AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಚಿತ್ರದ ಪ್ರೇಕ್ಷಕರಿಗೆ ಒಟಿಟಿಯಲ್ಲಿ ಕಾದಿದೆ ಅಚ್ಚರಿ; ಮಾ.22ರಂದು ಡಿಲಿಟೆಡ್​​ ದೃಶ್ಯಗಳ ದರ್ಶನ?

Pathaan Movie OTT Release: ‘ಪಠಾಣ್​’ ಚಿತ್ರದ ಡಿಲಿಟೆಡ್​ ಸೀನ್​ಗಳನ್ನು ಒಟಿಟಿ ವರ್ಷನ್​ನಲ್ಲಿ ಸೇರಿಸಲಾಗುವುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

Shah Rukh Khan: ‘ಪಠಾಣ್​’ ಚಿತ್ರದ ಪ್ರೇಕ್ಷಕರಿಗೆ ಒಟಿಟಿಯಲ್ಲಿ ಕಾದಿದೆ ಅಚ್ಚರಿ; ಮಾ.22ರಂದು ಡಿಲಿಟೆಡ್​​ ದೃಶ್ಯಗಳ ದರ್ಶನ?
ದೀಪಿಕಾ ಪಡುಕೋಣೆ, ಶಾರುಖ್ ಖಾನ್
ಮದನ್​ ಕುಮಾರ್​
| Edited By: |

Updated on: Mar 16, 2023 | 7:30 AM

Share

ಈ ವರ್ಷದ ಬ್ಲಾಕ್​ ಬಸ್ಟರ್​ ಸಿನಿಮಾಗಳಲ್ಲಿ ‘ಪಠಾಣ್​’ ಚಿತ್ರ (Pathaan Movie) ಅಗ್ರಸ್ಥಾನ ಪಡೆದುಕೊಂಡಿದೆ. ವಿಶ್ವ ಮಾರುಕಟ್ಟೆಯಲ್ಲಿ ಈ ಸಿನಿಮಾಗೆ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಥಿಯೇಟರ್​ನಲ್ಲಿ ಈ ಚಿತ್ರ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ‘ಪಠಾಣ್​’ ಒಟಿಟಿ ರಿಲೀಸ್​ ದಿನಾಂಕ ಕೂಡ ಬಹಿರಂಗ ಆಗಿದೆ. ಮಾರ್ಚ್​ 22ರಂದು ‘ಅಮೇಜಾನ್​ ಪ್ರೈಂ ವಿಡಿಯೋ’ (Amazon Prime Video) ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಚಿತ್ರಮಂದಿರದಲ್ಲಿ ನೋಡಿದ ಸಿನಿಮಾವನ್ನು ಮತ್ತೆ ಯಾಕೆ ಒಟಿಟಿಯಲ್ಲಿ ನೋಡಬೇಕು ಅಂತ ಕೆಲವರು ನಿರ್ಲಕ್ಷ್ಯ ಮಾಡಬಹುದು. ಆದರೆ ‘ಪಠಾಣ್​’ ವಿಚಾರದಲ್ಲಿ ಹಾಗೆ ಮಾಡುವಂತಿಲ್ಲ. ಶಾರುಖ್​ ಖಾನ್​ ಅಭಿಮಾನಿಗಳಿಗೆ ಒಟಿಟಿಯಲ್ಲಿ ಅಚ್ಚರಿ ಇರಲಿದೆ. ಒಟಿಟಿ ವರ್ಷನ್​ನಲ್ಲಿ ಪಠಾಣ್ ಸಿನಿಮಾದ ಡಿಲಿಟೆಡ್​ ದೃಶ್ಯಗಳನ್ನು (Pathaan Deleted Scenes) ಸೇರಿಸಲಾಗುವುದು ಎಂಬ ಮಾತು ಕೇಳಿಬಂದಿದೆ.

ಚಿತ್ರದ ಅವಧಿಯನ್ನು ಗಮನದಲ್ಲಿ ಇಟ್ಟುಕೊಂಡು ಕೆಲವು ದೃಶ್ಯಗಳನ್ನು ಕಟ್​ ಮಾಡಲಾಗಿರುತ್ತದೆ. ಆ ದೃಶ್ಯಗಳನ್ನು ನೋಡಬೇಕು ಎಂಬ ಆಸೆ ಅಭಿಮಾನಿಗಳಿಗೆ ಇರುತ್ತದೆ. ‘ಪಠಾಣ್​’ ವಿಚಾರದಲ್ಲೂ ಹಾಗೆಯೇ ಆಗಿದೆ. ಕೆಲವು ಡಿಲಿಟೆಡ್​ ಸೀನ್​ಗಳನ್ನು ಒಟಿಟಿ ವರ್ಷನ್​ನಲ್ಲಿ ಸೇರಿಸಲಾಗುವುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆ ಕಾರಣದಿಂದ ‘ಪಠಾಣ್’ ಚಿತ್ರದ ಒಟಿಟಿ ರಿಲೀಸ್​ ಬಗ್ಗೆ ಕೌತಕ ಹೆಚ್ಚಿದೆ.

ಇದನ್ನೂ ಓದಿ: Jawan: ತಡವಾಗುತ್ತಾ ‘ಜವಾನ್​’ ಬಿಡುಗಡೆ? ಶಾರುಖ್​ ಖಾನ್ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಹಬ್ಬಿದೆ ಗಾಸಿಪ್​

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ಪಠಾಣ್​’ ಸಿನಿಮಾದಲ್ಲಿ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ, ಡಿಂಪಲ್​ ಕಪಾಡಿಯಾ, ಆಶುತೋಷ್​ ರಾಣಾ, ಪ್ರಕಾಶ್​ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಯಶ್​ ರಾಜ್​ ಫಿಲ್ಮ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿರುವ ಈ ಸಿನಿಮಾದಿಂದ ನಿರ್ಮಾಪಕರಿಗೆ ಭರ್ಜರಿ ಲಾಭ ಆಗಿದೆ. ‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಗೆಲುವಿನಿಂದಾಗಿ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಇದನ್ನೂ ಓದಿ: The Romantics: ಶಾರುಖ್​ ಖಾನ್​ ಮನೆಗೆ ಶೂಟಿಂಗ್​ ಮಾಡಲು ಹೋದಾಗ ಆದ ಅನುಭವ ವಿವರಿಸಿದ ನಿರ್ದೇಶಕಿ

ಜನವರಿ 25ರಂದು ‘ಪಠಾಣ್​’ ಚಿತ್ರ ಅದ್ದೂರಿಯಾಗಿ ತೆರೆ ಕಂಡಿತು. ಮೊದಲ ದಿನವೇ ಭರ್ಜರಿ ಕಲೆಕ್ಷನ್​ (57 ಕೋಟಿ ರೂಪಾಯಿ) ಮಾಡುವ ಮೂಲಕ ಎಲ್ಲರ ಗಮನ ಸೆಳೆಯಿತು. ಈಗ ಈ ಚಿತ್ರ 50 ದಿನಗಳನ್ನು ಪೂರೈಸಿರುವುದು ಶಾರುಖ್​ ಖಾನ್​ ಅಭಿಮಾನಿಗಳಿಗೆ ಖುಷಿ ನೀಡಿದೆ. 50 ದಿನ ಕಳೆದಿದ್ದರೂ ಕೂಡ 20 ದೇಶಗಳಲ್ಲಿ ಇಂದಿಗೂ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಬೇರೆ ಸ್ಟಾರ್​ ನಟರ ಹೊಸ ಸಿನಿಮಾಗಳು ಬಂದು ಪೈಪೋಟಿ ನೀಡಿದರೂ ಕೂಡ ಶಾರುಖ್​ ಖಾನ್​ ಚಿತ್ರಕ್ಕೆ ಹಿನ್ನಡೆ ಆಗಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?