ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ

ಶಾರುಖ್​ ಖಾನ್​ ಅವರ ಓಟಿಟಿ ಎಂಟ್ರಿಗೆ ಸಂಬಂಧಿಸಿದ ಒಂದು ವಿಡಿಯೋ ವೈರಲ್​ ಆಗಿದೆ. ಇದೇ ವಿಡಿಯೋವನ್ನು ಕರಣ್​ ಜೋಹರ್​ ಮುಂತಾದ ಬಾಲಿವುಡ್​ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ
ಶಾರುಖ್ ಖಾನ್
Follow us
| Updated By: ಮದನ್​ ಕುಮಾರ್​

Updated on: Sep 12, 2021 | 12:53 PM

ಬಾಲಿವುಡ್​ ನಟ ಶಾರುಖ್​ ಖಾನ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಆದರೂ ಕೂಡ ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗುತ್ತಿಲ್ಲ. ಮಾಡಿದ ಎಲ್ಲ ಸಿನಿಮಾಗಳೂ ಸಾಲು ಸಾಲಾಗಿ ಸೋಲು ಕಂಡಿವೆ. ಹಾಗಾಗಿ ‘ಜೀರೋ’ ಸಿನಿಮಾದ ಹೀನಾಯ ಸೋಲಿನ ಬಳಿಕ ಶಾರುಖ್​ ಬೇರೆ ಯಾವುದೇ ಚಿತ್ರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ನಡುವೆ ಅವರು ‘ಪಠಾಣ್​’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ತಮಿಳು ನಿರ್ದೇಶಕ ಅಟ್ಲಿ ಕುಮಾರ್​ ಜೊತೆಗೂ ಕೈ ಜೋಡಿಸಿರುವ ಬಗ್ಗೆ ಸುದ್ದಿ ಹರಿದಾಡಿತು. ಈಗ ಅದೆಲ್ಲವನ್ನೂ ಮೀರಿಸುವಂತಹ ಬ್ರೇಕಿಂಗ್​ ನ್ಯೂಸ್​ ಸಿಕ್ಕಿದೆ. ಶೀಘ್ರದಲ್ಲೇ ಶಾರುಖ್​ ಖಾನ್​ ಓಟಿಟಿಗೆ ಎಂಟ್ರಿ ನೀಡಲಿದ್ದಾರೆ!

ಇದು ಗಾಸಿಪ್​ ಅಲ್ಲ. ಸ್ವತಃ ಶಾರುಖ್​ ಖಾನ್​ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ತನ್ನ ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಲಕ್ಷಣವಾದ ವಿಡಿಯೋ ಹಂಚಿಕೊಂಡಿದೆ. ಅದರಲ್ಲಿ ಶಾರುಖ್​ ಖಾನ್​ ನಟಿಸಿದ್ದಾರೆ. ಆ ವಿಡಿಯೋದಲ್ಲಿ ಇರುವುದು ಸ್ವತಃ ಶಾರುಖ್​ ಅವರ ರಿಯಲ್​ ಲೈಫ್​ ಕಥೆ!

ವಿಡಿಯೋದಲ್ಲಿ ಅಂಥದ್ದು ಏನಿದೆ? ಶಾರುಖ್​ ಮನೆ ಮುಂದೆ ನೂರಾರು ಅಭಿಮಾನಿಗಳು ಜೈಕಾರ ಹಾಕುತ್ತಿದ್ದಾರೆ. ಅದನ್ನು ನೋಡಿ ಶಾರುಖ್​ ಹೆಮ್ಮೆ ಪಡುತ್ತಾರೆ. ಆದರೆ ಭವಿಷ್ಯದಲ್ಲೂ ಇಷ್ಟೇ ಅಭಿಮಾನ ಉಳಿದುಕೊಂಡಿರುತ್ತದೆ ಎಂಬುದು ಯಾಕೋ ಅನುಮಾನ ಎಂದು ಪಕ್ಕದಲ್ಲಿರುವ ವ್ಯಕ್ತಿ ಹೇಳುತ್ತಾರೆ. ಯಾಕೆ ಎಂದು ಕೇಳಿದ್ದಕ್ಕೆ, ‘ಅಜಯ್​ ದೇವಗನ್, ಅಕ್ಷಯ್ ಕುಮಾರ್​, ಸಂಜಯ್​ ದತ್​, ಸೈಫ್​ ಅಲಿ ಖಾನ್​ ಮುಂತಾದ ಸ್ಟಾರ್​ ನಟರ ಸಿನಿಮಾ ಮತ್ತು ವೆಬ್​ ಸಿರೀಸ್​ಗಳು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಇವೆ. ನಿಮ್ಮದು ಇಲ್ಲ’ ಎಂದು ಆ ವ್ಯಕ್ತಿ ಉತ್ತರಿಸುತ್ತಾರೆ.

ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿರುವ ಶಾರುಖ್​ ಖಾನ್​ ಅವರು ‘ಓಂ ಶಾಂತಿ ಓಂ’ ಚಿತ್ರದಲ್ಲಿ ಫೇಮಸ್​ ಆದ​ ‘ಪಿಕ್ಚರ್​ ಇನ್ನೂ ಬಾಕಿ ಇದೆ ನನ್ನ ಸ್ನೇಹಿತರೇ..’ ಎಂಬ ಡೈಲಾಗ್ಅನ್ನು ಕ್ಯಾಪ್ಷನ್​ ರೂಪದಲ್ಲಿ ನೀಡಿದ್ದಾರೆ. ಆ ಮೂಲಕ ಅವರು ಓಟಿಟಿಗೆ ಎಂಟ್ರಿ ನೀಡುತ್ತಾರೆ ಎಂಬುದು ಖಚಿತವಾಗಿದೆ. ಆದರೆ ಅದು ಸಿನಿಮಾ ಮೂಲಕವೋ ಅಥವಾ ವೆಬ್​ ಸಿರೀಸ್​ ಮೂಲಕವೋ ಎಂಬುದು ಸ್ಪಷ್ಟವಾಗಿಲ್ಲ. ಇದೇ ವಿಡಿಯೋವನ್ನು ಕರಣ್​ ಜೋಹರ್​ ಮುಂತಾದ ಬಾಲಿವುಡ್​ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು