AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀವನ ತುಂಬಾನೇ ಸಣ್ಣದು’; ‘ಪಂಚಾಯತ್’ ನಟ ಆಸಿಫ್ ಖಾನ್​ಗೆ ಹೃದಯಾಘಾತ

Aasif Khan heart attack: ಪಂಚಾಯತ್ ವೆಬ್ ಸರಣಿಯಲ್ಲಿ ಪ್ರಸಿದ್ಧ ನಟ ಆಸಿಫ್ ಖಾನ್ ಅವರಿಗೆ ಇತ್ತೀಚೆಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರಿಂದ ಅವರು ಬದುಕುಳಿದಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡ ಅವರು ಜೀವನದ ಮೌಲ್ಯವನ್ನು ಒತ್ತಿಹೇಳಿದ್ದಾರೆ.

‘ಜೀವನ ತುಂಬಾನೇ ಸಣ್ಣದು’; ‘ಪಂಚಾಯತ್’ ನಟ ಆಸಿಫ್ ಖಾನ್​ಗೆ ಹೃದಯಾಘಾತ
ಆಸಿಫ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 16, 2025 | 8:40 AM

Share

‘ಪಂಚಾಯತ್’ (Panchayat) ವೆಬ್ ಸರಣಿಯಲ್ಲಿ ಮೆಹಮಾನ್ (ಅತಿಥಿ) ಆಗಿ ಗಮನ ಸೆಳೆದವರು ನಟ ಆಸಿಫ್ ಖಾನ್. ಅವರಿಗೆ ಇತ್ತೀಚೆಗೆ ಹೃದಯಾಘಾತ ಆಗಿದೆ ಎಂದು ತಿಳಿದು ಬಂದಿದೆ. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಅವರು ಬದುಕುಳಿದಿದ್ದಾರೆ.  ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ‘ಜೀವನ ತುಂಬಾನೇ ಸಣ್ಣದು’ ಎಂಬುದನ್ನು ಒತ್ತಿ ಹೇಳಿದ್ದಾರೆ.

ಆಸಿಫ್ ಖಾನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ತಮ್ಮ ಆರೋಗ್ಯದ ಬಗ್ಗೆ ಹಾಗೂ ಏನಾಯಿತು ಎಂಬುದರ ಮಾಹಿತಿ ನಿಡಿದ್ದಾರೆ. ಮೊದಲ ಸ್ಟೇಟಸ್​ನಲ್ಲಿ ಅವರು ಆಸ್ಪತ್ರೆಯ ಛಾವಣಿ ಫೋಟೋ ಹಾಕಿದ್ದಾರೆ. ಜೀವನ ತುಂಬಾನೇ ಸಣ್ಣದು ಎಂದು ಹೇಳಿದ್ದಾರೆ.

‘ಕಳೆದ 36 ಗಂಟೆಗಳ ಕಾಲ ಇದನ್ನು ನೋಡಿದ ಬಳಿಕ ನನಗೆ ಜೀವನ ಚಿಕ್ಕದು ಎಂಬುದು ಅರಿವಾಗಿದೆ. ಒಂದು ದಿನವನ್ನೂ ಹಗುರವಾಗಿ ಪರಿಗಣಿಸಬೇಡಿ. ಎಲ್ಲವೂ ಒಂದು ಕ್ಷಣದಲ್ಲಿ ಬದಲಾಗಬಹುದು. ನಿಮಗೆ ಸಿಕ್ಕಿರುವ ವಿಚಾರಕ್ಕೆ ಕೃತಜ್ಞರಾಗಿರಿ. ನಿಮಗೆ ಯಾರು ಅತ್ಯಂತ ಮುಖ್ಯ ಎಂಬುದನ್ನು ನೆನಪಿಡಿ ಮತ್ತು ಅವರನ್ನು ಯಾವಾಗಲೂ ಪ್ರೀತಿಸಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಎಲ್ಲಿ ಹೋದರು ಕತ್ರಿನಾ ಕೈಫ್? ಬರ್ತ್​ಡೇಗಾದರೂ ಸಿಗುತ್ತಾ ಹೊಸ ಸಿನಿಮಾ?
Image
‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ ಮನೆಗೆ ಬಂದಳು ಮಹಾಲಕ್ಷ್ಮೀ
Image
ಬರಲಿದೆ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’; ಇಲ್ಲಿದೆ ಆಡಿಷನ್ ವಿವರ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ಇದನ್ನೂ ಓದಿ: ‘ಪಂಚಾಯತ್​’ ವೆಬ್​ ಸೀರಿಸ್​ಗೆ ಕಥೆ ಬರೆದಿದ್ದಕ್ಕೆ ಸಿಕ್ಕಿದ್ದು ಬರೋಬ್ಬರಿ 5 ಕೋಟಿ ರೂಪಾಯಿ?

ಮತ್ತೊಂದು ಪೋಸ್ಟ್​ನಲ್ಲಿ, ‘ನಾನು ರಿಕವರಿ ಹಂತದಲ್ಲಿ ಇದ್ದೇನೆ. ನಿಮ್ಮ ಹಾರೈಕೆ ಹಾಗೂ ಪ್ರೀತಿಗೆ ಧನ್ಯವಾದ. ನಿಮ್ಮ ಬೆಂಬಲಕ್ಕೆ ಧನ್ಯವಾದ’ ಎಂದು ಹೇಳಿದ್ದಾರೆ.

ಆಸಿಫ್ ಸಿನಿ ಜರ್ನಿ..

2018ರ ‘ಮಿರ್ಜಾಪುರ್’ ವೆಬ್ ಸರಣಿ ಮೂಲಕ ಆಸಿಫ್ ಖಾನ್ ಅವರು ಬಣ್ಣದ ಬದುಕು ಆರಂಭಿಸಿದರು. ಅವರು ಬಾಬರ್ ಪಾತ್ರದಲ್ಲಿ ನಟಿಸಿದರು. ‘ಪಂಚಾಯತ್’ ಸರಣಿಯಲ್ಲಿ ಅವರು ಮಾಡಿದ ಪಾತ್ರ ಸೂಪರ್ ಹಿಟ್ ಆಯಿತು. ಇದರಿಂದ ಅವರಿಗೆ ಜನಪ್ರಿಯತೆ ದೊರೆಯಿತು. ಅವರು ‘ಪಂಚಾಯತ್ ಸೀಸನ್ 3’ನಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಹೃದಯಾಘಾತದಿಂದ ಅವರ ಸಿನಿಮಾ ಕೆಲಸಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ