AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೂಟ್​ ಸೆಲೆಕ್ಟ್ ಒಟಿಟಿಯಲ್ಲಿ ‘ಪೆಟ್ರೋಮ್ಯಾಕ್ಸ್​’ ಕಾಮಿಡಿ ಕಚಗುಳಿ; ಆಗಸ್ಟ್​ 26ರಿಂದ ಪ್ರಸಾರ

Petromax | Voot Select: ಹೊಸ ಹೊಸ ಕನ್ನಡ ಸಿನಿಮಾಗಳು ‘ವೂಟ್​ ಸೆಲೆಕ್ಟ್’ ಮೂಲಕ ಜನರನ್ನು ತಲುಪುತ್ತಿವೆ. ಆ ಸಾಲಿಗೆ ‘ಪೆಟ್ರೋಮ್ಯಾಕ್ಸ್​’ ಸೇರ್ಪಡೆ ಆಗುತ್ತಿದೆ.

ವೂಟ್​ ಸೆಲೆಕ್ಟ್ ಒಟಿಟಿಯಲ್ಲಿ ‘ಪೆಟ್ರೋಮ್ಯಾಕ್ಸ್​’ ಕಾಮಿಡಿ ಕಚಗುಳಿ; ಆಗಸ್ಟ್​ 26ರಿಂದ ಪ್ರಸಾರ
ಹರಿಪ್ರಿಯಾ. ಸತೀಶ್​ ನೀನಾಸಂ
TV9 Web
| Edited By: |

Updated on: Aug 25, 2022 | 3:14 PM

Share

ಟ್ರೇಲರ್​ ಮೂಲಕ ‘ಪೆಟ್ರೋಮ್ಯಾಕ್ಸ್​’ ಸಿನಿಮಾ (Petromax Kannada Movie) ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿತ್ತು. ಜುಲೈ 15ರಂದು ಥಿಯೇಟರ್​ನಲ್ಲಿ ರಿಲೀಸ್​ ಆದ ಈ ಸಿನಿಮಾ ಈಗ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿದೆ. ವೂಟ್​ ಸೆಲೆಕ್ಟ್​ (Voot Select) ಮೂಲಕ ಈ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ. ಆಗಸ್ಟ್​ 26ರಿಂದ ‘ಪೆಟ್ರೋಮ್ಯಾಕ್ಸ್​’ ಚಿತ್ರದ ಸ್ಟ್ರೀಮಿಂಗ್​ ಆರಂಭ ಆಗಲಿದೆ. ಈ ಚಿತ್ರಕ್ಕೆ ‘ನೀರ್​ ದೋಸೆ’ ಖ್ಯಾತಿಯ ವಿಜಯ್​ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಸುಧೀರ್ ಕೆ.ಎಂ. ಮತ್ತು ರಾಜಶೇಖರ್ ಕೆ.ಜಿ. ಬಂಡವಾಳ ಹೂಡಿದ್ದಾರೆ. ಸತೀಶ್ ನೀನಾಸಂ (Sathish Ninasam), ಹರಿಪ್ರಿಯಾ, ನಾಗಭೂಷಣ್, ಕಾರುಣ್ಯ ರಾಮ್​, ಅಚ್ಯುತ್ ಕುಮಾರ್, ಸುಮನ್ ರಂಗನಾಥನ್, ಅರುಣ್ ಕುಮಾರ್ ಮುಂತಾದವರು ನಟಿಸಿರುವ ಈ ಚಿತ್ರ ಪಕ್ಕಾ ಕಾಮಿಡಿ ಕಚಗುಳಿ ನೀಡುತ್ತದೆ. ಅಡಲ್ಟ್​ ಕಾಮಿಡಿ ವಿಚಾರಗಳು ‘ಪೆಟ್ರೋಮ್ಯಾಕ್ಸ್​’ ಸಿನಿಮಾದಲ್ಲಿ ಇದ್ದರೂ ಕೂಡ ಕೌಟುಂಬಿಕ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.

‘ಪೆಟ್ರೋಮ್ಯಾಕ್ಸ್’ ಸಿನಿಮಾದಲ್ಲಿ ನಾಲ್ವರು ಅನಾಥರ ಪಾತ್ರ ಹೈಲೈಟ್​ ಆಗಿದೆ. ಬಾಲ್ಯದಿಂದಲೂ ಅನಾಥಾಶ್ರಮದಲ್ಲಿ ಬೆಳೆದ ಈ ನಾಲ್ವರು ಪೋಷಕರಿಂದ ಕಾಳಜಿ ಮತ್ತು ಸಹಾನುಭೂತಿಯನ್ನು ಪಡೆಯಲು ಹಾತೊರೆಯುತ್ತಾರೆ. ಮುಂದೇನಾಗುತ್ತದೆ ಎಂಬುದನ್ನು ಸಿನಿಮಾ ನೋಡಿ ತಿಳಿಯಬೇಕು. ಚಿತ್ರಮಂದಿರದಲ್ಲಿ ಮಿಸ್​ ಮಾಡಿಕೊಂಡವರು ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು.

ಒಟಿಟಿಯಲ್ಲಿ ‘ಪೆಟ್ರೋಮ್ಯಾಕ್ಸ್​’ ಪ್ರಸಾರ ಆಗುತ್ತಿರುವುದಕ್ಕೆ ನಟ ನೀನಾಸಂ ಸತೀಶ್​ ಖುಷಿ ವ್ಯಕ್ತಪಡಿಸಿದ್ದಾರೆ. ‘ನನ್ನ ಪಾಲಿಗೆ ಪೆಟ್ರೋಮ್ಯಾಕ್ಸ್ ಒಂದು ವಿಶೇಷ ಚಿತ್ರ. ತುಂಬ ಸರಳವಾದ ರೀತಿಯಲ್ಲಿ ಕಥೆಯನ್ನು ಹೆಣೆಯಲಾಗಿದೆ. ಮನುಷ್ಯನ ದೈನಂದಿನ ಜೀವನದ ಸಂಕೀರ್ಣತೆ ಜತೆಗೆ ಭಾವನಾತ್ಮಕ ಅಂಶಗಳನ್ನು ವಿನೋದಮಯವಾಗಿ ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಈ ಚಿತ್ರವು ಪ್ರತಿಯೊಂದು ದೃಶ್ಯದಲ್ಲಿಯೂ ನನ್ನ ಮಿತಿಗಳನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ವೂಟ್ ಸೆಲೆಕ್ಟ್ ಮೂಲಕ ವೀಕ್ಷಿಸಲು ನಾನು ಉತ್ಸುಕನಾಗಿದ್ದೇನೆ’ ಎಂದು ಸತೀಶ್​ ಹೇಳಿದ್ದಾರೆ.

ಇದನ್ನೂ ಓದಿ
Image
Vikrant Rona: ಒಟಿಟಿಗೆ ಎಂಟ್ರಿ ನೀಡಲು ಸಜ್ಜಾದ ‘ವಿಕ್ರಾಂತ್​ ರೋಣ’; ಜೀ5 ಕಡೆಯಿಂದ ಸಿಕ್ತು ಅಪ್​ಡೇಟ್​
Image
777 Charlie OTT: ಒಟಿಟಿಗೆ ಎಂಟ್ರಿ ಕೊಟ್ಟ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’; ಜುಲೈ 29ರಿಂದ ವೂಟ್​ ಸೆಲೆಕ್ಟ್​ನಲ್ಲಿ ಪ್ರಸಾರ
Image
‘ವೂಟ್ ಸೆಲೆಕ್ಟ್​’ ಮೂಲಕ ನೇರವಾಗಿ ರಿಲೀಸ್​ ಆಗಲಿದೆ ‘ಡಿಯರ್​ ವಿಕ್ರಮ್​’; ಗಮನ ಸೆಳೆದ ಟ್ರೇಲರ್​
Image
ಪೊಲೀಸ್​ ಆಫೀಸರ್​​ ಆಗಿ ಬರ್ತಿದ್ದಾರೆ ದಾನಿಶ್ ಸೇಠ್; ವೂಟ್​ನಲ್ಲಿ ರಿಲೀಸ್ ಆಗ್ತಿದೆ ‘ಸೋಲ್ಡ್’

ವಾಸ್ತವ ಜೀವನದಲ್ಲಿ ನಡೆಯುತ್ತಿರುವ ಸಾಮಾಜಿಕ ಸಮಸ್ಯೆಗಳ ಸುತ್ತ ಈ ಚಿತ್ರದ ಕಥೆಯನ್ನು ಹೆಣೆದಿರುವುದಾಗಿ ನಿರ್ದೇಶಕ ವಿಜಯ್​ ಪ್ರಸಾದ್ ಹೇಳಿದ್ದಾರೆ. ‘ಆಧುನಿಕ ಮತ್ತು ಸಾಂಪ್ರದಾಯಿಕ ಜೀವನವು ತಡೆರಹಿತ ರೀತಿಯಲ್ಲಿ ಸಹಬಾಳ್ವೆ ನಡೆಸುವ ಸಾಧ್ಯತೆಯನ್ನು ಈ ಸಿನಿಮಾ ತೋರಿಸುತ್ತದೆ. ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿರುವುದರಿಂದ ವಿಭಿನ್ನವಾದ ವಿಮರ್ಶೆಗಳು ಮತ್ತು ಗ್ರಹಿಕೆಗಳನ್ನು ತಿಳಿಯಲು ಇದು ನಮಗೆ ಸಹಾಯ ಮಾಡುತ್ತದೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ದಿನದಿಂದ ದಿನಕ್ಕೆ ಒಟಿಟಿ ವ್ಯಾಪ್ತಿ ಹೆಚ್ಚುತ್ತಿದೆ. ಎಲ್ಲ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ವೂಟ್​ ಸೆಲೆಕ್ಟ್​ ಕೂಡ ಹೊಸ ಹೊಸ ಕನ್ನಡ ಸಿನಿಮಾಗಳನ್ನು ಜನರಿಗೆ ತಲುಪಿಸುತ್ತಿದೆ. ಆ ಸಾಲಿಗೆ ‘ಪೆಟ್ರೋಮ್ಯಾಕ್ಸ್​’ ಸೇರ್ಪಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ