AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಒಟಿಟಿಯಲ್ಲಿ ಪಾಕ್ ಸಿನಿಮಾ, ಧಾರಾವಾಹಿ, ಸಂಗೀತ ಬ್ಯಾನ್; ಕೇಂದ್ರದ ಆದೇಶ

ಒಟಿಟಿ, ಯೂಟ್ಯೂಬ್​ ಮತ್ತು ಮ್ಯೂಸಿಕ್ ಆ್ಯಪ್​ಗಳ ಮೂಲಕ ಪಾಕಿಸ್ತಾನದ ಮನರಂಜನಾ ಕಂಟೆಂಟ್​ಗಳು ಭಾರತದಲ್ಲಿ ಪ್ರಸಾರ ಆಗುತ್ತಿದ್ದವು. ಅವುಗಳ ಪ್ರಸಾರವನ್ನು ಕೂಡಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣ ಆಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

ಭಾರತದ ಒಟಿಟಿಯಲ್ಲಿ ಪಾಕ್ ಸಿನಿಮಾ, ಧಾರಾವಾಹಿ, ಸಂಗೀತ ಬ್ಯಾನ್; ಕೇಂದ್ರದ ಆದೇಶ
Pak Web Series
ಮದನ್​ ಕುಮಾರ್​
|

Updated on: May 08, 2025 | 6:14 PM

Share

ಭಾರತದ ಮತ್ತು ಪಾಕಿಸ್ತಾನದ (Pakistan) ನಡುವೆ ಯುದ್ಧದ ವಾತಾವರಣ ನಿರ್ಮಾಣ ಆಗಿದೆ. ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂದೂರ್’ (Operation Sindoor) ನಡೆಸಿದೆ. ಇದರಿಂದಾಗಿ ಎರಡೂ ದೇಶಗಳ ನಡುವೆ ಟೆನ್ಷನ್ ಹೆಚ್ಚಿದೆ. ಈಗ ಭಾರತದಲ್ಲಿ ಪಾಕಿಸ್ತಾನದ ಯಾವುದೇ ಮನರಂಜನಾ ಕಂಟೆಂಟ್​ಗಳು ಪ್ರಸಾರ ಆಗಬಾರದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಪಾಲಿಸುವಂತೆ ಎಲ್ಲ ಒಟಿಟಿ (OTT) ಸಂಸ್ಥೆಗಳಿಗೆ ಸೂಚಿಸಲಾಗಿದೆ.

ಮನರಂಜನೆಯ ವಿಚಾರದಲ್ಲಿ ಪಾಕಿಸ್ತಾನ ಮತ್ತು ಭಾರತದ ನಡುವೆ ಸಂಪರ್ಕ ಇತ್ತು. ಭಾರತದ ಅನೇಕ ಸಿನಿಮಾಗಳು ಪಾಕಿಸ್ತಾನದಲ್ಲಿ ಪ್ರದರ್ಶನ ಕಂಡಿವೆ. ಇಲ್ಲಿನ ಹಾಡುಗಳಿಗೆ ಅಲ್ಲಿ ಬೇಡಿಕೆ ಇದೆ. ಹಾಗೆಯೇ ಒಟಿಟಿ ಮೂಲಕ ಪಾಕಿಸ್ತಾನದ ಸಿನಿಮಾ, ವೆಬ್ ಸಿರೀಸ್, ಧಾರಾವಾಹಿ, ಸಾಂಗ್, ಪಾಡ್​ಕಾಸ್ಟ್​ ಮುಂತಾದ್ದನ್ನು ಭಾರತದ ಪ್ರೇಕ್ಷಕರು ವೀಕ್ಷಿಸುತ್ತಿದ್ದರು. ಅದಕ್ಕೆ ಈಗ ಕಡಿವಾಣ ಹಾಕಲಾಗಿದೆ.

‘ರಾಷ್ಟ್ರದ ಭದ್ರತೆಯ ಹಿತದೃಷ್ಟಿಯಿಂದ ಎಲ್ಲ ಒಟಿಟಿ ಪ್ಲಾಟ್​ಫಾರ್ಮ್​ ಮತ್ತು ಮಾಧ್ಯಮಗಳಿಗೆ ಈ ಮೂಲಕ ಸೂಚನೆ ನೀಡಲಾಗುತ್ತಿದೆ. ಪಾಕಿಸ್ತಾನದಿಂದ ನಿರ್ಮಾಣವಾದ ಎಲ್ಲ ವೆಬ್ ಸಿರೀಸ್, ಸಿನಿಮಾಗಳು, ಹಾಡುಗಳು, ಪಾಡ್​ಕಾಸ್ಟ್ ಮತ್ತು ಇತರೆ ಕಂಟೆಂಟ್​ಗಳ ಪ್ರಸಾರವನ್ನು ಕೂಡಲೇ ನಿಲ್ಲಿಸಬೇಕು. ಸಬ್​ಸ್ಕ್ರಿಪ್ಷನ್​ ಹಾಗೂ ಉಚಿತವಾಗಿ ಪ್ರಸಾರವಾಗುವ ಎಲ್ಲ ಪ್ಲಾಟ್​ಫಾರ್ಮ್​ಗಳಿಗೂ ಇದು ಅನ್ವಯ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚನೆ ನೀಡಿದೆ.

ಇದನ್ನೂ ಓದಿ
Image
ಪ್ರಸಾರಭಾರತಿಯಿಂದ ವೇವ್ಸ್ ಒಟಿಟಿ; ಕೇಬಲ್ ಆಪರೇಟರ್ಸ್​ಗೆ ಆತಂಕ
Image
ಕನ್ನಡ ಸಿನಿಮಾಗಳಿಗೆ ಕಡಿಮೆ ದರದ ಹೊಸ ಒಟಿಟಿ ವೇದಿಕೆ
Image
ಅಸಭ್ಯ ಮತ್ತು ಅಶ್ಲೀಲ ವಿಷಯಗಳಿರುವ 18 OTT ಪ್ಲಾಟ್‌ಫಾರ್ಮ್​​ಗೆ ನಿರ್ಬಂಧ
Image
ಸರ್ಕಾರದಿಂದಲೇ ಶುರುವಾಗಲಿದೆ ಹೊಸ ಒಟಿಟಿ; ಭಾರತದಲ್ಲಿ ಇದು ಮೊದಲ ಪ್ರಯತ್ನ

ಜೀ2, ಯೂಟ್ಯೂಬ್, ಅಮೇಜಾನ್ ಪ್ರೈಂ ವಿಡಿಯೋ ಮುಂತಾದ ಪ್ಲಾಟ್​ಫಾರ್ಮ್​ಗಳಲ್ಲಿ ಪಾಕಿಸ್ತಾನದ ಸಿನಿಮಾ ಮತ್ತು ಧಾರಾವಾಹಿಗಳು ಲಭ್ಯವಾಗಿದ್ದವು. ಭಾರತದ ಪ್ರೇಕ್ಷಕರು ಇವುಗಳನ್ನು ವೀಕ್ಷಿಸುತ್ತಿದ್ದರು. ಯೂಟ್ಯೂಬ್​​ನಲ್ಲಿ ಪಾಕಿಸ್ತಾನದ ಸಂಗೀತಕ್ಕೆ ಭಾರತದಲ್ಲಿ ಬೇಡಿಕೆ ಇತ್ತು. ಆದರೆ ಈಗ ಯುದ್ಧದ ವಾತಾವರಣ ಇರುವುದರಿಂದ ಪಾಕ್ ಕಂಟೆಂಟ್​ಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಭಾರತದ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ ಎಫ್​ಎಂ ರೇಡಿಯೋ ಸ್ಟೇಷನ್ಸ್

ಇದೇ ರೀತಿ ಇನ್ನೂ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಶಿಯಲ್ ಮೀಡಿಯಾ ಖಾತೆಗಳನ್ನು ಭಾರತದಲ್ಲಿ ರಿಸ್ಟ್ರಿಕ್ಟ್ ಮಾಡಲಾಗಿದೆ. ಪಾಕ್ ಸೆಲೆಬ್ರಿಟಿಗಳ ಅಕೌಂಟ್ ಕಾಣಿಸುತ್ತಿಲ್ಲ ಎಂದು ಈಗಾಗಲೇ ಅನೇಕರು ಹೇಳಿದ್ದಾರೆ. ಇನ್ನು, ಪಾಕಿಸ್ತಾನದ ಕಲಾವಿದರ ಜೊತೆ ಭಾರತದ ಚಿತ್ರರಂಗ ಯಾವುದೇ ನಂಟು ಇಟ್ಟುಕೊಳ್ಳದಿರಲಿ ತೀರ್ಮಾನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ