AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೋಧ’ ವೆಬ್ ಸರಣಿಯಲ್ಲಿ ಪವನ್ ಕುಮಾರ್ ನಟನೆ: ಜೀ5 ಜತೆ ಕೈ ಜೋಡಿಸಿದ ಕೆಆರ್​ಜಿ

‘ಲೂಸಿಯಾ’, ‘ಯು-ಟರ್ನ್’ ಸಿನಿಮಾಗಳ ನಿರ್ದೇಶಕ ಪವನ್ ಕುಮಾರ್ ಅವರು ನಟನಾಗಿಯೂ ಬೇಡಿಕೆ ಹೊಂದಿದ್ದಾರೆ. ಈಗಾಗಲೇ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ‘ಶೋಧ’ ವೆಬ್ ಸರಣಿಯಲ್ಲಿ ಬಣ್ಣ ಹಚ್ಚಿದ್ದಾರೆ. ‘ಕೆಆರ್​ಜಿ ಸ್ಟುಡಿಯೋಸ್’ ನಿರ್ಮಾಣ ಮಾಡಿರುವ ‘ಶೋಧ’ ವೆಬ್ ಸರಣಿಯು ‘ಜೀ5’ ಒಟಿಟಿ ಮೂಲಕ ಪ್ರಸಾರ ಆಗಲಿದೆ.

‘ಶೋಧ’ ವೆಬ್ ಸರಣಿಯಲ್ಲಿ ಪವನ್ ಕುಮಾರ್ ನಟನೆ: ಜೀ5 ಜತೆ ಕೈ ಜೋಡಿಸಿದ ಕೆಆರ್​ಜಿ
Pawan Kumar
ಮದನ್​ ಕುಮಾರ್​
| Edited By: |

Updated on:Aug 07, 2025 | 10:47 AM

Share

‘ಕೆಆರ್​ಜಿ ಸ್ಟುಡಿಯೋಸ್’ ಮೂಲಕ ನಿರ್ಮಾಪಕರಾದ ಕಾರ್ತಿಕ್ ಗೌಡ ಮತ್ತು ಯೋಗಿ ಜಿ. ರಾಜ್ ಅವರು ಆ್ಯಕ್ಟೀವ್ ಆಗಿದ್ದಾರೆ. ಕಡಿಮೆ ಅವಧಿಯಲ್ಲಿಯೇ ಸಿನಿಮಾ ನಿರ್ಮಾಣ ಮತ್ತು ಸಿನಿಮಾ ವಿತರಣೆ ವಿಭಾಗದಲ್ಲಿ ‘ಕೆಆರ್​ಜಿ ಸ್ಟುಡಿಯೋಸ್’ (KRG Studios) ಸಂಸ್ಥೆ ಗುರುತಿಸಿಕೊಂಡಿದೆ. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸುತ್ತಿರುವ ಈ ಸಂಸ್ಥೆ ಈಗ ಹೊಸದೊಂದು ಹೆಜ್ಜೆ ಇಟ್ಟಿದೆ. ಸಿನಿಮಾ ನಿರ್ಮಾಣ ಮತ್ತು ವಿತರಣೆ ಬಳಿಕ ವೆಬ್ ಸಿರೀಸ್ ನಿರ್ಮಾಣಕ್ಕೂ ‘ಕೆಆರ್​ಜಿ ಸ್ಟುಡಿಯೋಸ್’ ಕಾಲಿಟ್ಟಿದೆ. ‘ಜೀ5’ (Zee5) ಜೊತೆ ಕೈಜೋಡಿಸಿ ‘ಶೋಧ’ ವೆಬ್ ಸರಣಿ (Shodha Web Series) ನಿರ್ಮಾಣ ಮಾಡಿದೆ.

‘ಶೋಧ’ ವೆಬ್ ಸಿರೀಸ್​ಗೆ ‘ಕೆಆರ್​ಜಿ ಸ್ಟುಡಿಯೋಸ್’ ಬಂಡವಾಳ ಹೂಡಿದೆ. ಈ ವೆಬ್ ಸರಣಿಗೆ ಸುನಿಲ್ ಮೈಸೂರು ಅವರು ನಿರ್ದೇಶನ ಮಾಡಿದ್ದಾರೆ. ಇದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಮನಸಾರೆ, ಪಂಚರಂಗಿ, ಲೈಫು ಇಷ್ಟೇನೆ, ಲೂಸಿಯಾ ಮುಂತಾದ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಪವನ್ ಕುಮಾರ್ ಅವರು ‘ಶೋಧ’ ವೆಬ್ ಸರಣಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಿರ್ದೇಶಕನಾಗಿ ಹೆಚ್ಚು ಖ್ಯಾತಿ ಗಳಿಸಿರುವ ಪವನ್ ಕುಮಾರ್ ಅವರು ಉತ್ತಮ ನಟ ಕೂಡ ಹೌದು. ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ‘ಶೋಧ’ ವೆಬ್ ಸರಣಿ ಬಗ್ಗೆ ಮಾತನಾಡಿರುವ ಅವರು, ‘ಇದರಲ್ಲಿ ನಟಿಸುವುದು ನನಗೆ ಸಂಪೂರ್ಣವಾಗಿ ಹೊಸ ಅನುಭವ ಆಗಿತ್ತು’ ಎಂದ್ದಿದಾರೆ. ಈ ವೆಬ್ ಸರಣಿಯ ಫಸ್ಟ್ ಲುಕ್ ಪೋಸ್ಟರ್ ಗಮನ ಸೆಳೆಯುತ್ತಿದೆ.

‘ಮೊಟ್ಟ ಮೊದಲ ಬಾರಿಗೆ ಸಖತ್‌ ಸಸ್ಪೆನ್ಸ್‌ ಥ್ರಿಲ್ಲರ್‌ ವೆಬ್‌ ಸೀರೀಸ್ ‘ಶೋಧ’ದಲ್ಲಿ ರೋಹಿತ್‌ ಎಂಬ ಪಾತ್ರದ ಮೂಲಕ ನಿಮ್ಮ ಮುಂದೆ ಬರ್ತಿದ್ದಾರೆ ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಪವನ್ ಕುಮಾರ್’ ಎಂಬ ಕ್ಯಾಪ್ಷನ್​ನೊಂದಿಗೆ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಆಗಸ್ಟ್ 22ರಿಂದ ಜೀ5 ಒಟಿಟಿಯಲ್ಲಿ ‘ಶೋಧ’ ವೆಬ್ ಸಿರೀಸ್ ವೀಕ್ಷಣೆಗೆ ಲಭ್ಯವಾಗಲಿದೆ.

ಇದನ್ನೂ ಓದಿ: ಸಿನಿಮಾ ಆಗುತ್ತಿದೆ ಮತ್ತೊಂದು ಜನಪ್ರಿಯ ವೆಬ್ ಸರಣಿ, ಹೃತಿಕ್ ರೋಷನ್ ವಿಲನ್?

ಕನ್ನಡದಲ್ಲಿ ವೆಬ್ ಸಿರೀಸ್​​ಗಳ ಸಂಖ್ಯೆ ಕಡಿಮೆ. ಈ ಮೊದಲು ‘ಜೀ5’ ಒಟಿಟಿಯಲ್ಲಿ ಬಿಡುಗಡೆ ಆದ ‘ಅಯ್ಯನ‌ ಮನೆ’ ಸೂಪರ್ ಸಕ್ಸಸ್ ಕಂಡಿತ್ತು. ಅದರ ಯಶಸ್ಸಿನ ನಂತರ ಬರುತ್ತಿರುವ ಮತ್ತೊಂದು ವೆಬ್ ಸರಣಿಯೇ ‘ಶೋಧ’. ‘ಅಯ್ಯನ ಮನೆ’ ರೀತಿಯೇ ‘ಶೋಧ’ ಕೂಡ ಜನಮೆಚ್ಚುಗೆ ಪಡೆಯಲಿದೆ ಎಂಬ ಭರವಸೆ ಈ ತಂಡಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:08 pm, Wed, 6 August 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು