇಸತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಇನ್ನೆಂದೂ ಅನಿಲ್​ ಕಪೂರ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡುವುದು ಬೇಡ ಎಂದು ಜನರು ತಾಕೀತು ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿ ಹಿನಾ ಖಾನ್​ಗೆ 3ನೇ ಹಂತದ ಸ್ತನ ಕ್ಯಾನ್ಸರ್​; ಶಾಕಿಂಗ್​ ವಿಚಾರ ತಿಳಿಸಿದ ನಟಿ

ಬಿಗ್​ ಬಾಸ್​ ನಿರೂಪಣೆ ಮಾಡುವವರಿಗೆ ಒಂದು ಬಗೆಯ ಗತ್ತು ಇರಬೇಕು. ಸಂದರ್ಭಕ್ಕೆ ತಕ್ಕಂತೆ ತುಂಬ ಸಹಜವಾಗಿ ಮಾತನಾಡುವ ಕಲೆ ಇರಬೇಕು. ಈ ಗುಣಗಳು ಅನಿಲ್​ ಕಪೂರ್​ ಅವರಿಗೆ ಇಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ‘ಇವರದ್ದು ಫೇಕ್​ ವ್ಯಕ್ತಿತ್ವ, ಫೇಕ್​ ನಗು, ಫೇಕ್​ ಸಿಟ್ಟು. ಅತಿ ಕಳಪೆ ನಿರೂಪಕ ಇವರು. ಇಂಥವರು ಬಂದರೆ ಬಿಗ್ ಬಾಸ್​ ಅಂತ್ಯವಾಗುತ್ತದೆ’ ಎಂದು ವೀಕ್ಷಕರು ಅಸಮಾಧಾನ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ