AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ

ಶಾರುಖ್​ ಖಾನ್​ ಅವರ ಓಟಿಟಿ ಎಂಟ್ರಿಗೆ ಸಂಬಂಧಿಸಿದ ಒಂದು ವಿಡಿಯೋ ವೈರಲ್​ ಆಗಿದೆ. ಇದೇ ವಿಡಿಯೋವನ್ನು ಕರಣ್​ ಜೋಹರ್​ ಮುಂತಾದ ಬಾಲಿವುಡ್​ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ
ಶಾರುಖ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Sep 12, 2021 | 12:53 PM

Share

ಬಾಲಿವುಡ್​ ನಟ ಶಾರುಖ್​ ಖಾನ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಆದರೂ ಕೂಡ ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗುತ್ತಿಲ್ಲ. ಮಾಡಿದ ಎಲ್ಲ ಸಿನಿಮಾಗಳೂ ಸಾಲು ಸಾಲಾಗಿ ಸೋಲು ಕಂಡಿವೆ. ಹಾಗಾಗಿ ‘ಜೀರೋ’ ಸಿನಿಮಾದ ಹೀನಾಯ ಸೋಲಿನ ಬಳಿಕ ಶಾರುಖ್​ ಬೇರೆ ಯಾವುದೇ ಚಿತ್ರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ನಡುವೆ ಅವರು ‘ಪಠಾಣ್​’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ತಮಿಳು ನಿರ್ದೇಶಕ ಅಟ್ಲಿ ಕುಮಾರ್​ ಜೊತೆಗೂ ಕೈ ಜೋಡಿಸಿರುವ ಬಗ್ಗೆ ಸುದ್ದಿ ಹರಿದಾಡಿತು. ಈಗ ಅದೆಲ್ಲವನ್ನೂ ಮೀರಿಸುವಂತಹ ಬ್ರೇಕಿಂಗ್​ ನ್ಯೂಸ್​ ಸಿಕ್ಕಿದೆ. ಶೀಘ್ರದಲ್ಲೇ ಶಾರುಖ್​ ಖಾನ್​ ಓಟಿಟಿಗೆ ಎಂಟ್ರಿ ನೀಡಲಿದ್ದಾರೆ!

ಇದು ಗಾಸಿಪ್​ ಅಲ್ಲ. ಸ್ವತಃ ಶಾರುಖ್​ ಖಾನ್​ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ತನ್ನ ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಲಕ್ಷಣವಾದ ವಿಡಿಯೋ ಹಂಚಿಕೊಂಡಿದೆ. ಅದರಲ್ಲಿ ಶಾರುಖ್​ ಖಾನ್​ ನಟಿಸಿದ್ದಾರೆ. ಆ ವಿಡಿಯೋದಲ್ಲಿ ಇರುವುದು ಸ್ವತಃ ಶಾರುಖ್​ ಅವರ ರಿಯಲ್​ ಲೈಫ್​ ಕಥೆ!

ವಿಡಿಯೋದಲ್ಲಿ ಅಂಥದ್ದು ಏನಿದೆ? ಶಾರುಖ್​ ಮನೆ ಮುಂದೆ ನೂರಾರು ಅಭಿಮಾನಿಗಳು ಜೈಕಾರ ಹಾಕುತ್ತಿದ್ದಾರೆ. ಅದನ್ನು ನೋಡಿ ಶಾರುಖ್​ ಹೆಮ್ಮೆ ಪಡುತ್ತಾರೆ. ಆದರೆ ಭವಿಷ್ಯದಲ್ಲೂ ಇಷ್ಟೇ ಅಭಿಮಾನ ಉಳಿದುಕೊಂಡಿರುತ್ತದೆ ಎಂಬುದು ಯಾಕೋ ಅನುಮಾನ ಎಂದು ಪಕ್ಕದಲ್ಲಿರುವ ವ್ಯಕ್ತಿ ಹೇಳುತ್ತಾರೆ. ಯಾಕೆ ಎಂದು ಕೇಳಿದ್ದಕ್ಕೆ, ‘ಅಜಯ್​ ದೇವಗನ್, ಅಕ್ಷಯ್ ಕುಮಾರ್​, ಸಂಜಯ್​ ದತ್​, ಸೈಫ್​ ಅಲಿ ಖಾನ್​ ಮುಂತಾದ ಸ್ಟಾರ್​ ನಟರ ಸಿನಿಮಾ ಮತ್ತು ವೆಬ್​ ಸಿರೀಸ್​ಗಳು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಇವೆ. ನಿಮ್ಮದು ಇಲ್ಲ’ ಎಂದು ಆ ವ್ಯಕ್ತಿ ಉತ್ತರಿಸುತ್ತಾರೆ.

ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿರುವ ಶಾರುಖ್​ ಖಾನ್​ ಅವರು ‘ಓಂ ಶಾಂತಿ ಓಂ’ ಚಿತ್ರದಲ್ಲಿ ಫೇಮಸ್​ ಆದ​ ‘ಪಿಕ್ಚರ್​ ಇನ್ನೂ ಬಾಕಿ ಇದೆ ನನ್ನ ಸ್ನೇಹಿತರೇ..’ ಎಂಬ ಡೈಲಾಗ್ಅನ್ನು ಕ್ಯಾಪ್ಷನ್​ ರೂಪದಲ್ಲಿ ನೀಡಿದ್ದಾರೆ. ಆ ಮೂಲಕ ಅವರು ಓಟಿಟಿಗೆ ಎಂಟ್ರಿ ನೀಡುತ್ತಾರೆ ಎಂಬುದು ಖಚಿತವಾಗಿದೆ. ಆದರೆ ಅದು ಸಿನಿಮಾ ಮೂಲಕವೋ ಅಥವಾ ವೆಬ್​ ಸಿರೀಸ್​ ಮೂಲಕವೋ ಎಂಬುದು ಸ್ಪಷ್ಟವಾಗಿಲ್ಲ. ಇದೇ ವಿಡಿಯೋವನ್ನು ಕರಣ್​ ಜೋಹರ್​ ಮುಂತಾದ ಬಾಲಿವುಡ್​ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ