AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಪ್ರತಿ ವಾರದಂತೆ ಈ ವಾರವೂ ಒಟಿಟಿಗೆ ಕೆಲ ಸೂಪರ್ ಹಿಟ್ ಸಿನಿಮಾಗಳು ಬಂದಿವೆ. ಈ ವಾರವಂತೂ ಎಲ್ಲ ಕೆಲ ಸೂಪರ್ ಬ್ಲಾಕ್ ಬಸ್ಟರ್ ಸಿನಿಮಾಗಳು ಒಟಿಟಿಗೆ ಬಂದಿವೆ. ಸಿನಿಮಾಗಳು ಮಾತ್ರವೇ ಅಲ್ಲದೆ, ವೆಬ್ ಸರಣಿಗಳು, ರಿಯಾಲಿಟಿ ಶೋಗಳು ಸಹ ಈ ವಾರ ಒಟಿಟಿಗೆ ಬಂದಿವೆ. ಇಲ್ಲಿದೆ ನೋಡಿ ಅವುಗಳ ಪಟ್ಟಿ...

ಮಂಜುನಾಥ ಸಿ.
|

Updated on: Jun 27, 2026 | 4:00 PM

Share
ಇತ್ತೀಚೆಗಷ್ಟೆ ಬಿಡುಗಡೆ ಆದ ತಮಿಳು ಸಿನಿಮಾ ‘ಬ್ಲಾಸ್ಟ್’ ಚಿತ್ರಮಂದಿರದಲ್ಲಿ ಸಖತ್ ಸದ್ದು ಮಾಡಿತು. ಪ್ರಚಾರವೇ ಇಲ್ಲದೆ ಬಿಡುಗಡೆ ಆಗಿದ್ದರೂ ಸಹ ತನ್ನ ಕಂಟೆಂಟ್​​ನಿಂದ ಸಿನಿಮಾ ಸೂಪರ್ ಹಿಟ್ ಆಗಿದೆ. ಅರ್ಜುನ್ ಸರ್ಜಾ ನಟನೆಯ ಈ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದ್ದು, ತಪ್ಪದೇ ನೋಡಬೇಕಾದ ಸಿನಿಮಾ ಇದಾಗಿದೆ.

ಇತ್ತೀಚೆಗಷ್ಟೆ ಬಿಡುಗಡೆ ಆದ ತಮಿಳು ಸಿನಿಮಾ ‘ಬ್ಲಾಸ್ಟ್’ ಚಿತ್ರಮಂದಿರದಲ್ಲಿ ಸಖತ್ ಸದ್ದು ಮಾಡಿತು. ಪ್ರಚಾರವೇ ಇಲ್ಲದೆ ಬಿಡುಗಡೆ ಆಗಿದ್ದರೂ ಸಹ ತನ್ನ ಕಂಟೆಂಟ್​​ನಿಂದ ಸಿನಿಮಾ ಸೂಪರ್ ಹಿಟ್ ಆಗಿದೆ. ಅರ್ಜುನ್ ಸರ್ಜಾ ನಟನೆಯ ಈ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದ್ದು, ತಪ್ಪದೇ ನೋಡಬೇಕಾದ ಸಿನಿಮಾ ಇದಾಗಿದೆ.

1 / 7
ಪ್ರಖ್ಯಾತ ‘ಗೇಮ್ ಆಫ್ ಥ್ರೋನ್ಸ್’ನ ಪ್ರೀಕ್ವೆಲ್ ಆಗಿರುವ ‘ಹೌಸ್ ಆಫ್ ದಿ ಡ್ರ್ಯಾಗನ್’ ವೆಬ್ ಸರಣಿಯ ಮೂರನೇ ಸೀಸನ್ ಕಳೆದ ವಾರವೇ ಆರಂಭವಾಗಿದೆ. ಇದೀಗ ಈ ವೆಬ್ ಸರಣಿಯ ಎರಡನೇ ಸೀಸನ್ ಈ ಭಾನುವಾರ ಬಿಡುಗಡೆ ಆಗಲಿದೆ. ವೆಬ್ ಸರಣಿಯನ್ನು ಎಚ್​​ಬಿಓ, ಜಿಯೋ ಹಾಟ್​​ಸ್ಟಾರ್ ಗಳಲ್ಲಿ ವೀಕ್ಷಿಸಬಹುದಾಗಿದೆ.

ಪ್ರಖ್ಯಾತ ‘ಗೇಮ್ ಆಫ್ ಥ್ರೋನ್ಸ್’ನ ಪ್ರೀಕ್ವೆಲ್ ಆಗಿರುವ ‘ಹೌಸ್ ಆಫ್ ದಿ ಡ್ರ್ಯಾಗನ್’ ವೆಬ್ ಸರಣಿಯ ಮೂರನೇ ಸೀಸನ್ ಕಳೆದ ವಾರವೇ ಆರಂಭವಾಗಿದೆ. ಇದೀಗ ಈ ವೆಬ್ ಸರಣಿಯ ಎರಡನೇ ಸೀಸನ್ ಈ ಭಾನುವಾರ ಬಿಡುಗಡೆ ಆಗಲಿದೆ. ವೆಬ್ ಸರಣಿಯನ್ನು ಎಚ್​​ಬಿಓ, ಜಿಯೋ ಹಾಟ್​​ಸ್ಟಾರ್ ಗಳಲ್ಲಿ ವೀಕ್ಷಿಸಬಹುದಾಗಿದೆ.

2 / 7
ಜೇಮ್ಸ್ ಕ್ಯಾಮರನ್ ನಿರ್ದೇಶನದ ವಿಶ್ವ ಪ್ರಸಿದ್ಧ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ತಿಂಗಳುಗಳ ಬಳಿಕ ಇದೀಗ ಒಟಿಟಿಗೆ ಬಂದಿದೆ. ಅದೂ ಉಚಿತವಾಗಿ. ಸಿನಿಮಾವನ್ನು ಜಿಯೋ ಹಾಟ್​ಸ್ಟಾರ್ ಮತ್ತು ಅಮೆಜಾನ್​​ನಲ್ಲಿ ಹೆಚ್ಚುವರಿ ಹಣ ನೀಡದೆ ನೋಡಬಹುದಾಗಿದೆ.

ಜೇಮ್ಸ್ ಕ್ಯಾಮರನ್ ನಿರ್ದೇಶನದ ವಿಶ್ವ ಪ್ರಸಿದ್ಧ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ತಿಂಗಳುಗಳ ಬಳಿಕ ಇದೀಗ ಒಟಿಟಿಗೆ ಬಂದಿದೆ. ಅದೂ ಉಚಿತವಾಗಿ. ಸಿನಿಮಾವನ್ನು ಜಿಯೋ ಹಾಟ್​ಸ್ಟಾರ್ ಮತ್ತು ಅಮೆಜಾನ್​​ನಲ್ಲಿ ಹೆಚ್ಚುವರಿ ಹಣ ನೀಡದೆ ನೋಡಬಹುದಾಗಿದೆ.

3 / 7
‘ಬಾಹುಬಲಿ’ ಮತ್ತು ‘ಬಾಹುಬಲಿ 2’ ಸಿನಿಮಾಗಳು ಭಾರತದ ಸಿನಿಮಾ ಇತಿಹಾಸದಲ್ಲೇ ಪ್ರಮುಖವಾದ ಸಿನಿಮಾಗಳು. ಈ ಸಿನಿಮಾದ ಚಿತ್ರೀಕರಣ ಇನ್ನಿತರೆಗಳ ಬಗ್ಗೆ ಸಿನಿಮಾದ ಕಲಾವಿದರು, ತಂತ್ರಜ್ಞರು ಮಾತನಾಡಿರುವ ಅಪರೂಪದ ಡಾಕ್ಯುಮೆಂಟರಿ ‘ಬಾಹುಬಲಿ: ದಿ ಟಾರ್ಚ್ ಬೇರರ್’ ಇದು ಈ ವಾರ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

‘ಬಾಹುಬಲಿ’ ಮತ್ತು ‘ಬಾಹುಬಲಿ 2’ ಸಿನಿಮಾಗಳು ಭಾರತದ ಸಿನಿಮಾ ಇತಿಹಾಸದಲ್ಲೇ ಪ್ರಮುಖವಾದ ಸಿನಿಮಾಗಳು. ಈ ಸಿನಿಮಾದ ಚಿತ್ರೀಕರಣ ಇನ್ನಿತರೆಗಳ ಬಗ್ಗೆ ಸಿನಿಮಾದ ಕಲಾವಿದರು, ತಂತ್ರಜ್ಞರು ಮಾತನಾಡಿರುವ ಅಪರೂಪದ ಡಾಕ್ಯುಮೆಂಟರಿ ‘ಬಾಹುಬಲಿ: ದಿ ಟಾರ್ಚ್ ಬೇರರ್’ ಇದು ಈ ವಾರ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

4 / 7
ಕಬಡ್ಡಿ ಆಟಗಾರನೊಬ್ಬ ಅನಿವಾರ್ಯ ಕಾರಣಗಳಿಂದ ಭೂಗತ ಲೋಕಕ್ಕೆ ಇಳಿಯುವ ಕತೆಯನ್ನು ಒಳಗೊಂಡಿರುವ ತಮಿಳು ಸಿನಿಮಾ ‘ಲಿಂಗಂ’. ಚಿತ್ರಮಂದಿರಗಳಲ್ಲಿ ಗಮನ ಸೆಳೆದಿದ್ದ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

ಕಬಡ್ಡಿ ಆಟಗಾರನೊಬ್ಬ ಅನಿವಾರ್ಯ ಕಾರಣಗಳಿಂದ ಭೂಗತ ಲೋಕಕ್ಕೆ ಇಳಿಯುವ ಕತೆಯನ್ನು ಒಳಗೊಂಡಿರುವ ತಮಿಳು ಸಿನಿಮಾ ‘ಲಿಂಗಂ’. ಚಿತ್ರಮಂದಿರಗಳಲ್ಲಿ ಗಮನ ಸೆಳೆದಿದ್ದ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

5 / 7
ಈ ಹಿಂದೆ ಬೇರೆ ಒಟಿಟಿಯಲ್ಲಿ ಪ್ರಸಾರ ಆಗಿದ್ದ ‘ಲಾಕಪ್’ ಒಟಿಟಿ ರಿಯಾಲಿಟಿ ಶೋ ಈ ಬಾರಿ ನೆಟ್​​ಫ್ಲಿಕ್ಸ್​​ಗೆ ಬಂದಿದೆ. ಕಳೆದ ಸೀಸನ್ ವಿನ್ನರ್ ಮುನಾವರ್ ಫಾರುಖಿ ನಿರೂಪಕರಾದರೆ, ರಿತೇಶ್ ದೇಶ್​ಮುಖ್ ಮತ್ತು ಫರಾ ಖಾನ್ ಮುಖ್ಯ ನಿರೂಪಕರಾಗಿದ್ದಾರೆ. ಇದೇ ವಾರದಿಂದ ಈ ಶೋ ನೆಟ್​ಫ್ಲಿಕ್ಸ್​​ನಲ್ಲಿ ಪ್ರಾರಂಭವಾಗಿದೆ.

ಈ ಹಿಂದೆ ಬೇರೆ ಒಟಿಟಿಯಲ್ಲಿ ಪ್ರಸಾರ ಆಗಿದ್ದ ‘ಲಾಕಪ್’ ಒಟಿಟಿ ರಿಯಾಲಿಟಿ ಶೋ ಈ ಬಾರಿ ನೆಟ್​​ಫ್ಲಿಕ್ಸ್​​ಗೆ ಬಂದಿದೆ. ಕಳೆದ ಸೀಸನ್ ವಿನ್ನರ್ ಮುನಾವರ್ ಫಾರುಖಿ ನಿರೂಪಕರಾದರೆ, ರಿತೇಶ್ ದೇಶ್​ಮುಖ್ ಮತ್ತು ಫರಾ ಖಾನ್ ಮುಖ್ಯ ನಿರೂಪಕರಾಗಿದ್ದಾರೆ. ಇದೇ ವಾರದಿಂದ ಈ ಶೋ ನೆಟ್​ಫ್ಲಿಕ್ಸ್​​ನಲ್ಲಿ ಪ್ರಾರಂಭವಾಗಿದೆ.

6 / 7
ಬಾಲಿವುಡ್ ನಟ ರಿತೇಶ್ ದೇಶ್​​ಮುಖ್ ನಟಿಸಿ, ನಿರ್ದೇಶನ ಮತ್ತು ನಿರ್ಮಾಣವೂ ಮಾಡಿರುವ ಮರಾಠಿ ಸಿನಿಮಾ ‘ರಾಜಾ ಶಿವಾಜಿ’ ಮರಾಠಿ ಚಿತ್ರರಂಗದಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಸಿನಿಮಾವನ್ನು ಮರಾಠಿಯಲ್ಲಿ ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಬಾಲಿವುಡ್ ನಟ ರಿತೇಶ್ ದೇಶ್​​ಮುಖ್ ನಟಿಸಿ, ನಿರ್ದೇಶನ ಮತ್ತು ನಿರ್ಮಾಣವೂ ಮಾಡಿರುವ ಮರಾಠಿ ಸಿನಿಮಾ ‘ರಾಜಾ ಶಿವಾಜಿ’ ಮರಾಠಿ ಚಿತ್ರರಂಗದಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಸಿನಿಮಾವನ್ನು ಮರಾಠಿಯಲ್ಲಿ ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

7 / 7
Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ