AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ

ಬಿಗ್​ ಬಾಸ್​ ನಿರೂಪಣೆ ಮಾಡುವುದು ಸುಲಭದ ಕೆಲಸ ಅಲ್ಲ. ತಾನೂ ಕೂಡ ಬಿಗ್​ ಬಾಸ್​ ನಡೆಸಿಕೊಡಬಲ್ಲೆ ಎಂದು ಜವಾಬ್ದಾರಿ ಹೊತ್ತುಕೊಂಡ ಸ್ಟಾರ್​ ನಟನಿಗೆ ವೀಕ್ಷಕರು ಕಳಪೆ ಪಟ್ಟ ನೀಡಿದ್ದಾರೆ. ಹೌದು, ಬಾಲಿವುಡ್​ ನಟ ಅನಿಲ್​ ಕಪೂರ್​ ಅವರಿಗೆ ನೆಟ್ಟಿಗರಿಂದ ತೀವ್ರ ಟೀಕೆ ಎದುರಾಗಿದೆ. ‘ಬಿಗ್​ ಬಾಸ್​ ಒಟಿಟಿ 3’ ಶೋ ನೋಡಿದವರು ಇಂಥ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ
ಬಿಗ್​ ಬಾಸ್
ಮದನ್​ ಕುಮಾರ್​
|

Updated on: Jul 27, 2024 | 5:19 PM

Share

ಹಲವು ಭಾಷೆಯಲ್ಲಿ ಬಿಗ್​ ಬಾಸ್​ ರಿಯಾಲಿಟಿ ಶೋ ಫೇಮಸ್​ ಆಗಿದೆ. ಟಿವಿಯಲ್ಲಿ ಪ್ರಸಾರ ಆಗುವ ಕಾರ್ಯಕ್ರಮ ಮಾತ್ರವಲ್ಲದೇ ಒಟಿಟಿ ವರ್ಷನ್​ ಕೂಡ ಜನಮೆಚ್ಚುಗೆ ಗಳಿಸಿದೆ. ಆದರೆ ಈ ಕಾರ್ಯಕ್ರಮವನ್ನು ಯಾರು ನಡೆಸಿಕೊಡುತ್ತಾರೆ ಎಂಬುದು ಹೆಚ್ಚು ಮುಖ್ಯವಾಗುತ್ತದೆ. ಕನ್ನಡದಲ್ಲಿ ನಟ ಸುದೀಪ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಕೂಡ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅನಿಲ್​ ಕಪೂರ್​ ಅವರು ಅತಿ ಕಳಪೆ ನಿರೂಪಕ ಎಂಬ ಟೀಕೆಗೆ ಒಳಗಾಗಿದ್ದಾರೆ.

ಹಿಂದಿಯಲ್ಲಿ ‘ಬಿಗ್​ ಬಾಸ್​ ಒಟಿಟಿ’ ಶೋ ಸೆನ್ಸೇಷನ್​ ಸೃಷ್ಟಿಸಿದೆ. ಈ ಮೊದಲು ಎರಡು ಸೀಸನ್​ಗಳು ಯಶಸ್ವಿ ಆಗಿದ್ದವು. ಈ ವರ್ಷ ‘ಬಿಗ್​ ಬಾಸ್​ ಒಟಿಟಿ 3’ ನಡೆಯುತ್ತಿದೆ. ಮೊದಲ ಸೀಸನ್​ಗೆ ಕರಣ್​ ಜೋಹರ್​ ನಿರೂಪಣೆ ಮಾಡಿದ್ದರು, ಎರಡನೇ ಸೀಸನ್​ಗೆ ಸಲ್ಮಾನ್​ ಖಾನ್​ ನಿರೂಪಕ ಆಗಿದ್ದರು. ಮೂರನೇ ಸೀಸನ್​ನಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಅನಿಲ್​ ಕಪೂರ್​ ಅವರಿಗೆ ನೀಡಲಾಯಿತು.

ಈಗ ಹಿಂದಿ ‘ಬಿಗ್​ ಬಾಸ್​ ಒಟಿಟಿ 3’ ಕೊನೇ ಹಂತ ತಲುಪಿದೆ. ಶೀಘ್ರದಲ್ಲೇ ಇದರ ಫಿನಾಲೆ ನಡೆಯಲಿದೆ. ಇಷ್ಟು ದಿನಗಳ ಕಾಲ ಅನಿಲ್​ ಕಪೂರ್​ ಅವರ ನಿರೂಪಣೆಯನ್ನು ನೋಡಿದ ವೀಕ್ಷಕರು ಬೇಸತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಇನ್ನೆಂದೂ ಅನಿಲ್​ ಕಪೂರ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡುವುದು ಬೇಡ ಎಂದು ಜನರು ತಾಕೀತು ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿ ಹಿನಾ ಖಾನ್​ಗೆ 3ನೇ ಹಂತದ ಸ್ತನ ಕ್ಯಾನ್ಸರ್​; ಶಾಕಿಂಗ್​ ವಿಚಾರ ತಿಳಿಸಿದ ನಟಿ

ಬಿಗ್​ ಬಾಸ್​ ನಿರೂಪಣೆ ಮಾಡುವವರಿಗೆ ಒಂದು ಬಗೆಯ ಗತ್ತು ಇರಬೇಕು. ಸಂದರ್ಭಕ್ಕೆ ತಕ್ಕಂತೆ ತುಂಬ ಸಹಜವಾಗಿ ಮಾತನಾಡುವ ಕಲೆ ಇರಬೇಕು. ಈ ಗುಣಗಳು ಅನಿಲ್​ ಕಪೂರ್​ ಅವರಿಗೆ ಇಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ‘ಇವರದ್ದು ಫೇಕ್​ ವ್ಯಕ್ತಿತ್ವ, ಫೇಕ್​ ನಗು, ಫೇಕ್​ ಸಿಟ್ಟು. ಅತಿ ಕಳಪೆ ನಿರೂಪಕ ಇವರು. ಇಂಥವರು ಬಂದರೆ ಬಿಗ್ ಬಾಸ್​ ಅಂತ್ಯವಾಗುತ್ತದೆ’ ಎಂದು ವೀಕ್ಷಕರು ಅಸಮಾಧಾನ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ