AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸಖತ್ ಸಿನಿಮಾಗಳು, ಪಟ್ಟಿ ಇಲ್ಲಿದೆ

OTT Release this week: ವಾರದಂತೆ ಈ ವಾರವೂ ಸಹ ಒಟಿಟಿಗೆ ಕೆಲವು ಒಳ್ಳೆಯ ಸಿನಿಮಾಗಳು ಮತ್ತು ವೆಬ್ ಸರಣಿಗಳು ಬಿಡುಗಡೆ ಆಗಿವೆ. ಕೆಲವು ಬ್ಲಾಕ್ ಬಸ್ಟರ್ ಮತ್ತು ಬಹು ನಿರೀಕ್ಷಿತ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿವೆ. ಈ ವಾರ ಬಂದಿರುವ ಸಿನಿಮಾಗಳು ಮತ್ತು ವೆಬ್ ಸರಣಿಗಳ ಪಟ್ಟಿ ಇಲ್ಲಿದೆ ನೋಡಿ, ಇವುಗಳಲ್ಲಿ ನಿಮ್ಮ ಆಯ್ಕೆ ಯಾವುದು?

ಮಂಜುನಾಥ ಸಿ.
|

Updated on:Jul 11, 2026 | 12:57 PM

Share
ಕಬಡ್ಡಿ ಆಡುತ್ತಿದ್ದ ಗೆಳೆಯರು ಅಂಡರ್ವಲ್ಡ್ ಸಂಪರ್ಕಕ್ಕೆ ಬಂದು ಬಳಿಕ ಅವರ ಜೀವನದಲ್ಲಿ ಆಗುವ ಬದಲಾವಣೆ, ಬದಲಾಗುವ ಅವರ ಗೆಳೆತನ ಇತ್ಯಾದಿಗಳ ಕತೆಗಳನ್ನು ಹೇಳುತ್ತದೆ ಮಲಯಾಳಂನ ‘ಬಾಲ್ಟಿ’ ಸಿನಿಮಾ. ಈ ಸಿನಿಮಾ ಸೋನಿ ಲಿವ್ ನಲ್ಲಿ ವೀಕ್ಷಿಸಬಹುದು.

ಕಬಡ್ಡಿ ಆಡುತ್ತಿದ್ದ ಗೆಳೆಯರು ಅಂಡರ್ವಲ್ಡ್ ಸಂಪರ್ಕಕ್ಕೆ ಬಂದು ಬಳಿಕ ಅವರ ಜೀವನದಲ್ಲಿ ಆಗುವ ಬದಲಾವಣೆ, ಬದಲಾಗುವ ಅವರ ಗೆಳೆತನ ಇತ್ಯಾದಿಗಳ ಕತೆಗಳನ್ನು ಹೇಳುತ್ತದೆ ಮಲಯಾಳಂನ ‘ಬಾಲ್ಟಿ’ ಸಿನಿಮಾ. ಈ ಸಿನಿಮಾ ಸೋನಿ ಲಿವ್ ನಲ್ಲಿ ವೀಕ್ಷಿಸಬಹುದು.

1 / 7
ಗೇಮ್ ಆಫ್ ಥ್ರೋನ್ಸ್​​ನ ಪ್ರೀಕ್ವೆಲ್ ಆಗಿರುವ ಹೌಸ್ ಆಫ್ ದಿ ಡ್ರ್ಯಾಗನ್ ಮೂರನೇ ಸೀಸನ್​​ನ ನಾಲ್ಕನೇ ಎಪಿಸೋಡ್ ಇದೇ ಭಾನುವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಎಚ್​​ಬಿಓನಲ್ಲಿಯೂ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ.

ಗೇಮ್ ಆಫ್ ಥ್ರೋನ್ಸ್​​ನ ಪ್ರೀಕ್ವೆಲ್ ಆಗಿರುವ ಹೌಸ್ ಆಫ್ ದಿ ಡ್ರ್ಯಾಗನ್ ಮೂರನೇ ಸೀಸನ್​​ನ ನಾಲ್ಕನೇ ಎಪಿಸೋಡ್ ಇದೇ ಭಾನುವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಎಚ್​​ಬಿಓನಲ್ಲಿಯೂ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ.

2 / 7
ಸನ್ನಿ ಡಿಯೋಲ್ ಮತ್ತು ಅಕ್ಷಯ್ ಖನ್ನಾ ನಟನೆಯ ‘ಇಕ್ಕ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಭಿನ್ನ ರೀತಿಯ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಸನ್ನಿ ಡಿಯೋಲ್ ಮತ್ತು ಅಕ್ಷಯ್ ಖನ್ನಾ ನಟನೆಯ ‘ಇಕ್ಕ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಭಿನ್ನ ರೀತಿಯ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

3 / 7
ಹಿರಿಯ ನಟರಾದ ಜಯರಾಂ, ಊರ್ವಶಿ ಜೊತೆಗೆ ಇನ್ನೂ ಕೆಲವು ಯುವ ನಟ-ನಟಿಯರು ನಟಿಸಿರುವ ಹಾಸ್ಯ ಪ್ರಧಾನ ಥ್ರಿಲ್ಲರ್ ಸಿನಿಮಾ ‘ಪರಿಮಳ ಆಂಡ್ ಕೋ’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

ಹಿರಿಯ ನಟರಾದ ಜಯರಾಂ, ಊರ್ವಶಿ ಜೊತೆಗೆ ಇನ್ನೂ ಕೆಲವು ಯುವ ನಟ-ನಟಿಯರು ನಟಿಸಿರುವ ಹಾಸ್ಯ ಪ್ರಧಾನ ಥ್ರಿಲ್ಲರ್ ಸಿನಿಮಾ ‘ಪರಿಮಳ ಆಂಡ್ ಕೋ’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

4 / 7
‘ಪತಿ ಪತ್ನಿ ಔರ್ ವೋ’ ಸರಣಿ ದಶಕಗಳಿಂದಲೂ ಹಿಂದಿ ಚಿತ್ರರಂಗದಲ್ಲಿ ಮುಂದುವರೆದುಕೊಂಡು ಬರುತ್ತಲೇ ಇದೆ. ಇದೀಗ ಆಯುಷ್ಮಾನ್ ಖುರಾನಾ, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್, ವಾಮಿಕಾ ಚಬ್ಬಿ ಅವರುಗಳು ನಟನೆಯ ಈ ಹಾಸ್ಯ ಪ್ರಧಾನ ಸಿನಿಮಾ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

‘ಪತಿ ಪತ್ನಿ ಔರ್ ವೋ’ ಸರಣಿ ದಶಕಗಳಿಂದಲೂ ಹಿಂದಿ ಚಿತ್ರರಂಗದಲ್ಲಿ ಮುಂದುವರೆದುಕೊಂಡು ಬರುತ್ತಲೇ ಇದೆ. ಇದೀಗ ಆಯುಷ್ಮಾನ್ ಖುರಾನಾ, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್, ವಾಮಿಕಾ ಚಬ್ಬಿ ಅವರುಗಳು ನಟನೆಯ ಈ ಹಾಸ್ಯ ಪ್ರಧಾನ ಸಿನಿಮಾ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ಈ ವಾರ ರಾಮ್ ಚರಣ್, ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಈ ಸೂಪರ್ ಹಿಟ್ ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ವಿವಾದಕ್ಕೆ ಕಾರಣವಾಗಿದ್ದ ಸೀನ್​​​ಗಳನ್ನು ಒಟಿಟಿಯಲ್ಲಿ ತೆಗೆದು ಹಾಕಲಾಗಿದೆ.

ಈ ವಾರ ರಾಮ್ ಚರಣ್, ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಈ ಸೂಪರ್ ಹಿಟ್ ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ವಿವಾದಕ್ಕೆ ಕಾರಣವಾಗಿದ್ದ ಸೀನ್​​​ಗಳನ್ನು ಒಟಿಟಿಯಲ್ಲಿ ತೆಗೆದು ಹಾಕಲಾಗಿದೆ.

6 / 7
ಭಾರತ ಚಿತ್ರರಂಗದ ಲಿಜೆಂಡರಿ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ತಮ್ಮ 93ನೇ ವಯಸ್ಸಿನಲ್ಲಿ ನಿರ್ದೇಶನ ಮಾಡಿರುವ ‘ಸಿಂಗ ಗೀತಂ’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಸಿನಿಮಾಕ್ಕೆ ಸಾಧಾರಣ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಅನ್ನು ನೋಡಬಹುದಾಗಿದೆ.

ಭಾರತ ಚಿತ್ರರಂಗದ ಲಿಜೆಂಡರಿ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ತಮ್ಮ 93ನೇ ವಯಸ್ಸಿನಲ್ಲಿ ನಿರ್ದೇಶನ ಮಾಡಿರುವ ‘ಸಿಂಗ ಗೀತಂ’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಸಿನಿಮಾಕ್ಕೆ ಸಾಧಾರಣ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಅನ್ನು ನೋಡಬಹುದಾಗಿದೆ.

7 / 7

Published On - 12:56 pm, Sat, 11 July 26

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ