Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ

ಶಾರುಖ್​ ಖಾನ್​ ಅವರ ಓಟಿಟಿ ಎಂಟ್ರಿಗೆ ಸಂಬಂಧಿಸಿದ ಒಂದು ವಿಡಿಯೋ ವೈರಲ್​ ಆಗಿದೆ. ಇದೇ ವಿಡಿಯೋವನ್ನು ಕರಣ್​ ಜೋಹರ್​ ಮುಂತಾದ ಬಾಲಿವುಡ್​ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 12, 2021 | 12:53 PM

ಬಾಲಿವುಡ್​ ನಟ ಶಾರುಖ್​ ಖಾನ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಆದರೂ ಕೂಡ ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗುತ್ತಿಲ್ಲ. ಮಾಡಿದ ಎಲ್ಲ ಸಿನಿಮಾಗಳೂ ಸಾಲು ಸಾಲಾಗಿ ಸೋಲು ಕಂಡಿವೆ. ಹಾಗಾಗಿ ‘ಜೀರೋ’ ಸಿನಿಮಾದ ಹೀನಾಯ ಸೋಲಿನ ಬಳಿಕ ಶಾರುಖ್​ ಬೇರೆ ಯಾವುದೇ ಚಿತ್ರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ನಡುವೆ ಅವರು ‘ಪಠಾಣ್​’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ತಮಿಳು ನಿರ್ದೇಶಕ ಅಟ್ಲಿ ಕುಮಾರ್​ ಜೊತೆಗೂ ಕೈ ಜೋಡಿಸಿರುವ ಬಗ್ಗೆ ಸುದ್ದಿ ಹರಿದಾಡಿತು. ಈಗ ಅದೆಲ್ಲವನ್ನೂ ಮೀರಿಸುವಂತಹ ಬ್ರೇಕಿಂಗ್​ ನ್ಯೂಸ್​ ಸಿಕ್ಕಿದೆ. ಶೀಘ್ರದಲ್ಲೇ ಶಾರುಖ್​ ಖಾನ್​ ಓಟಿಟಿಗೆ ಎಂಟ್ರಿ ನೀಡಲಿದ್ದಾರೆ!

ಇದು ಗಾಸಿಪ್​ ಅಲ್ಲ. ಸ್ವತಃ ಶಾರುಖ್​ ಖಾನ್​ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ತನ್ನ ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಲಕ್ಷಣವಾದ ವಿಡಿಯೋ ಹಂಚಿಕೊಂಡಿದೆ. ಅದರಲ್ಲಿ ಶಾರುಖ್​ ಖಾನ್​ ನಟಿಸಿದ್ದಾರೆ. ಆ ವಿಡಿಯೋದಲ್ಲಿ ಇರುವುದು ಸ್ವತಃ ಶಾರುಖ್​ ಅವರ ರಿಯಲ್​ ಲೈಫ್​ ಕಥೆ!

ವಿಡಿಯೋದಲ್ಲಿ ಅಂಥದ್ದು ಏನಿದೆ? ಶಾರುಖ್​ ಮನೆ ಮುಂದೆ ನೂರಾರು ಅಭಿಮಾನಿಗಳು ಜೈಕಾರ ಹಾಕುತ್ತಿದ್ದಾರೆ. ಅದನ್ನು ನೋಡಿ ಶಾರುಖ್​ ಹೆಮ್ಮೆ ಪಡುತ್ತಾರೆ. ಆದರೆ ಭವಿಷ್ಯದಲ್ಲೂ ಇಷ್ಟೇ ಅಭಿಮಾನ ಉಳಿದುಕೊಂಡಿರುತ್ತದೆ ಎಂಬುದು ಯಾಕೋ ಅನುಮಾನ ಎಂದು ಪಕ್ಕದಲ್ಲಿರುವ ವ್ಯಕ್ತಿ ಹೇಳುತ್ತಾರೆ. ಯಾಕೆ ಎಂದು ಕೇಳಿದ್ದಕ್ಕೆ, ‘ಅಜಯ್​ ದೇವಗನ್, ಅಕ್ಷಯ್ ಕುಮಾರ್​, ಸಂಜಯ್​ ದತ್​, ಸೈಫ್​ ಅಲಿ ಖಾನ್​ ಮುಂತಾದ ಸ್ಟಾರ್​ ನಟರ ಸಿನಿಮಾ ಮತ್ತು ವೆಬ್​ ಸಿರೀಸ್​ಗಳು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಇವೆ. ನಿಮ್ಮದು ಇಲ್ಲ’ ಎಂದು ಆ ವ್ಯಕ್ತಿ ಉತ್ತರಿಸುತ್ತಾರೆ.

ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿರುವ ಶಾರುಖ್​ ಖಾನ್​ ಅವರು ‘ಓಂ ಶಾಂತಿ ಓಂ’ ಚಿತ್ರದಲ್ಲಿ ಫೇಮಸ್​ ಆದ​ ‘ಪಿಕ್ಚರ್​ ಇನ್ನೂ ಬಾಕಿ ಇದೆ ನನ್ನ ಸ್ನೇಹಿತರೇ..’ ಎಂಬ ಡೈಲಾಗ್ಅನ್ನು ಕ್ಯಾಪ್ಷನ್​ ರೂಪದಲ್ಲಿ ನೀಡಿದ್ದಾರೆ. ಆ ಮೂಲಕ ಅವರು ಓಟಿಟಿಗೆ ಎಂಟ್ರಿ ನೀಡುತ್ತಾರೆ ಎಂಬುದು ಖಚಿತವಾಗಿದೆ. ಆದರೆ ಅದು ಸಿನಿಮಾ ಮೂಲಕವೋ ಅಥವಾ ವೆಬ್​ ಸಿರೀಸ್​ ಮೂಲಕವೋ ಎಂಬುದು ಸ್ಪಷ್ಟವಾಗಿಲ್ಲ. ಇದೇ ವಿಡಿಯೋವನ್ನು ಕರಣ್​ ಜೋಹರ್​ ಮುಂತಾದ ಬಾಲಿವುಡ್​ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್